AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಬದುಕಿಗೆ ಕೊಳ್ಳಿಯಿಟ್ಟ ಮಳೆರಾಯ; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಮಳೆ ಬರುವ ಮುನ್ನ ಎಲೆಕೋಸಿನ ಬೆಲೆ ಒಂದು ಕೆಜಿಗೆ 4-5 ರೂ ಇತ್ತು. ಸದ್ಯ ಮಾರ್ಕೆಟ್ ದರ 20-22 ರೂ, ಆಗಿದೆ. 6-8 ಲಕ್ಷ ಆದಾಯ ಪಡೆಯುತ್ತಿದ್ದ ರೈತ ಕಂಗಾಲಾಗಿದ್ದಾರೆ.

ರೈತರ ಬದುಕಿಗೆ ಕೊಳ್ಳಿಯಿಟ್ಟ ಮಳೆರಾಯ; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಎಲೆಕೋಸು ಬೆಳೆ
TV9 Web
| Edited By: sandhya thejappa|

Updated on:Nov 24, 2021 | 9:04 AM

Share

ತುಮಕೂರು: ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಎಲೆಕೋಸು ಸೇರಿದಂತೆ ಬೇರೆ ಬೇರೆ ಬೆಳೆಗಳು ನೀರು ಪಾಲಾಗಿದ್ದು, ಮುಂದಿನ ಜೀವನ ಹೇಗೆ ಅಂತ ಚಿಂತಿಸುತ್ತಿದ್ದಾರೆ. ತುಮಕೂರು ಹೊರವಲಯದ ಹನುಮಂತಪುರ ಬಳಿ ರೈತ ಕುಮಾರ್ ಎಂಬುವವರು ಎಲೆಕೋಸು ಬೆಳೆದಿದ್ದರು. ಆದರೆ ಅಪಾರ ಮಳೆಗೆ ಬೆಳೆ ಮಣ್ಣು ಪಾಲಾಗಿದೆ. ಸುಮಾರು ಎರಡು ಎಕರೆಯಲ್ಲಿ ಬೆಳೆದಿದ್ದ ಎಲೆಕೋಸು ಮಳೆಗೆ ಸಂಪೂರ್ಣ ಹಾನಿಯಾಗಿದೆ. ಒಂದು ಲಕ್ಷ ಅಧಿಕ ಹಣ ಖರ್ಚು ಮಾಡಿ ಬೆಳೆದ ಎಲೆಕೋಸು ಮಳೆಗೆ ಹಾನಿಯಾಗಿದ್ದರಿಂದ ರೈತನಿಗೆ ದಿಕ್ಕೇ ತೋಚದಂತಾಗಿದೆ.

ಮಳೆ ಬರುವ ಮುನ್ನ ಎಲೆಕೋಸಿನ ಬೆಲೆ ಒಂದು ಕೆಜಿಗೆ 4-5 ರೂ ಇತ್ತು. ಸದ್ಯ ಮಾರ್ಕೆಟ್ ದರ 20-22 ರೂ, ಆಗಿದೆ. 6-8 ಲಕ್ಷ ಆದಾಯ ಪಡೆಯುತ್ತಿದ್ದ ರೈತ ಕಂಗಾಲಾಗಿದ್ದಾರೆ.

ಇನ್ನು ಯಾದಗಿರಿ ಜಿಲ್ಲೆಯಾದ್ಯಂತ ನಿನ್ನೆ ಅಬ್ಬರಿಸಿದ ಮಳೆರಾಯ ರೈತರ ಬದುಕನ್ನೇ ಕಸಿದುಕೊಂಡಿದೆ. ಮಳೆ ಅಬ್ಬರಕ್ಕೆ ಅನ್ನದಾತ ಕಂಗಲಾಗಿದ್ದಾನೆ. ಕೈಗೆ ಬಂದ ಬೆಳೆ ಸಂಪೂರ್ಣ ನೆಲಕುರುಳಿದೆ. ಕಟಾವಿಗೆ ಬಂದಿದ್ದ ನೂರಾರು ಎಕರೆ ಭತ್ತದ ಬೆಳೆ ನಾಶವಾಗಿದೆ. ಸಾವಿರಾರು ರೂ. ಖರ್ಚು ಮಾಡಿ ಭತ್ತ ಬೆಳೆದಿದ್ದರು. ಆದರೆ ಬೆಳೆ ರೈತನ ಕೈ ಸೇರುವ ಮೊದಲೇ ನಾಶವಾಗಿದೆ. ಮಳೆ ನೀರು ಭತ್ತ ಪೈರಿನಲ್ಲಿ ನಿಂತಿದ್ದು, ಕೊಳೆತು ಹೋಗುವ ಆತಂಕ ಶರುವಾಗಿದೆ.

ಇನ್ನೊಂದು ಕಡೆ ಜೋಳ ಹಾಗೂ ಹತ್ತಿ ಜಮೀನುಗಳಿಗೂ ಮಳೆ ನೀರು ನುಗ್ಗಿದೆ. ಜೋಳದ ಜಮೀನುಗಳು ಸದ್ಯ ಕೆರೆಯಂತಾಗಿದೆ. ಮಳೆ ಅಭರಕ್ಕೆ ಹತ್ತಿ ಬೆಳೆ ಹಾಳಾಗಿದೆ. ಹೀಗಾಗಿ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ.

ಸೂಕ್ತ ಬೆಲೆ ಸಿಗದೆ ರೈತರು ಕಂಗಾಲು ಚಿಕ್ಕಬಳ್ಳಾಪುರದಲ್ಲಿ ಧಾರಾಕರ ಮಳೆಯ ಮದ್ಯೆಯೂ ಅಲ್ಲಿಷ್ಟು ಇಲ್ಲಿಷ್ಟು ರೈತರು ಬೆಳೆದ ತರಕಾರಿ ಬೆಳೆಗಳನ್ನು ಕಾಪಾಡಿಕೊಂಡು ಮಾರ್ಕೆಟ್​ಗೆ ತಂದರೆ ರೈತರಿಗೆ ಸಮರ್ಪಕ ಬೆಲೆ ದೊರೆಯುತ್ತಿಲ್ಲ. ಆದರೆ ಗ್ರಾಹಕರು ಮೂರು ಪಟ್ಟು ದುಬಾರಿಯಾಗಿ ತರಕಾರಿಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಇನ್ನೂ ಕೆಜಿ ಭೀನ್ಸ್​ಗೆ 90 ರೂಪಾಯಿ ಕೊಟ್ಟು ಗ್ರಾಹಕರು ಖರೀದಿ ಮಾಡುತ್ತಿದ್ದರೆ, ರೈತರಿಗೆ ಕೇವಲ 25 ರೂಪಾಯಿ ಮಾತ್ರ ದೊರೆಯುತ್ತಿದೆ. ದಲ್ಲಾಳಿಗಳು ವರ್ತಕರು ಸೇರಿಕೊಂಡು ರೈತರ ಬೆಳೆಗೆ ಸೂಕ್ತ ಬೆಲೆ ನೀಡುತ್ತಿಲ್ಲ.

ಇದನ್ನೂ ಓದಿ

ಹಳ್ಳಿಗುಡಿ ಟೋಲ್‌ ನಾಕಾ ಬಳಿ ಏಕಾಏಕಿ ಹೊತ್ತಿ ಉರಿದ ಸಿಮೆಂಟ್ ಲಾರಿ

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಹೊಸ ಕೊರೊನಾ ಮಾರ್ಗಸೂಚಿ ಬಿಡುಗಡೆ; ಇಲ್ಲಿದೆ ವಿವರ

Published On - 9:01 am, Wed, 24 November 21

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ