AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ತಪ್ಪಿಸಿ 6 ಕಡೆ ಬಾಲ್ಯ ವಿವಾಹ ಯತ್ನ, ಇಲಾಖೆ ದಾಳಿಯಿಂದ ಮಕ್ಕಳೆಲ್ಲ ಬಚಾವ್

ತುಮಕೂರು: ಲಾಕ್​ಡೌನ್ ವೇಳೆಯಲ್ಲೂ ದುರುಳರು ಮಕ್ಕಳ ಮೇಲಿನ ದೌರ್ಜನ್ಯ ನಡೆಸಿರೋದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯಲ್ಲಿ 12 ಮಕ್ಕಳ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಇನ್ನು ವಿಷಯ ತಿಳಿದ ತಕ್ಷಣ ಅಧಿಕಾರಿಗಳು ಪೊಲೀಸರ ಸಹಕಾರದಿಂದ ದುರುಳರ ಹೆಡೆಮುರಿಕಟ್ಟಿದ್ದಾರೆ. ಅಲ್ಲದೆ ಮಕ್ಕಳನ್ನು ದೌರ್ಜನ್ಯದಿಂದ ಪಾರು ಮಾಡಿದ್ದಾರೆ. ಜಿಲ್ಲೆಯ ವಿವಿಧೆಡೆ ಆರು ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಬಾಲ್ಯ ವಿವಾಹಗಳು ನಡೆಯುತ್ತಿರೋ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮದುವೆ ಎಂಬ […]

ಕಣ್ತಪ್ಪಿಸಿ 6 ಕಡೆ ಬಾಲ್ಯ ವಿವಾಹ ಯತ್ನ, ಇಲಾಖೆ ದಾಳಿಯಿಂದ ಮಕ್ಕಳೆಲ್ಲ ಬಚಾವ್
ಆಯೇಷಾ ಬಾನು
|

Updated on:Jun 11, 2020 | 4:18 PM

Share

ತುಮಕೂರು: ಲಾಕ್​ಡೌನ್ ವೇಳೆಯಲ್ಲೂ ದುರುಳರು ಮಕ್ಕಳ ಮೇಲಿನ ದೌರ್ಜನ್ಯ ನಡೆಸಿರೋದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯಲ್ಲಿ 12 ಮಕ್ಕಳ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಇನ್ನು ವಿಷಯ ತಿಳಿದ ತಕ್ಷಣ ಅಧಿಕಾರಿಗಳು ಪೊಲೀಸರ ಸಹಕಾರದಿಂದ ದುರುಳರ ಹೆಡೆಮುರಿಕಟ್ಟಿದ್ದಾರೆ. ಅಲ್ಲದೆ ಮಕ್ಕಳನ್ನು ದೌರ್ಜನ್ಯದಿಂದ ಪಾರು ಮಾಡಿದ್ದಾರೆ.

ಜಿಲ್ಲೆಯ ವಿವಿಧೆಡೆ ಆರು ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಬಾಲ್ಯ ವಿವಾಹಗಳು ನಡೆಯುತ್ತಿರೋ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮದುವೆ ಎಂಬ ಬಂಧನಕ್ಕೆ ಒಳಗಾಗುತ್ತಿದ್ದ ಬಾಲಕಿಯರನ್ನು ಪಾರು ಮಾಡಿದ್ದಾರೆ. ಆರು ಮಂದಿ ಬಾಲಕಿಯರ ಪೋಷಕರಿಗೆ ಕೌನ್ಸಲಿಂಗ್ ನಡೆಸಿ ಮದುವೆ ಮಾಡದಂತೆ ಮನಪರಿವರ್ತನೆ ಮಾಡಲಾಗಿದೆ.

ಅಲ್ಲದೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಲ್ಲಾ ಬಾಲಕಿಯರು 16 ವರ್ಷ ವಯೋಮಾನದವರಾಗಿದ್ದಾರೆ ಗುಬ್ಬಿ, ತುರುವೇಕೆರೆ, ಕುಣಿಗಲ್, ಪಾವಗಡ, ಶಿರಾ ತಾಲೂಕುಗಳಲ್ಲಿ ಈ ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಇನ್ನುಳಿದಂತೆ ಅನ್ಯ ಆರು ವಿವಿಧ ದೌರ್ಜನ್ಯ ಪ್ರಕರಣಗಳಿಂದ ನಲುಗಿದ್ದ ಮಕ್ಕಳನ್ನು ರಕ್ಷಿಸಲಾಗಿದೆ. ಒಟ್ಟಾರೆ ಕೊರೊನಾ ಭೀತಿ ನಡುವೆಯೂ ದೌರ್ಜನ್ಯಕ್ಕೆ ಒಳಗಾಗಿದ್ದ ಮಕ್ಕಳನ್ನು ಪಾರುಮಾಡುವಲ್ಲಿ ಮುಂದಾಗಿರೋದು ಪ್ರಶಂಸೆಗೆ ಪಾತ್ರವಾಗಿದೆ.

Published On - 2:58 pm, Thu, 11 June 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ