AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ!

ಖರೀದಿ ಮಾಡಿದ ಕೆಲವೆ ತಿಂಗಳುಗಳಲ್ಲಿ ಹಿಟಾಚಿ ಯಂತ್ರ ಕೆಟ್ಟುಹೋಗಿದ್ದು, ವಾರಂಟಿ ಇದ್ದರೂ ಕಂಪನಿ ಸ್ಪಂದಿಸದ ಕಾರಣ ರೊಚ್ಚಿಗೆದ್ದ ಗ್ರಾಹಕರೊಬ್ಬರು ಟಾಟಾ ಹಿಟಾಚಿ ಶೋರೂಮ್​ಗೇ ಬೀಗ ಜಡಿದ ಘಟನೆ ತುಮಕೂರು ಜಿಲ್ಲೆಯ ಅಂತರಸನಹಳ್ಳಿ ಬಳಿ ನಡೆದಿತ್ತು. ಅಷ್ಟಾದರೂ ಕಂಪನಿಯವರು ಸ್ಪಂದಿಸದ ಕಾರಣ ಗ್ರಾಹಕ ತನ್ನ ಹೋರಾಟವನ್ನು ವಿಭಿನ್ನ ರೀತಿಯಲ್ಲಿ ಮುಂದುವರಿಸಿದ್ದಾರೆ. ಅವರು ಏನು ಮಾಡಿದ್ದಾರೆ ಗೊತ್ತೇ?

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ!
ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆImage Credit source: tv9
Jagadisha B
| Edited By: |

Updated on: Feb 11, 2026 | 12:19 PM

Share

ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಇಷ್ಟಾದರೂ ಕಂಪನಿ ಸ್ಪಂದಿಸದ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (Tata Hitachi) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಹಿಟಾಚಿ ಶೋರೂಂಗೆ ಬೀಗ ಪ್ರಕರಣದ ಹಿನ್ನೆಲೆ

ತುಮಕೂರಿನ ಗಿರೀಶ್ ಎಂಬ ಗ್ರಾಹಕ ಸುಮಾರು ಐದು ತಿಂಗಳ ಹಿಂದೆ 52 ಲಕ್ಷ ರೂಪಾಯಿ ನೀಡಿ ಹೊಸ ಹಿಟಾಚಿ ಯಂತ್ರವನ್ನು ಖರೀದಿಸಿದ್ದರು. ಆದರೆ ಖರೀದಿಸಿದ ಮೂರೇ ತಿಂಗಳಲ್ಲಿ ಯಂತ್ರ ದೋಷಗೊಂಡು ಕಾರ್ಯನಿರ್ವಹಿಸದೇ ನಿಂತಿದ್ದು, ಅದನ್ನು ಸರಿಪಡಿಸುವಂತೆ ಕಂಪನಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಅವರು ಆರೋಪಿಸಿದ್ದಾರೆ. ಕಂಪನಿ ನಡೆಗೆ ಬೇಸತ್ತ ಗಿರೀಶ್ ಶೋರೂಂ ಬಾಗಿಲಿಗೆ ಬೀಗ ಹಾಕಿ, ಹಿಟಾಚಿ ಯಂತ್ರವನ್ನೇ ಶೋರೂಂ ಪ್ರವೇಶದ್ವಾರಕ್ಕೆ ಅಡ್ಡವಾಗಿ ನಿಲ್ಲಿಸಿ ಪ್ರತಿಭಟನೆ ಆರಂಭಿಸಿದ್ದರು. ಇದರಿಂದ ಶೋರೂಂ ಸಿಬ್ಬಂದಿ ಒಳಗೆ ಪ್ರವೇಶಿಸಲು ಸಾಧ್ಯವಾಗದೆ ಹೊರಗಡೆಯೇ ಕಾಯುವಂತಾಗಿದೆ.

ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತ ಗ್ರಾಹಕ!

ಬುಧವಾರ ಶೋರೂಂ ಮುಂದೆ ಶಾಮಿಯಾನ ಹಾಕಿ ಧರಣಿ ಕುಳಿತಿರುವ ಗಿರೀಶ್, ಸಮಸ್ಯೆ ಬಗೆಹರಿಸಿ ಯಂತ್ರವನ್ನು ದುರಸ್ತಿ ಮಾಡಿಕೊಡುವವರೆಗೂ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಟಾಟಾ ಕಂಪನಿಯಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲವೆಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸದಾಗಿ ಖರೀದಿಸಿದ ಹಿಟಾಚಿ ಕೆಟ್ಟುಹೋಯ್ತೆಂದು ಶೋರೂಮ್​ಗೇ ಬೀಗ ಹಾಕಿದ ಗ್ರಾಹಕ!

ಘಟನೆ ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದ್ದು, ಗ್ರಾಹಕ ಹಾಗೂ ಕಂಪನಿ ನಡುವೆ ಸಮಸ್ಯೆ ಹೇಗೆ ಬಗೆಹರಿಯಲಿದೆ ಎಂಬುದೇ ಸ್ಥಳೀಯರ ಕುತೂಹಲವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್