ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕುರಿಗಳನ್ನು ಕೊಡುಗೆಯಾಗಿ ನೀಡಿದ ಕಾಂಗ್ರೆಸ್​​ ಕಾರ್ಯಕರ್ತ

ತುಮಕೂರು ತಾಲೂಕಿನ ಸಿದ್ದಾರ್ಥ ನಗರದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ತೆರಳಿ, ಕೊರಟಗೆರೆ ತಾಲೂಕಿನ ಗೊಡ್ರಹಳ್ಳಿ ಉಮಾಶಂಕರ್ ಕುರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕುರಿಗಳನ್ನು ಕೊಡುಗೆಯಾಗಿ ನೀಡಿದ ಕಾಂಗ್ರೆಸ್​​ ಕಾರ್ಯಕರ್ತ
ಎರಡು ಕುರಿಗಳಿಗೆ ಪೂಜೆ ಸಲ್ಲಿಸಿದ ಪರಮೇಶ್ವರ್
Follow us
| Updated By: preethi shettigar

Updated on:Sep 11, 2021 | 11:03 AM

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕೊರಟಗೆರೆ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕುರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ತುಮಕೂರು ತಾಲೂಕಿನ ಸಿದ್ದಾರ್ಥ ನಗರದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ತೆರಳಿ, ಕೊರಟಗೆರೆ ತಾಲೂಕಿನ ಗೊಡ್ರಹಳ್ಳಿ ಉಮಾಶಂಕರ್ ಕುರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಉಡುಗೊರೆಯಾಗಿ ಬಂದ ಎರಡು ಕುರಿಗಳಿಗೆ ಪರಮೇಶ್ವರ್, ಹೂವಿನ ಹಾರ ಹಾಕಿ, ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ.

ವಿಜಯಪುರ: ಕುರಿಗಳನ್ನು ಕದಿಯಲು ಬಂದಿದ್ದ ಕಳ್ಳರ ಕಾರು ಪಲ್ಟಿ ಕುರಿಗಳನ್ನು ಕದಿಯಲು ಬಂದಿದ್ದ ಕಳ್ಳರ ಕಾರು ಪಲ್ಟಿಯಾದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕರ್ತಿಹಾಳ ಗ್ರಾಮದ ಬಳಿ ನಡೆದಿದೆ. ಮೂಕರ್ತಿಹಾಳ ಗ್ರಾಮದಲ್ಲಿ ಕುರಿಗಳನ್ನು ಕದಿಯಲು ಕಾರು ಸಮೇತ ಆಗಮಿಸಿದ್ದ ಕಳ್ಳರ ಕಾರು ಪಲ್ಟಿ ಆಗಿದ್ದು, ಬಳಿಕ ಕದೀಮರು ಪರಾರಿಯಾಗಿದ್ದಾರೆ.

ಕುರಿಗಳನ್ನು ಕದಿಯಲು‌ ಮುಂದಾದಾಗ ಕಳ್ಳರ ನೋಡಿ ಕುರಿಗಾಹಿಗಳು ಚೀರಿದ್ದು, ತಪ್ಪಿಸಿಕೊಳ್ಳಲು ಕಳ್ಳರು ತಕ್ಷಣ ಕಾರಿನಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಆದರೆ ತಾಳಿಕೋಟೆಯತ್ತ ಆಗಮಿಸಿದ ಕಳ್ಳರು, ಡೋಣಿ ನದಿ ಸೇತುವೆ ಜಲಾವೃತವಾದ ಕಾರಣ ವಾಪಸ್ ಮೂಕರ್ತಿಹಾಳ ಗ್ರಾಮದತ್ತ ಕಾರಿನಲ್ಲಿ ತೆರಳಿದ್ದಾರೆ. ಆಗ ಕಳ್ಳರು ಬಂದಿದ್ದ ಸುದ್ದಿಯಿಂದ ಬಡಿಗೆ ಹಿಡಿದು ಜಮಾಯಿಸಿದ್ದ ಗ್ರಾಮಸ್ಥರನ್ನು ಕಂಡು ಭಯಗೊಂಡು, ಅಲ್ಲಿಂದ ಪರಾರಿಯಾಗುವ ವೇಳೆ ಕಳ್ಳರ ಕಾರ್ ಪಲ್ಟಿಯಾಗಿದ್ದು, ಕೂಡಲೇ ಕಾರ್ ಬಿಟ್ಟು ಕಳ್ಳರು ಅಲ್ಲಿಂದ ಓಡಿ ಹೋಗಿದ್ದಾರೆ.

ಕದ್ದಿದ್ದ ಕುರಿಗಳನ್ನು KA 03 – AE 2627 ನಂಬರಿನ ಕಾರಿಲ್ಲಿಯೇ ಬಿಟ್ಟು ಸದ್ಯ ಕಳ್ಳರು ಪರಾರಿಯಾಗಿದ್ದು, ಕಾರನ್ನೂ ಸಹ ಕಳ್ಳತನ ಮಾಡಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿದ್ದು, ಗ್ರಾಮಸ್ಥರ ಬಳಿ‌ ಸಮಗ್ರ ಮಾಹಿತಿ‌ ಕಲೆ ಹಾಕಿದ್ದಾರೆ. ಇನ್ನು ಕಳ್ಳರ ಬಂಧನಕ್ಕೆ ತಾಳಿಕೋಟೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಅವರನ್ನೇ ಹೋಲುವ ಗಂಧದ ಮೂರ್ತಿ ಉಡುಗೊರೆ; ಅಂದಾಜು 2 ಲಕ್ಷ ಮೌಲ್ಯದ ಕೊಡುಗೆ ನೀಡಿದ ರಾಣೆಬೆನ್ನೂರು ಪಾಲಿಕೆ

ಪ್ರಧಾನಿ ಮೋದಿ ಗಡ್ಡಕ್ಕೆ ಹೊಸ ಪದ ಕೊಡುಗೆ ನೀಡಿದ ಕಾಂಗ್ರೆಸ್​ ನಾಯಕ ಶಶಿ ತರೂರ್, ಅದಕ್ಕೆ ನೆಟ್ಟಿಗರ ಉತ್ತರವೂ ಸ್ವಾರಸ್ಯಕರ!

Published On - 10:56 am, Sat, 11 September 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ