AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಾಲೇಜಿನಲ್ಲಿ ಭಯದಲ್ಲೇ ಕೆರೆ ಹಾವು ಮುಟ್ಟಿ ಸಂಭ್ರಮಿಸಿದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್

ಣಿಗಲ್ ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಕೆರೆ ಹಾವೊಂದು ಕಾಣಿಸಿಕೊಂಡಿತ್ತು. ಉರುಗ ರಕ್ಷಕ ಸ್ನೇಕ್ ಮಹಂತೇಶ್ ಹಾವು ಹಿಡಿದು ಅದನ್ನು ರಕ್ಷಣೆ ಮಾಡಿದ್ರು. ಇದೇ ಸಮಯದಲ್ಲಿ ಕಾಲೇಜು ಕಾರ್ಯಕ್ರಮದಲ್ಲಿ ಹಾಜರಿದ್ದ ಶಾಸಕ ಡಾ.ರಂಗನಾಥ್, ಹಾವು ಹಿಡಿಯುವುದನ್ನು ಕಣ್ಣಾರೆ ನೋಡಿ, ಹಾವು ಮುಟ್ಟುವ ಬಯಕೆ ವ್ಯಕ್ತಪಡಿಸಿದ್ರು.

ಸರ್ಕಾರಿ ಕಾಲೇಜಿನಲ್ಲಿ ಭಯದಲ್ಲೇ ಕೆರೆ ಹಾವು ಮುಟ್ಟಿ ಸಂಭ್ರಮಿಸಿದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್
ಸರ್ಕಾರಿ ಕಾಲೇಜಿನಲ್ಲಿ ಭಯದಲ್ಲೇ ಕೆರೆ ಹಾವು ಮುಟ್ಟಿ ಸಂಭ್ರಮಿಸಿದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್
TV9 Web
| Edited By: |

Updated on:Jan 30, 2022 | 10:29 AM

Share

ತುಮಕೂರು: ಹಾವು ಅಂದ್ರೆ ಎಲ್ಲರಿಗೂ ಭಯ ಇರುತ್ತೆ. ಆದ್ರೆ ಅದರ ಜೊತೆಗೆ ಅದನ್ನು ಮುಟ್ಟುವ ಹಂಬಲ ಕೂಡ ಇರುತ್ತೆ. ಅದರಂತೆ ಕಾಂಗ್ರೆಸ್ ಶಾಸಕನಿಗೆ ಹಾವು ಮುಟ್ಟುವ ಹಂಬಲ ಹೆಚ್ಚಾಗಿದ್ದು ಕೆರೆ ಹಾವು ಮುಟ್ಟಿ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್(Congress MLA Dr Ranganath) ಸಂಭ್ರಮಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಕೆರೆ ಹಾವೊಂದು ಕಾಣಿಸಿಕೊಂಡಿತ್ತು. ಉರುಗ ರಕ್ಷಕ ಸ್ನೇಕ್ ಮಹಂತೇಶ್ ಹಾವು ಹಿಡಿದು ಅದನ್ನು ರಕ್ಷಣೆ ಮಾಡಿದ್ರು. ಇದೇ ಸಮಯದಲ್ಲಿ ಕಾಲೇಜು ಕಾರ್ಯಕ್ರಮದಲ್ಲಿ ಹಾಜರಿದ್ದ ಶಾಸಕ ಡಾ.ರಂಗನಾಥ್, ಹಾವು ಹಿಡಿಯುವುದನ್ನು ಕಣ್ಣಾರೆ ನೋಡಿ, ಹಾವು ಮುಟ್ಟುವ ಬಯಕೆ ವ್ಯಕ್ತಪಡಿಸಿದ್ರು. ಅದರಂತೆ ಅಂಜಿಕೆಯಿಂದಲೇ ಹಾವು ಹಿಡಿದು ಸಂಭ್ರಮಿಸಿದ್ರು.

Congress MLA dr Ranganath 1

ಕಾಂಗ್ರೆಸ್ ಶಾಸಕ ಡಾ. ರಂಗನಾಥ್

ಮೊಬೈಲ್ ನೋಡಿಕೊಂಡು ಬಸ್ ಚಲಾಯಿಸಿದ ಚಾಲಕ ಮೊಬೈಲ್ ನೋಡಿಕೊಂಡು ಕೆಎಸ್ಆರ್ಟಿಸಿ ಬಸ್ ಚಾಲಕ ಬಸ್ ಓಡಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಜೊತೆಗೆ ಡ್ರೈವರ್ ಮೊಬೈಲ್ನಲ್ಲಿ ಮಾತನಾಡುತ್ತಿದ್ದನ್ನು ಪ್ರಯಾಣಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. KA27F0777 ನಂಬರ್ನ ಕೆಎಸ್ಆರ್ಟಿಸಿ ಬಸ್ ಇದಾಗಿದ್ದು ಬೆಂಗಳೂರಿನಿಂದ ತುಮಕೂರು, ಶಿರಾ ಮಾರ್ಗವಾಗಿ ಹಾನಗಲ್ ಗೆ ಹೊಗುತ್ತಿತ್ತು. ಈ ವೇಳೆ ಘಟನೆ ನಡೆದಿದೆ.

ಬಸ್ನಲ್ಲಿ ಪ್ರಯಾಣಮಾಡುತ್ತಿದ್ದ ಮಹದೇವ ಎಂಬುವವರ ಮೊಬೈಲ್ನಲ್ಲಿ ಚಾಲಕನ ಅಜಾಗ್ರತೆಯ ದೃಶ್ಯ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ಆದ ವಿಡಿಯೋ ನೋಡಿದ ಸಾಕಷ್ಟು ಮಂದಿ ಪ್ರಯಾಣಿಕರ ಜೀವದ ಜೊತೆ ಚಾಲಕ ಚೆಲ್ಲಾಟವಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಪ್ರಯಾಣಿಕ‌ ಮಹದೇವ ಅಧಿಕಾರಿಗಳಿಗೆ‌ ಒತ್ತಾಯಿಸಿದ್ದಾರೆ.

ತುಮಕೂರು ಆರೋಗ್ಯ ಇಲಾಖೆಯಿಂದ ಮಹಾ ಎಡವಟ್ಟು ಇನ್ನು ಮತ್ತೊಂದೆಡೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಹಾ ಎಡವಟ್ಟು ನಡೆದಿದೆ. 2021ರ ಜುಲೈ 16ರಂದು ಮೃತಪಟ್ಟಿರುವ ಮೇಳೆಕೋಟೆಯ ಬಸಪ್ಪ(80) 2ನೇ ಡೋಸ್ ಕೊವಿಡ್ ಲಸಿಕೆ ಪಡೆದಿರುವುದಾಗಿ ಆರೋಗ್ಯ ಇಲಾಖೆಯಿಂದ ಸಂದೇಶ ಬಂದಿದೆ. ನಿನ್ನೆ ಕೊವಿಡ್ ಲಸಿಕೆ ಪಡೆದಿರುವುದಾಗಿ ಆರೋಗ್ಯ ಇಲಾಖೆ ಸರ್ಟಿಫಿಕೆಟ್ ಬಂದಿದೆ. ಮೃತನ ಲಸಿಕೆ ಸರ್ಟಿಫಿಕೆಟ್ ನೋಡಿ ಕುಟುಂಬಸ್ಥರು ಶಾಕ್ ಆಗಿದ್ದಾರೆ. 6 ತಿಂಗಳ ಹಿಂದೆ ಮೃತಪಟ್ಟಿರುವ ವೃದ್ಧನಿಗೆ ಕೊರೊನಾ ಲಸಿಕೆ ಪಡೆದಿರುವುದಾಗಿ ಆರೋಗ್ಯ ಇಲಾಖೆಯಿಂದ ಸಂದೇಶ ಬಂದಿದೆ. ಆದ್ರೆ 2021ರ ಜುಲೈ 16ರಂದು ಬಸಪ್ಪ(80) ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್

Published On - 9:53 am, Sun, 30 January 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?