AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕುರಿಗಳನ್ನು ಕೊಡುಗೆಯಾಗಿ ನೀಡಿದ ಕಾಂಗ್ರೆಸ್​​ ಕಾರ್ಯಕರ್ತ

ತುಮಕೂರು ತಾಲೂಕಿನ ಸಿದ್ದಾರ್ಥ ನಗರದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ತೆರಳಿ, ಕೊರಟಗೆರೆ ತಾಲೂಕಿನ ಗೊಡ್ರಹಳ್ಳಿ ಉಮಾಶಂಕರ್ ಕುರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕುರಿಗಳನ್ನು ಕೊಡುಗೆಯಾಗಿ ನೀಡಿದ ಕಾಂಗ್ರೆಸ್​​ ಕಾರ್ಯಕರ್ತ
ಎರಡು ಕುರಿಗಳಿಗೆ ಪೂಜೆ ಸಲ್ಲಿಸಿದ ಪರಮೇಶ್ವರ್
Follow us
TV9 Web
| Updated By: preethi shettigar

Updated on:Sep 11, 2021 | 11:03 AM

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕೊರಟಗೆರೆ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕುರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ತುಮಕೂರು ತಾಲೂಕಿನ ಸಿದ್ದಾರ್ಥ ನಗರದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ತೆರಳಿ, ಕೊರಟಗೆರೆ ತಾಲೂಕಿನ ಗೊಡ್ರಹಳ್ಳಿ ಉಮಾಶಂಕರ್ ಕುರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಉಡುಗೊರೆಯಾಗಿ ಬಂದ ಎರಡು ಕುರಿಗಳಿಗೆ ಪರಮೇಶ್ವರ್, ಹೂವಿನ ಹಾರ ಹಾಕಿ, ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ.

ವಿಜಯಪುರ: ಕುರಿಗಳನ್ನು ಕದಿಯಲು ಬಂದಿದ್ದ ಕಳ್ಳರ ಕಾರು ಪಲ್ಟಿ ಕುರಿಗಳನ್ನು ಕದಿಯಲು ಬಂದಿದ್ದ ಕಳ್ಳರ ಕಾರು ಪಲ್ಟಿಯಾದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕರ್ತಿಹಾಳ ಗ್ರಾಮದ ಬಳಿ ನಡೆದಿದೆ. ಮೂಕರ್ತಿಹಾಳ ಗ್ರಾಮದಲ್ಲಿ ಕುರಿಗಳನ್ನು ಕದಿಯಲು ಕಾರು ಸಮೇತ ಆಗಮಿಸಿದ್ದ ಕಳ್ಳರ ಕಾರು ಪಲ್ಟಿ ಆಗಿದ್ದು, ಬಳಿಕ ಕದೀಮರು ಪರಾರಿಯಾಗಿದ್ದಾರೆ.

ಕುರಿಗಳನ್ನು ಕದಿಯಲು‌ ಮುಂದಾದಾಗ ಕಳ್ಳರ ನೋಡಿ ಕುರಿಗಾಹಿಗಳು ಚೀರಿದ್ದು, ತಪ್ಪಿಸಿಕೊಳ್ಳಲು ಕಳ್ಳರು ತಕ್ಷಣ ಕಾರಿನಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ ತಾಳಿಕೋಟೆಯತ್ತ ಆಗಮಿಸಿದ ಕಳ್ಳರು, ಡೋಣಿ ನದಿ ಸೇತುವೆ ಜಲಾವೃತವಾದ ಕಾರಣ ವಾಪಸ್ ಮೂಕರ್ತಿಹಾಳ ಗ್ರಾಮದತ್ತ ಕಾರಿನಲ್ಲಿ ತೆರಳಿದ್ದಾರೆ. ಆಗ ಕಳ್ಳರು ಬಂದಿದ್ದ ಸುದ್ದಿಯಿಂದ ಬಡಿಗೆ ಹಿಡಿದು ಜಮಾಯಿಸಿದ್ದ ಗ್ರಾಮಸ್ಥರನ್ನು ಕಂಡು ಭಯಗೊಂಡು, ಅಲ್ಲಿಂದ ಪರಾರಿಯಾಗುವ ವೇಳೆ ಕಳ್ಳರ ಕಾರ್ ಪಲ್ಟಿಯಾಗಿದ್ದು, ಕೂಡಲೇ ಕಾರ್ ಬಿಟ್ಟು ಕಳ್ಳರು ಅಲ್ಲಿಂದ ಓಡಿ ಹೋಗಿದ್ದಾರೆ.

ಕದ್ದಿದ್ದ ಕುರಿಗಳನ್ನು KA 03 – AE 2627 ನಂಬರಿನ ಕಾರಿಲ್ಲಿಯೇ ಬಿಟ್ಟು ಸದ್ಯ ಕಳ್ಳರು ಪರಾರಿಯಾಗಿದ್ದು, ಕಾರನ್ನೂ ಸಹ ಕಳ್ಳತನ ಮಾಡಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿದ್ದು, ಗ್ರಾಮಸ್ಥರ ಬಳಿ‌ ಸಮಗ್ರ ಮಾಹಿತಿ‌ ಕಲೆ ಹಾಕಿದ್ದಾರೆ. ಇನ್ನು ಕಳ್ಳರ ಬಂಧನಕ್ಕೆ ತಾಳಿಕೋಟೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಅವರನ್ನೇ ಹೋಲುವ ಗಂಧದ ಮೂರ್ತಿ ಉಡುಗೊರೆ; ಅಂದಾಜು 2 ಲಕ್ಷ ಮೌಲ್ಯದ ಕೊಡುಗೆ ನೀಡಿದ ರಾಣೆಬೆನ್ನೂರು ಪಾಲಿಕೆ

ಪ್ರಧಾನಿ ಮೋದಿ ಗಡ್ಡಕ್ಕೆ ಹೊಸ ಪದ ಕೊಡುಗೆ ನೀಡಿದ ಕಾಂಗ್ರೆಸ್​ ನಾಯಕ ಶಶಿ ತರೂರ್, ಅದಕ್ಕೆ ನೆಟ್ಟಿಗರ ಉತ್ತರವೂ ಸ್ವಾರಸ್ಯಕರ!

Published On - 10:56 am, Sat, 11 September 21

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ