AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ

ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ.

ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ
ಗಲಾಟೆಯಲ್ಲಿ ಸುಟ್ಟು ಕರಕಲಾದ ಬೈಕ್​
TV9 Web
| Edited By: |

Updated on: May 30, 2023 | 10:22 AM

Share

ತುಮಕೂರು: ರಾಜಕೀಯ (Politics) ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ (JDS)​ ಸೋತಿರುವ ವಿಚಾರಕ್ಕೆ ಜೆಡಿಎಸ್​​ ಮುಖಂಡ ಮುದ್ದಪ್ಪ ಹಾಗೂ ಕಾಂಗ್ರೆಸ್ (Congress) ಮುಖಂಡ ಕೃಷ್ಣಪ್ಪ ಮಧ್ಯೆ ವಾಗ್ವಾದ ನಡೆದಿದೆ. ಈ ಬಳಿಕ ಕೃಷ್ಣಪ್ಪನ ಕಡೆಯವರು ಮುದ್ದಪ್ಪ ಬೈಕ್​ಗೆ ಬೆಂಕಿ ಹಚ್ಚಿದ್ದಾರೆ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತೀಕಾರವಾಗಿ ಮುದ್ದಪ್ಪನ ಕಡೆಯವರು ಕೃಷ್ಣಪ್ಪ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪವಿದೆ. ಇದರಿಂದ ಕೃಷ್ಣಪ್ಪನ ತಲೆಗೆ ಗಾಯ‌ವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ

ರಾಯಚೂರು: ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ನರಸಿಂಹಲು ಹಲ್ಲೆಗೊಳಗಾದ ಪೊಲೀಸ್ ಕಾನ್ಸಟೇಬಲ್. ಘಟನೆ ಸಂಬಂಧ ಗಬ್ಬೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಸಿದ್ದಾರೆ. ಸೈಯದ್ ಫರೀದ್, ಸೈಯದ್ ವಹೀದ್, ಸೈಯದ್ ದಸ್ತಗಿರಿ ಬಂಧಿತ ಆರೋಪಿಗಳು.

ಲಾರಿ ಹಾಗೂ ಟಾಟಾ ಏಸ್ ನಡುವೆ ನಡೆದಿದ್ದ ಅಪಘಾತ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸ್​ ಠಾಣೆಯಲ್ಲಿ ಮಾತುಕತೆ ನಡೆಯುವಾಗ ಪೊಲೀಸ್ ಕಾನ್ಸಟೇಬಲ್ ಲಾರಿ ಚಾಲಕ ಪರ ಮಾತನಾಡುತ್ತಿದ್ದರು ಅಂತ ಹಲ್ಲೆ ಮಾಡಿದ್ದಾರೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ; ಎಲ್ಲೆಲ್ಲಿ, ಏನು ಹಾನಿ? ಇಲ್ಲಿದೆ ಮಾಹಿತಿ

ಬಸ್ ಡಿಪೋ ಹಿಂಭಾಗ ಚಿರತೆ ಪ್ರತ್ಯಕ್ಷ

ಮಂಡ್ಯ: ಜಿಲ್ಲೆಯ ಕೆ.ಆರ್​.ಪೇಟೆ ಬಸ್ ಡಿಪೋ ಹಿಂಭಾಗ ಇರುವ ಶಿಕ್ಷಕಿ ರತ್ನಾ ನಿವಾಸದ ಬಳಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಓಡಾಟದ ದೃಶ್ಯ ಮನೆ ಮುಂದಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಪ್ರದೇಶದಲ್ಲಿ ಒಂಟಿಯಾಗಿ ಓಡಾಡದಂತೆ ತಾಲೂಕು ಆಡಳಿತ ಎಚ್ಚರಿಕೆ ನೀಡಿದೆ. ಇನ್ನು ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಇಡಲು ಮುಂದಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ