AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವೊಬ್ಬರೇ ತೈಲ ಬೆಲೆ ಇಳಿಕೆ ಮಾಡೋಕೆ ಆಗಲ್ಲ, ಆದ್ರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸ್ತೇವೆ -ಸಿಎಂ ಬಸವರಾಜ ಬೊಮ್ಮಾಯಿ

ನಾವೊಬ್ಬರೇ ಇಳಿಕೆ ಮಾಡೋಕೆ ಆಗಲ್ಲ. ಕಳೆದ ಬಾರಿ 7 ರೂಪಾಯಿ ಇಳಿಕೆ‌ ಮಾಡಿದ್ವಿ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ‌ ದರ ಏರಿಕೆ‌ ಹಿನ್ನೆಲೆ ಎಫೆಕ್ಟ್ ಆಗಿದೆ. ನಮ್ಮಲ್ಲೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಇಳಿಕೆ ಮಾಡುವ ಬಗ್ಗೆ ಯೋಚಿಸ್ತೇವೆ. -ಸಿಎಂ ಬಸವರಾಜ ಬೊಮ್ಮಾಯಿ

ನಾವೊಬ್ಬರೇ ತೈಲ ಬೆಲೆ ಇಳಿಕೆ ಮಾಡೋಕೆ ಆಗಲ್ಲ, ಆದ್ರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸ್ತೇವೆ -ಸಿಎಂ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
TV9 Web
| Edited By: |

Updated on: Apr 10, 2022 | 12:52 PM

Share

ತುಮಕೂರು: ಸತತ ಏರಿಕೆ ಕಾಣುತ್ತಿದ್ದ ತೈಲ ಬೆಲೆ ಸದ್ಯ ನಾಲ್ಕು ದಿನಗಳಿಂದ ಸ್ಥಿರವಾಗಿದೆ. ಹಲವು ರಾಜ್ಯದಲ್ಲಿ ಹೀಗಾಗಲೇ ಡೀಸೆಲ್ ಬೆಲೆ 100 ರೂ ಗಡಿ ದಾಟಿದೆ. ಮಾರ್ಚ್ 22ರಿಂದ ಈ ವರೆಗೆ ಎರಡು ವಾರಗಳಲ್ಲಿ ಒಟ್ಟು 15 ಬಾರಿ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ತಲಾ 10 ರೂ ಏರಿಕೆ ಕಂಡಿದೆ. ಸದ್ಯ ಈ ಸಂಬಂಧ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾವೊಬ್ಬರೇ ತೈಲ ಬೆಲೆ ಇಳಿಕೆ ಮಾಡುವುದಕ್ಕೆ ಆಗುವುದಿಲ್ಲ. ಕಳೆದ ಬಾರಿ ತೈಲ ದರ 7 ರೂಪಾಯಿ ಇಳಿಕೆ‌ ಮಾಡಿದ್ದೆವು ಎಂದು ತುಮಕೂರು ಜಿಲ್ಲೆ ಕುಣಿಗಲ್ನಲ್ಲಿ ಹೇಳಿಕೆ ನೀಡಿದ್ದಾರೆ.

ನಾವೊಬ್ಬರೇ ಇಳಿಕೆ ಮಾಡೋಕೆ ಆಗಲ್ಲ. ಕಳೆದ ಬಾರಿ 7 ರೂಪಾಯಿ ಇಳಿಕೆ‌ ಮಾಡಿದ್ವಿ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ‌ ದರ ಏರಿಕೆ‌ ಹಿನ್ನೆಲೆ ಎಫೆಕ್ಟ್ ಆಗಿದೆ. ನಮ್ಮಲ್ಲೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಇಳಿಕೆ ಮಾಡುವ ಬಗ್ಗೆ ಯೋಚಿಸ್ತೇವೆ. ಜನರಿಗೆ ಬಾರ ಆಗಬಾರದು ಅನ್ನುವ ಉದ್ದೇಶ ನಮ್ಮದು ಎಂದರು.

ಇನ್ನು ಇದೇ ವೇಳೆ ಕಾಂಗ್ರೆಸ್ ಕೇಸರಿ ಶಾಲು ಧರಿಸಿ ರಾಮನವಮಿ ಆಚರಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಆಚರಣೆ ಮಾಡಿರೋದು ಒಳ್ಳೆಯದು. ಅದು ಪರಿವರ್ತನೆಯ ಸಂಕೇತ. ಶ್ರೀರಾಮ ಚಂದ್ರನೇ ಈ ಜಗತ್ತನ್ನ ನಡೆಸ್ತಿರೋದು. ಅವರು ಪರಿವರ್ತನೆ ಆದ್ರೆ ಎಲ್ಲವೂ ಒಳ್ಳೆಯದು. ಅವರು ಶ್ರೀರಾಮನಿಂದಲೇ ಪರಿವರ್ತನೆ ಆಗಿದ್ದಾರೆ ಎಂದರು. ಗೃಹ ಸಚಿವರು ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿಕೆ ವ್ಯತ್ಯಾಸ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಿಎಂ, ಕೆಲವು ಮಾಹಿತಿ ಮೂಲಕ ಅದು ವ್ಯತ್ಯಾಸ ಉಂಟಾಗಿದೆ. ಯಾವುದೇ ರೀತಿಯ ಗೊಂದಲ ಇಲ್ಲ. ಅದನ್ನ ಸಿಐಡಿಗೆ ತನಿಖೆ ನಡೆಸಲು ಕೊಟ್ಟಿದ್ದೇವೆ. ಸಿಐಡಿ ತನಿಖೆಯಿಂದ ಸತ್ಯ ಹೊರಬರುತ್ತೆ ಎಂದರು.

ಮುಂಬೈಯಲ್ಲಿ ಪೆಟ್ರೋಲ್, ಡೀಸೆಲ್ಗೆ ದಾಖಲೆಯ ರೇಟ್ ದೆಹಲಿ: ಭಾರತದಲ್ಲಿ ಕಳೆದ ಮೂರು ದಿನಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಾಣದೆ ಸ್ಥಿರವಾಗಿದೆ. ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿತ್ತು. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇತ್ತು. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇತ್ತು. ಈ ಮಧ್ಯೆ, ಇಂದು (ಏಪ್ರಿಲ್ 9, 2022) ಇಂಧನ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಪರಿಣಾಮವಾಗಿ ಕಳೆದ 19 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲಯಲ್ಲಿ ಏರಿಕೆ ಮಾಡಲಾಗಿಲ್ಲ.

ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ₹ 105.41 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 96.67 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 115.12 ರೂ. ಡೀಸೆಲ್ ಬೆಲೆ ಲೀಟರ್ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ: ಧ್ವನಿವರ್ಧಕದಲ್ಲಿ ಹನುಮಾನ್​ ಚಾಲೀಸಾ, ಭಕ್ತಿಗೀತೆಗಳನ್ನು ಹಾಕಿದ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರು; ಕೂಡಲೇ ಬಂದು ತಡೆದ ಪೊಲೀಸರು

Follow Us
Web contact
Web contact

TV9 Kannada

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು