AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ

ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ.

ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ
ಗಲಾಟೆಯಲ್ಲಿ ಸುಟ್ಟು ಕರಕಲಾದ ಬೈಕ್​
TV9 Web
| Edited By: |

Updated on: May 30, 2023 | 10:22 AM

Share

ತುಮಕೂರು: ರಾಜಕೀಯ (Politics) ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ (JDS)​ ಸೋತಿರುವ ವಿಚಾರಕ್ಕೆ ಜೆಡಿಎಸ್​​ ಮುಖಂಡ ಮುದ್ದಪ್ಪ ಹಾಗೂ ಕಾಂಗ್ರೆಸ್ (Congress) ಮುಖಂಡ ಕೃಷ್ಣಪ್ಪ ಮಧ್ಯೆ ವಾಗ್ವಾದ ನಡೆದಿದೆ. ಈ ಬಳಿಕ ಕೃಷ್ಣಪ್ಪನ ಕಡೆಯವರು ಮುದ್ದಪ್ಪ ಬೈಕ್​ಗೆ ಬೆಂಕಿ ಹಚ್ಚಿದ್ದಾರೆ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತೀಕಾರವಾಗಿ ಮುದ್ದಪ್ಪನ ಕಡೆಯವರು ಕೃಷ್ಣಪ್ಪ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪವಿದೆ. ಇದರಿಂದ ಕೃಷ್ಣಪ್ಪನ ತಲೆಗೆ ಗಾಯ‌ವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ

ರಾಯಚೂರು: ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ನರಸಿಂಹಲು ಹಲ್ಲೆಗೊಳಗಾದ ಪೊಲೀಸ್ ಕಾನ್ಸಟೇಬಲ್. ಘಟನೆ ಸಂಬಂಧ ಗಬ್ಬೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಸಿದ್ದಾರೆ. ಸೈಯದ್ ಫರೀದ್, ಸೈಯದ್ ವಹೀದ್, ಸೈಯದ್ ದಸ್ತಗಿರಿ ಬಂಧಿತ ಆರೋಪಿಗಳು.

ಲಾರಿ ಹಾಗೂ ಟಾಟಾ ಏಸ್ ನಡುವೆ ನಡೆದಿದ್ದ ಅಪಘಾತ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸ್​ ಠಾಣೆಯಲ್ಲಿ ಮಾತುಕತೆ ನಡೆಯುವಾಗ ಪೊಲೀಸ್ ಕಾನ್ಸಟೇಬಲ್ ಲಾರಿ ಚಾಲಕ ಪರ ಮಾತನಾಡುತ್ತಿದ್ದರು ಅಂತ ಹಲ್ಲೆ ಮಾಡಿದ್ದಾರೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ; ಎಲ್ಲೆಲ್ಲಿ, ಏನು ಹಾನಿ? ಇಲ್ಲಿದೆ ಮಾಹಿತಿ

ಬಸ್ ಡಿಪೋ ಹಿಂಭಾಗ ಚಿರತೆ ಪ್ರತ್ಯಕ್ಷ

ಮಂಡ್ಯ: ಜಿಲ್ಲೆಯ ಕೆ.ಆರ್​.ಪೇಟೆ ಬಸ್ ಡಿಪೋ ಹಿಂಭಾಗ ಇರುವ ಶಿಕ್ಷಕಿ ರತ್ನಾ ನಿವಾಸದ ಬಳಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಓಡಾಟದ ದೃಶ್ಯ ಮನೆ ಮುಂದಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಪ್ರದೇಶದಲ್ಲಿ ಒಂಟಿಯಾಗಿ ಓಡಾಡದಂತೆ ತಾಲೂಕು ಆಡಳಿತ ಎಚ್ಚರಿಕೆ ನೀಡಿದೆ. ಇನ್ನು ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಇಡಲು ಮುಂದಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​