AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯಸಂಸ್ಕಾರಕ್ಕೆ ಅಡ್ಡಿ: ಜಮೀನು ಮಾಲೀಕರ ಮನವೊಲಿಸುವಲ್ಲಿ ಯಶಸ್ವಿಯಾದ ಹಿಂದುಳಿದ ವರ್ಗ ಇಲಾಖೆ ಅಧಿಕಾರಿಗಳು

ಜಮೀನು ಮಾಲೀಕರು ಶವ ಮುಚ್ಚಲು ಅಡ್ಡಿ ಪಡಿಸಿದ ಬೆನ್ನಲ್ಲೇ ಮೃತನ ಕುಟುಂಬಸ್ಥರು ಶವವನ್ನು ವಾಪಸ್ ತೆಗೆದುಕೊಂಡು ಹೋಗದೆ, ಅದೇ ಸ್ಥಳದಲ್ಲೇ ಅಂತ್ಯ ಸಂಸ್ಕಾರ ಮಾಡಲು ಪಟ್ಟು ಹಿಡಿದಿದ್ದಾರೆ. ಇದ್ರಿಂದ ಸುಮಾರು ನಾಲ್ಕು ಗಂಟೆಗಳ ಕಾಲ ಶವಸಂಸ್ಕಾರದ ವಿಚಾರ ಹಗ್ಗಜಗ್ಗಾಟ ನಡೆದಿದೆ.

ಅಂತ್ಯಸಂಸ್ಕಾರಕ್ಕೆ ಅಡ್ಡಿ: ಜಮೀನು ಮಾಲೀಕರ ಮನವೊಲಿಸುವಲ್ಲಿ ಯಶಸ್ವಿಯಾದ ಹಿಂದುಳಿದ ವರ್ಗ ಇಲಾಖೆ ಅಧಿಕಾರಿಗಳು
ಅಂತ್ಯಸಂಸ್ಕಾರಕ್ಕ ಅಡ್ಡಿ: ಜಮೀನು ಮಾಲೀಕರ ಮನವೊಲಿಸುವಲ್ಲಿ ಯಶಸ್ವಿಯಾದ ಹಿಂದುಳಿದ ವರ್ಗ ಇಲಾಖೆ ಅಧಿಕಾರಿಗಳು
TV9 Web
| Edited By: |

Updated on: Jan 25, 2022 | 11:19 AM

Share

ದಲಿತ ವ್ಯಕ್ತಿ ಅಂತ್ಯಸಂಸ್ಕಾರ ಅಡ್ಡಿ ಪಡಿಸಿರುವ ಘಟನೆಯೊಂದು ತುಮಕೂರಿನಲ್ಲಿ ನಡೆದಿದೆ. ವಿವಾದಿತ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಮುಂದಾಗ ಜಮೀನು ಮಾಲೀಕ ಶವಸಂಸ್ಕಾರಕ್ಕೆ ತಡೆಯೊಡ್ಡಿದ್ದಾರೆ. ಸುಮಾರು ನಾಲ್ಕು ಗಂಟೆ ಗಳ ಬಳಿಕ ಎಸ್ಸಿ ಎಸ್ಟಿ ಸೆಲ್ ಅಧಿಕಾರಿಗಳ ಮಧ್ಯ ಪ್ರವೇಶದ ಬಳಿಕ ಅಂತ್ಯಸಂಸ್ಕಾರ ನಡೆದಿದೆ. ಏನಿದು ದಲಿತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಅಡ್ಡಿ ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ:

ವಿವಾದಿತ ಜಾಗದಲ್ಲಿ ಅಂತ್ಯಸಂಸ್ಕಾರಕ್ಕೆ ಮುಂದಾದ ದಲಿತ ಕುಟುಂಬಕ್ಕೆ ಅಡ್ಡಿಪಡಿಸಿ, ಶವ ಮುಚ್ಚಲು ತೆಗೆದಿದ್ದ ಗುಂಡಿಯನ್ನು ಮುಚ್ಚಿಸಿದ ಘಟನೆ ತುಮಕೂರು ಹೊರವಲಯ ಭೀಮಸಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 50 ವರ್ಷದ, ದಲಿತ ಸಮುದಾಯಕ್ಕೆ ಸೇರಿದ ಮಂಜುನಾಥ್ ಎಂಬುವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದರು. ಸಹಜವಾಗಿ ಗ್ರಾಮದ ಹೊರವಲಯದಲ್ಲಿ ಇರುವ ಜಾಗದಲ್ಲಿ ಮಣ್ಣು ಮಾಡಲು ಶವವನ್ನು ಸ್ಥಳಕ್ಕೆ ತಂದಿದ್ದಾರೆ. ಆಗ ಸ್ಥಳಕ್ಕಾಗಮಿಸಿದ ಜಮೀನು ಮಾಲೀಕರಾದ ಸೌಭಾಗ್ಯ ಕುಟುಂಬದ ಸದಸ್ಯರು ಪೊಲೀಸರೊಂದಿಗೆ ಆಗಮಿಸಿ ಶವ ಹೂಳಲು ತೆಗೆದಿದ್ದ ಗುಂಡಿಯನ್ನು ಮುಚ್ಚಿಸಿದ್ದಾರೆ. ಅಲ್ಲದೆ ಶವ ಹೂಳದಂತೆ ತಡೆದಿದ್ದಾರೆ.

ಜಮೀನು ಮಾಲೀಕರು ಶವ ಮುಚ್ಚಲು ಅಡ್ಡಿ ಪಡಿಸಿದ ಬೆನ್ನಲ್ಲೇ ಮೃತನ ಕುಟುಂಬಸ್ಥರು ಶವವನ್ನು ವಾಪಸ್ ತೆಗೆದುಕೊಂಡು ಹೋಗದೆ, ಅದೇ ಸ್ಥಳದಲ್ಲೇ ಅಂತ್ಯ ಸಂಸ್ಕಾರ ಮಾಡಲು ಪಟ್ಟು ಹಿಡಿದಿದ್ದಾರೆ. ಇದ್ರಿಂದ ಸುಮಾರು ನಾಲ್ಕು ಗಂಟೆಗಳ ಕಾಲ ಶವಸಂಸ್ಕಾರದ ವಿಚಾರ ಹಗ್ಗಜಗ್ಗಾಟ ನಡೆದಿದೆ. ಭೀಮಸಂದ್ರ ಗ್ರಾಮದ ಈ ಜಾಗ ದಲಿತ ಸಮುದಾಯಕ್ಕೆ ಸೇರಿದ್ದು, 1985ರಲ್ಲಿ ಈ ಜಾಗವನ್ನು ಅಂದಿನ ತಹಶೀಲ್ದಾರ್ ಮುಸ್ಲಿಂ ಸಮುದಾಯದ ವ್ಯಕ್ತಿಯೋರ್ವರಿಗೆ ಮರು ಮಂಜೂರು ಮಾಡಿದ್ದಾರೆ. ಇದಾದ ಬಳಿಕ ಸೌಭಾಗ್ಯ ತಂದೆ ವೀರಪ್ಪ ಈ ಜಮೀನು ಖರೀದಿದ್ದಾರೆ.

ವೀರಪ್ಪ ಖರೀದಿಸಿರುವ ಜಾಗದಲ್ಲೇ ದಲಿತ ಸಮುದಾಯದವರು ಹಲವು ವರ್ಷಗಳಿಂದ ಶವಸಂಸ್ಕಾರ ಮಾಡಿಕೊಂಡು ಬಂದಿದ್ದಾರೆ. ಎರಡು ವಾರದ ಹಿಂದೆ ಇದೇ ಜಾಗದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಹೀಗಾಗಿ ಇದು ದಲಿತರಿಗೆ ಸ್ಮಶಾನ ಮಾಡಲು ಅವಕಾಶ ನೀಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಆದರೆ ಜಮೀನು ಮಾಲೀಕರು ಇದಕ್ಕೆ ಅವಕಾಶ ನೀಡಿಲ್ಲ. ಕೊನೆಗೆ ಎಸ್.ಸಿ. ಎಸ್​.ಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡುವಂತೆ ಜಮೀನು ಮಾಲೀಕರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿದಿದ್ದು, ಅಂತ್ಯಸಂಸ್ಕಾರ ನೆರವೇರಿದೆ. ಆದ್ರೆ ಈ ಸಮಸ್ಯೆ ಇಷ್ಟಕ್ಕೆ ಸುಮ್ಮನಾಗುವುದಿಲ್ಲ ಎಂಬುದು ಸ್ಥಳೀಯರ ಅಭಿಮತವಾಗಿದೆ.

-ಮಹೇಶ್, ಟಿವಿ9, ತುಮಕೂರು

Also Read: ಈತ ಅಮೆರಿಕದ ಕ್ರಿಕೆಟರ್: ಬೌಲಿಂಗ್​ಗೂ ಸೈ- ಬ್ಯಾಟಿಂಗ್​ಗೂ ಜೈ ಅನ್ನೋ ಜಾಯಮಾನ! ಈತನ ಜೊತೆಗಿದೆ ಕಾಫಿನಾಡಿನ ನಂಟು!

Also Read: Belagavi: ರಾಜಕೀಯವಾಗಿ ಸೂಕ್ಷ್ಮವಾಗಿರುವ ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಕಮಲ ಶಾಸಕರ ಕರಾಮತ್ತು?

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ