AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಇತ್ತೀಚೆಗೆ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಬಾಡಿಗೆ ಮನೆಯಲ್ಲೇ ಇಬ್ಬರೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತುಮಕೂರು: ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ದಂಪತಿ
TV9 Web
| Edited By: |

Updated on: Oct 06, 2023 | 12:41 PM

Share

ತುಮಕೂರು, (ಅಕ್ಟೋಬರ್ 06): ವಾಸವಿದ್ದ ಬಾಡಿಗೆ ಮನೆಯಲ್ಲೇ ದಂಪತಿ(couple) ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. ಮನು(26) ಹಾಗೂ ಪತ್ನಿ ಪವಿತ್ರಾ(24) ರೊಪ್ಪ ಗ್ರಾಮದ ಬಾಡಿಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮನು ಹಾಗೂ ಪವಿತ್ರ  ನವ ದಂಪತಿಗಳಂತೆ ಕಾಣಿಸುತ್ತಿದ್ದು,  ಇಬ್ಬರು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇನ್ನೂ ಬಾಳಿ ಸಂಸಾರದ ಬಂಡಿ ಸಾಗಿಸಬೇಕಾದ ದಂಪತಿ ಅರ್ಧದಲ್ಲೇ ನಿಲ್ಲಿಸಿದೆ. ಆದ್ರೆ, ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರ ತನಿಖೆಯಲ್ಲಿ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

ಇದನ್ನೂ ಓದಿ: ಹೇಮಾವತಿ ನದಿಗೆ ಹಾರಿ ಪ್ರಥಮ ದರ್ಜೆ ಗುತ್ತಿಗೆದಾರ ಆತ್ಮಹತ್ಯೆ: ಕಾರಣವೇನು?

ಗಲಾಟೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತ್ತೂರು ಗ್ರಾಮದಲ್ಲಿ ಬಡ್ಡಿ ಹಣ ನೀಡುವ ವಿಚಾರದಲ್ಲಿ ನಡೆದಿದ್ದ ಗಲಾಟೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಅಮೃತ್ತೂರು ಗ್ರಾಮದ ಅಬ್ದುಲ್ ಖಲೀಲ್ (55) ಮೃತ ದುರ್ದೈವಿ. ಖಲೀಲ್ ತನ್ನ ಮಗಳ ಮದುವೆಗಾಗಿ ಅದೇ ಗ್ರಾಮದ ತೌಸೀಪ್‌ ಪಾಷ ಅವರಿಂದ 50,000 ರೂ. ಸಾಲ ಪಡೆದಿದ್ದ. ಪ್ರತಿ ತಿಂಗಳು 5 ಸಾವಿರ ಬಡ್ಡಿ ಕಟ್ಟುತ್ತಿದ್ದ. ಆದ್ರೆ, ಕಳೆದ ತಿಂಗಳು ಬಡ್ಡಿ ಹಣ ನೀಡಲು ತಡವಾಗಿದ್ದಕ್ಕೆ ತೌಸೀಪ್‌ ಪಾಷ ಗಲಾಟೆ ಮಾಡಿದ್ದು, ಕೋಳಿ ಕಟ್ ಮಾಡುವ ಕತ್ತಿಯಿಂದ ಹಲ್ಲೆ ಮಾಡಿದ್ದ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಖಲೀಲ್​ನನ್ನು ಬೆಂಗಳೂರಿನ ನಿಮಾನ್ಸ್ ಗೆ ದಾಖಲಿಸಲಾಗಿತ್ತು. ಆದ್ರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಖಲೀಲ್ ಆಸ್ಪತ್ರೆಯಲ್ಲಿ​ ಕೊನೆಯುಸಿರೆಳೆದಿದ್ದಾನೆ. ಈ ಘಟನೆ ಸಂಬಂಧ ಅಮೃತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ