AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಬ್ಬರಿ ಬೆಳೆಗಾರರ ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರ: ಪ್ರತಿ ಕ್ವಿಂಟಾಲ್‌ಗೆ 11,750 ರೂ. ಬೆಂಬಲ ಬೆಲೆ ನಿಗದಿ

ನಾಪೇಡ್ ಕೇಂದ್ರದ ಮೂಲಕ ರೈತರ ಉಂಡೆ ಕೊಬ್ಬರಿ ಖರೀದಿ ಮಾಡಲು ಸರ್ಕಾರ ಆದೇಶಿಸಿದ್ದು, ಆ ಮೂಲಕ ಕೊಬ್ಬರಿ ಬೆಳೆಗಾರರ ಬೆಂಬಲಕ್ಕೆ ಕೇಂದ್ರ ಸರ್ಕಾರ ನಿಂತಿದೆ.

ಕೊಬ್ಬರಿ ಬೆಳೆಗಾರರ ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರ: ಪ್ರತಿ ಕ್ವಿಂಟಾಲ್‌ಗೆ 11,750 ರೂ. ಬೆಂಬಲ ಬೆಲೆ ನಿಗದಿ
ಪ್ರಾತಿನಿಧಿಕ ಚಿತ್ರImage Credit source: prajavani.net
TV9 Web
| Edited By: |

Updated on:Jan 27, 2023 | 11:23 PM

Share

ತುಮಕೂರು: ನಾಪೇಡ್ ಕೇಂದ್ರದ ಮೂಲಕ ರೈತರ ಉಂಡೆ ಕೊಬ್ಬರಿ (coconut) ಖರೀದಿ ಮಾಡಲು ಸರ್ಕಾರ ಆದೇಶಿಸಿದ್ದು, ಆ ಮೂಲಕ ಕೊಬ್ಬರಿ ಬೆಳೆಗಾರರ ಬೆಂಬಲಕ್ಕೆ ಕೇಂದ್ರ ಸರ್ಕಾರ ನಿಂತಿದೆ. ಪ್ರತಿ ಕ್ವಿಂಟಾಲ್​ಗೆ 11.750 ರೂ. ಬೆಂಬಲ ಬೆಲೆ ನೀಡಿ ಖರೀದಿಸಲು ಸರ್ಕಾರ ಮುಂದಾಗಿದೆ. ಕೊಬ್ಬರಿ ಬೆಲೆ 10 ಸಾವಿರ ರೂ. ಗೆ ಕುಸಿದಿದ್ದರಿಂದ ಬೆಂಬಲ ಬೆಲೆ ಘೋಷಿಸುವಂತೆ ರೈತರು ಒತ್ತಾಯಿಸಿದ್ದರು. ಬೆಂಬಲ ಬೆಲೆ ನೀಡಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಸುವುದಾಗಿ ತಿಪಟೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟಿದ್ದರು. 6 ತಿಂಗಳ ಕಾಲ 54,750 ಮೆಟ್ರಿಕ್ ಟನ್ ಕೊಬ್ಬರಿ ರೈತರಿಂದ ಖರೀದಿ ಮಾಡಲು ಸರ್ಕಾರ ಕ್ರಮಕೈಗೊಂಡಿದೆ.

ತೆಂಗು ಬೆಳೆಗಾರರಲ್ಲಿ ತೀರ್ವ ಆತಂಕ

ಕಳೆದ ವರ್ಷ ಕ್ವಿಂಟಲ್​​ಗೆ 18 ಸಾವಿರ ರೂ. ಇದ್ದ ಕೊಬ್ಬರಿ ಬೆಲೆ, ಇತ್ತೀಚೆಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆಗಿಂತ ತೀವ್ರ ಕುಸಿತ ಉಂಟಾಗಿ ತೆಂಗು ಬೆಳೆಗಾರರಲ್ಲಿ ತೀರ್ವ ಆತಂಕ ಉಂಟು ಮಾಡಿತ್ತು. ಇತ್ತೀಚೆಗೆ ಕ್ವಿಂಟಲ್​ ಕೊಬ್ಬರಿ ಬೆಲೆ 18 ಸಾವಿರವರೆಗಿದ್ದು, ಬೆಳೆಗಾರರು ಒಂದು ರೀತಿಯಲ್ಲಿ ನೆಮ್ಮದಿ ಆಗಿದ್ದರು. ಆದರೆ ಕಳೆದ 4-5 ತಿಂಗಳಿಂದ ಕೊಬ್ಬರಿ ಬೆಲೆಯಲ್ಲಿ ಇಳಿಮುಖವಾಗಿ 13 ಸಾವಿರ ರೂ. ಗೆ ಬಂದಿತ್ತು. ಮತ್ತೆ ಕೆಲ ಒಂದೆರಡು ತಿಂಗಳಿಂದ ಕೊಬ್ಬರಿ ಬೆಲೆ ಕುಸಿಯುತ್ತಲೇ ಬಂದಿದ್ದು, ಕನಿಷ್ಠ ದರ 10, 200ಕ್ಕೆ ಬಂದಿತ್ತು. ಇದು ವರ್ತಕರು ಹಾಗೂ ತೆಂಗು ಬೆಳೆಗಾರರಲ್ಲಿ ತೀವ್ರ ಆತಂಕಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Wheat Price: ಗೋಧಿ ದರ ಭಾರೀ ಏರಿಕೆ, ನಿಯಂತ್ರಿಸಲು ಸರ್ಕಾರ ಸಾಹಸ

ಕೇಂದ್ರ ಸರ್ಕಾರ ಕೊಬ್ಬರಿ ಬೆಂಬಲ ಬೆಲೆಯನ್ನು 11 ಸಾವಿರಕ್ಕೆ ಈ ಹಿಂದೆ ನಿಗದಿಪಡಿಸಿತ್ತು. ಕಳೆದ ಕೆಲ ದಿನಗಳಿಂದ ಈ ಬೆಲೆಯನ್ನು 11, 750 ರೂ. ಏರಿಸಿದ್ದರೂ. ಆದರೆ ಇದು ಸರ್ಕಾರ ಆದೇಶವಾಗಿ ಇನ್ನು ಕಾರ್ಯರೂಪಕ್ಕೆ ಬಂದಿರಲಿಲ್ಲ. ಸದ್ಯ ಕೇಂದ್ರ ಸರ್ಕಾರ ಬೆಂಬಲ ಬೆಲೆಯನ್ನು ಘೋಷಿಸಿದ್ದು, ಇದು ತೆಂಗು ಬೆಳೆಗಾರರಿಗೆ ಖುಷಿ ತಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   

Published On - 10:56 pm, Fri, 27 January 23

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು