AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಾಯ ಇಲಾಖೆಯ ಯಡವಟ್ಟು: ಯುವಕನ ಅಂತ್ಯಸಂಸ್ಕಾರಕ್ಕೆ ಪರದಾಟ

ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದ ಸರ್ವೆ ನಂ 43 ರಲ್ಲಿ ಸ್ಮಶಾನಕ್ಕಾಗಿ 20 ಗುಂಟೆ ಜಮೀನು ಮಂಜೂರು ಮಾಡಿದೆ. ಹಾಗೆಂದೇ, 2019 ರಲ್ಲಿ ಗ್ರಾಮ ಪಂಚಾಯತ್​ಗೆ ಭೂಮಿ ಹಸ್ತಾಂತರ ಮಾಡಲಾಗಿತ್ತು. ಆದರೆ ಅದೇ ಕಂದಾಯ ಇಲಾಖೆಯು ಸಸ್ಯಕ್ಷೇತ್ರಕ್ಕೆಂದು 1983 ರಲ್ಲಿಯೇ ಇದೇ ಜಮೀನನ್ನು ಅರಣ್ಯ ಇಲಾಖೆಗೆ ಮಂಜೂರು ಮಾಡಿರುವ ಮಾಹಿತಿಯೂ ಇದೆ.

ಕಂದಾಯ ಇಲಾಖೆಯ ಯಡವಟ್ಟು: ಯುವಕನ ಅಂತ್ಯಸಂಸ್ಕಾರಕ್ಕೆ ಪರದಾಟ
ಕಂದಾಯ ಇಲಾಖೆಯ ಯಡವಟ್ಟು: ಯುವಕನ ಅಂತ್ಯಸಂಸ್ಕಾರಕ್ಕೆ ಪರದಾಟ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Oct 27, 2023 | 12:55 PM

Share

ತುಮಕೂರು, ಅಕ್ಟೋಬರ್​ 27: ಅನಾರೋಗ್ಯದಿಂದ ಸಾವನ್ನಪ್ಪಿದ ಸುರೇಶ್ ಎಂಬ ಯುವಕನ (Dalit Youth) ಅಂತ್ಯಸಂಸ್ಕಾರಕ್ಕೆ ಪರದಾಡುವ ಪ್ರಸಂಗ ರಾಜ್ಯ ಗೃಹ ಸಚಿವರ ಜಿಲ್ಲೆಯಲ್ಲಿ (karnataka home minister district) ನಡೆದಿದೆ. ಕಂದಾಯ ಇಲಾಖೆಯ ಯಡವಟ್ಟಿನಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ. ಸಸ್ಯಕ್ಷೇತ್ರದ ಭೂಮಿ ಸ್ಮಶಾನಕ್ಕೆ ನೀಡಿ ಕಂದಾಯ ಇಲಾಖೆ ಯಡವಟ್ಟು (negligence of Revenue Department) ಮಾಡಿದೆ. ಅಂದಹಾಗೆ ಇದು ಒಂದೆರಡು ವರ್ಷದ ಮಾತಲ್ಲ, ಸ್ಮಶಾನದ ಭೂಮಿಗಾಗಿ ಬೈಚಾಪುರ ದಲಿತ ಕುಟುಂಬಸ್ಥರು 40 ವರ್ಷದಿಂದ ಹೀಗೆ ಪರದಾಡುತ್ತಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ವಸ್ತುಸ್ಥಿತಿಯಲ್ಲಿ ಸಸ್ಯಕ್ಷೇತ್ರದ ಭೂಮಿಗಾಗಿ ಸಾಮಾಜಿಕ ವಲಯ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಹಾಗಾಗಿ ಇದು ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ನಡುವೆ ಸಂಘರ್ಷವಾಗಿ ಮಾರ್ಪಟ್ಟಿದ್ದು, ಕಂದಾಯ ಇಲಾಖೆ ಬೇಜವಾಬ್ದಾರಿತನ ಇಲ್ಲಿ ಎದ್ದುಕಾಣುತ್ತಿದೆ.

Also Read: ಮೂರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ, ಆದರೆ ಈಗ ಪತ್ನಿಗೆ ಚಿತ್ರಹಿಂಸೆ ನೀಡ್ತಿದ್ದಾನಂತೆ

ಬೈಚಾಪುರ ಗ್ರಾಮದ ದಲಿತ ಯುವಕ ಮೃತ ಸುರೇಶ್ (24) ಅಂತ್ಯಸಂಸ್ಕಾರಕ್ಕಾಗಿ ಪರದಾಟ ನಡೆಸಿದ್ದಾರೆ. ಗ್ರಾಮದ ಸರ್ವೆ ನಂ 43 ರಲ್ಲಿ ಸ್ಮಶಾನಕ್ಕಾಗಿ 20 ಗುಂಟೆ ಜಮೀನು ಮಂಜೂರು ಮಾಡಿದೆ. ಹಾಗೆಂದೇ, 2019 ರಲ್ಲಿ ಗ್ರಾಮ ಪಂಚಾಯತ್​ಗೆ ಭೂಮಿ ಹಸ್ತಾಂತರ ಮಾಡಲಾಗಿತ್ತು. ಆದರೆ ಅದೇ ಕಂದಾಯ ಇಲಾಖೆಯು ಸಸ್ಯಕ್ಷೇತ್ರಕ್ಕೆಂದು 1983 ರಲ್ಲಿಯೇ ಇದೇ ಜಮೀನನ್ನು ಅರಣ್ಯ ಇಲಾಖೆಗೆ ಮಂಜೂರು ಮಾಡಿರುವ ಮಾಹಿತಿಯೂ ಇದೆ.

ಹಾಗಾಗಿ ಸದ್ಯದ ವಿವಾದಗ್ರಸ್ತ ಆ ಭೂಮಿ ತಮಗೆ ಮಂಜೂರು ಆಗಿದೆ ಎಂದು ಸಾಮಾಜಿಕ ವಲಯ ಅರಣ್ಯ ಸಿಬ್ಬಂದಿ ಸದರಿ ಜಾಗವನ್ನು ಗ್ರಾಮಸ್ಥರಿಗೆ ಬಿಟ್ಟುಕೊಡಲು ತಯಾರಿಲ್ಲ. ಯುವಕ ಸುರೇಶ್ ಅಂತ್ಯಕ್ರಿಯೆ ಮಾಡಲು ಅರಣ್ಯ ಸಿಬ್ಬಂದಿ ಅವಕಾಶ ನೀಡಿಲ್ಲ. ಕಂದಾಯ ಇಲಾಖೆಯ ಆ ಯಡವಟ್ಟಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಸ್ಮಶಾನಕ್ಕೂ ಹಾಗೂ ಸಸ್ಯಕ್ಷೇತ್ರಕ್ಕೂ ಒಂದೇ ಜಾಗ ತೋರಿಸಿರುವ ಕಂದಾಯ ಇಲಾಖೆ ಜನರನ್ನು ಪರದಾಡುವಂತೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Fri, 27 October 23

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು