ಸೀನಿಯರ್ ಆಫೀಸರ್ ಆಗಿದೀಯಾ ಗೊತ್ತಾಗಲ್ವ ನಿನಗೆ? ದೂರ ನಿಲ್ಲು ಎಂದು ಐಜಿ ಚಂದ್ರಶೇಖರ್​ಗೆ ಝಾಡಿಸಿದ ಸಿಎಂ ಬೊಮ್ಮಾಯಿ

ಇಂದು ಕೋವಿಡ್ ಮಾರಿ ಕಟ್ಟಿಹಾಕುವ ನಿಟ್ಟಿನಲ್ಲಿ ತ್ವದ ನಿರ್ಧಾರ ತೆಗೆದುಕೊಳ್ಳಬೇಕಾದ, ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಸಿಎಂ ಬೊಮ್ಮಾಯಿ ಕೊರೊನಾ ಕಾಟದ ಬಗ್ಗೆ ಮೈಯೆಲ್ಲಾ ಕಣ್ಣಾಗಿರುವುದು ಸ್ಪಷ್ಟವಾಯಿತು. ​

ಸೀನಿಯರ್ ಆಫೀಸರ್ ಆಗಿದೀಯಾ ಗೊತ್ತಾಗಲ್ವ ನಿನಗೆ? ದೂರ ನಿಲ್ಲು ಎಂದು ಐಜಿ ಚಂದ್ರಶೇಖರ್​ಗೆ ಝಾಡಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
| Edited By: ಸಾಧು ಶ್ರೀನಾಥ್​

Updated on:Jan 21, 2022 | 12:37 PM

ತುಮಕೂರು: ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮಿಗಳ ಮೂರನೇ ವರ್ಷದ ಸ್ಮರಣೆ ಇಂದು. ಈ ಹಿನ್ನೆಲೆಯಲ್ಲಿ ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಸಿದ್ದಗಂಗಾ ಮಠಕ್ಕೆ (siddaganga mutt tumkur) ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ಅಲ್ಲಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು. ಮಠದ ಮಕ್ಕಳಿಗೆ ಪ್ರಸಾದ ಪಾಯಸ ಬೂಂದಿ ಬಡಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು. ಅದಕ್ಕೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ಡಾ. ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಸಚಿವರಾದ ಬಿ.ಸಿ. ನಾಗೇಶ್, ಜೆ.ಸಿ. ಮಾಧುಸ್ವಾಮಿ, ಸಂಸದ ಜಿ.ಎಸ್. ಬಸವರಾಜು, ಶಾಸಕ ಜ್ಯೋತಿಗಣೇಶ್, ಡಾ ರಾಜೇಶ್ ಗೌಡ ಜೊತೆಗಿದ್ದರು. ಸಿದ್ದಲಿಂಗಸ್ವಾಮಿ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ ಕೋವಿಡ್ 3 ನೇ ಅಲೆ ಹಿನ್ನೆಲೆಯಲ್ಲಿ ಸರಳವಾಗಿ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ (dr shivakumar swamiji 3rd death anniversary) ಒತ್ತುನೀಡಿದರು.

ಇಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ ನಿಡುವ ಸಲುವಾಗಿ ನಗರಕ್ಕೆ ಆಗಮಿಸಿದ್ದರು. ಅವರು ಕಾರು ಇಳಿಯುತ್ತಿದ್ದಂತೆ ಜನರು ಜಮಾವಣೆಗೊಂಡ ಹಿನ್ನೆಲೆ ಸ್ಥಳದಲ್ಲಿಯೇ ಇದ್ದ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, DySP ಶ್ರೀನಿವಾಸ್ ವಿರುದ್ಧ ಗರಂ ಆದರು. ಜನರು ಗುಂಪು ಸೇರದಂತೆ ಎಚ್ಚರವಹಿಸಿ ಎಂದು ಸಿಎಂ ಬೊಮ್ಮಾಯಿ ಜೋರು ದನಿಯಲ್ಲೆ ಕಿವಿಮಾತು ಹೇಳಿದರು. ಐಜಿ ಹತ್ತಿರ ಮಾತನಾಡಿದ ಸಿಎಂ ಬೊಮ್ಮಾಯಿ ಸೀನಿಯರ್ ಆಫೀಸರ್ ಆಗಿದೀಯಾ ಗೊತ್ತಾಗಲ್ವ ನಿನಗೆ? ಹೋಗು ದೂರ ನಿಲ್ಲು ಎಂದು ಝಾಡಿಸಿದರು.

ಒಟ್ಟಿನಲ್ಲಿ ಇಂದು ಕೋವಿಡ್ ಮಾರಿ ಕಟ್ಟಿಹಾಕುವ ನಿಟ್ಟಿನಲ್ಲಿ ತ್ವದ ನಿರ್ಧಾರ ತೆಗೆದುಕೊಳ್ಳಬೇಕಾದ, ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಸಿಎಂ ಬೊಮ್ಮಾಯಿ ಕೊರೊನಾ ಕಾಟದ ಬಗ್ಗೆ ಮೈಯೆಲ್ಲಾ ಕಣ್ಣಾಗಿರುವುದು ಸ್ಪಷ್ಟವಾಯಿತು.

ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡ್ತೇವೆ : ಸಿಎಂ ಬಸವರಾಜ ಬೊಮ್ಮಾಯಿ ದಾಸೋಹ ನಮ್ಮ ಕರ್ನಾಟಕದ ಒಂದು ಪರಂಪರೆ. ವಿಶೇಷವಾಗಿ ಶ್ರೀಶರಣರು ಅದನ್ನ ನಡೆಸಿಕೊಂಡು ಬಂದಿದ್ದಾರೆ. ದಿವಂಗತ ಶಿವಕುಮಾರ ಶ್ರೀಗಳು 8-10 ದಶಕಗಳಿಂದ ಅನ್ನದಾಸೋಹ ಜೊತೆಗೆ ಅಕ್ಷರ ದಾಸೋಹ, ಜ್ಞಾನ ದಾಸೋಹ ಮಾಡಿದ್ದಾರೆ. ಈ ಆಧುನಿಕ ಕಾಲದಲ್ಲಿ ಇದಕ್ಕೆ ಮಹತ್ವ ಕೊಡಬೇಕು ಅನ್ನೋ ನಿಟ್ಟಿನಲ್ಲಿ ದಾಸೋಹವನ್ನು ದಿನಾ ಮಾಡುತ್ತಿದ್ದೇವೆ. ನಮ್ಮಷ್ಟಕ್ಕೆ ನಾವೇ ದಾಸೋಹ ಪರಂಪರೆಗೆ ಸಮರ್ಪಣೆ ಮಾಡಿಕೊಳ್ಳುವ ಧ್ಯೇಯ ಹೊಂದಿರಬೇಕು ಎಂದು ಸಿದ್ದಗಂಗಾ ಮಠದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಮ್ಮ ಸರ್ಕಾರ ಅನ್ನ ದಾಸೋಹ ಮಾಡೋದ್ರಲ್ಲಿ ಹಲವು ಕ್ರಮ ಕೈಗೊಂಡಿದೆ. 4 ಕೆಜಿ ಅಕ್ಕಿಯಿಂದ 5 ಕೆಜಿ ಅಕ್ಕಿ, ಗೋಧಿ ಹೆಚ್ಚಳ ಮಾಡಿದೆ. ಈ ರೀತಿ ದಾಸೋಹ ಮಾಡುವಂತಾ ಮಠಗಳಿಗೆ ಪಡಿತರ ವ್ಯವಸ್ಥೆ ಮಾಡುತ್ತಿದ್ದೇವೆ. ಇದರ ಜೊತೆಗೆ ಮಕ್ಕಳಿಗೆ ಅಕ್ಷರ ದಾಸೋಹ ಮಾಡುವಂತಹದ್ದು ಇದೆ. ಕಾರ್ಮಿಕರ ಮಕ್ಕಳಿಗೆ ವಿದ್ಯೆ ಕೊಡುವ ಉದ್ದೇಶದಿಂದ 150 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಇದರ ಜೊತೆಗೆ ಆಶ್ರಯ ದಾಸೋಹ ಕೈಂಕರ್ಯವನ್ನು ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ 5 ಸಾವಿರ ಮನೆಗಳನ್ನು ನೀಡುತ್ತಿದ್ದೇವೆ.

ಕರ್ನಾಟಕದಲ್ಲಿರುವ ಯಾರಿಗೆ ಅನ್ನ, ಅಕ್ಷರ, ಆಶ್ರಯ ಅವಶ್ಯಕತೆ ಇದೆಯೋ ಅವರಿಗೆ ನೀಡುವ ಕೆಲಸ ಮಾಡ್ತಿದ್ದೇವೆ. ಕರ್ನಾಟಕ ಜನರಿಗೆ ಈ ದಾಸೋಹದ ದಿನವನ್ನ ಸಮರ್ಪಣೆ ಮಾಡಿದ್ದೇವೆ. ನಾನು ಇಂದು ಸಾಂಕೇತಿಕವಾಗಿ ದಾಸೋಹದ ದಿನಕ್ಕೆ ಚಾಲನೆ ನೀಡಿದ್ದೇನೆ. ಹಿರಿಯ ಶ್ರೀಗಳು ಈ ಮಠದಲ್ಲಿ ದಾಸೋಹ ಪರಂಪರೆಯನ್ನ ಮಾಡಿದ್ದಾರೆ. ಅದಕ್ಕೆ ನಾವು ಗೌರವ ಸಲ್ಲಿಸುತ್ತಿದ್ದೇವೆ. ಈ ದಾಸೋಹ ಪರಂಪರೆಯನ್ನ ಸರ್ಕಾರ ಗುರುತಿಸಿದೆ. ದಾಸೋಹ ದಿನ ಮುಂದುವರೆಸಲು ವ್ಯವಸ್ಥಿತವಾಗಿ ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಮುಂದುವರೆಸುತ್ತೇವೆ. ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡ್ತೇವೆ ಎಂದು ಸಿದ್ದಗಂಗಾ ಮಠದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

‘ಜನ ಸೇರಿಸಬೇಡಿ ಅಂದ್ರೆ ಯಾಕೆ ಸೇರಿಸಿದ್ದೀರಾ?’ ತುಮಕೂರಿನಲ್ಲಿ ಜನಜಂಗುಳಿ ನೋಡಿ ಸಿಎಂ ಗರಂ

Published On - 10:47 am, Fri, 21 January 22

ತಾಜಾ ಸುದ್ದಿ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ