Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಾಯ ಇಲಾಖೆಯ ಯಡವಟ್ಟು: ಯುವಕನ ಅಂತ್ಯಸಂಸ್ಕಾರಕ್ಕೆ ಪರದಾಟ

ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದ ಸರ್ವೆ ನಂ 43 ರಲ್ಲಿ ಸ್ಮಶಾನಕ್ಕಾಗಿ 20 ಗುಂಟೆ ಜಮೀನು ಮಂಜೂರು ಮಾಡಿದೆ. ಹಾಗೆಂದೇ, 2019 ರಲ್ಲಿ ಗ್ರಾಮ ಪಂಚಾಯತ್​ಗೆ ಭೂಮಿ ಹಸ್ತಾಂತರ ಮಾಡಲಾಗಿತ್ತು. ಆದರೆ ಅದೇ ಕಂದಾಯ ಇಲಾಖೆಯು ಸಸ್ಯಕ್ಷೇತ್ರಕ್ಕೆಂದು 1983 ರಲ್ಲಿಯೇ ಇದೇ ಜಮೀನನ್ನು ಅರಣ್ಯ ಇಲಾಖೆಗೆ ಮಂಜೂರು ಮಾಡಿರುವ ಮಾಹಿತಿಯೂ ಇದೆ.

ಕಂದಾಯ ಇಲಾಖೆಯ ಯಡವಟ್ಟು: ಯುವಕನ ಅಂತ್ಯಸಂಸ್ಕಾರಕ್ಕೆ ಪರದಾಟ
ಕಂದಾಯ ಇಲಾಖೆಯ ಯಡವಟ್ಟು: ಯುವಕನ ಅಂತ್ಯಸಂಸ್ಕಾರಕ್ಕೆ ಪರದಾಟ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಸಾಧು ಶ್ರೀನಾಥ್​

Updated on:Oct 27, 2023 | 12:55 PM

ತುಮಕೂರು, ಅಕ್ಟೋಬರ್​ 27: ಅನಾರೋಗ್ಯದಿಂದ ಸಾವನ್ನಪ್ಪಿದ ಸುರೇಶ್ ಎಂಬ ಯುವಕನ (Dalit Youth) ಅಂತ್ಯಸಂಸ್ಕಾರಕ್ಕೆ ಪರದಾಡುವ ಪ್ರಸಂಗ ರಾಜ್ಯ ಗೃಹ ಸಚಿವರ ಜಿಲ್ಲೆಯಲ್ಲಿ (karnataka home minister district) ನಡೆದಿದೆ. ಕಂದಾಯ ಇಲಾಖೆಯ ಯಡವಟ್ಟಿನಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ. ಸಸ್ಯಕ್ಷೇತ್ರದ ಭೂಮಿ ಸ್ಮಶಾನಕ್ಕೆ ನೀಡಿ ಕಂದಾಯ ಇಲಾಖೆ ಯಡವಟ್ಟು (negligence of Revenue Department) ಮಾಡಿದೆ. ಅಂದಹಾಗೆ ಇದು ಒಂದೆರಡು ವರ್ಷದ ಮಾತಲ್ಲ, ಸ್ಮಶಾನದ ಭೂಮಿಗಾಗಿ ಬೈಚಾಪುರ ದಲಿತ ಕುಟುಂಬಸ್ಥರು 40 ವರ್ಷದಿಂದ ಹೀಗೆ ಪರದಾಡುತ್ತಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ವಸ್ತುಸ್ಥಿತಿಯಲ್ಲಿ ಸಸ್ಯಕ್ಷೇತ್ರದ ಭೂಮಿಗಾಗಿ ಸಾಮಾಜಿಕ ವಲಯ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಹಾಗಾಗಿ ಇದು ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ನಡುವೆ ಸಂಘರ್ಷವಾಗಿ ಮಾರ್ಪಟ್ಟಿದ್ದು, ಕಂದಾಯ ಇಲಾಖೆ ಬೇಜವಾಬ್ದಾರಿತನ ಇಲ್ಲಿ ಎದ್ದುಕಾಣುತ್ತಿದೆ.

Also Read: ಮೂರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ, ಆದರೆ ಈಗ ಪತ್ನಿಗೆ ಚಿತ್ರಹಿಂಸೆ ನೀಡ್ತಿದ್ದಾನಂತೆ

ಬೈಚಾಪುರ ಗ್ರಾಮದ ದಲಿತ ಯುವಕ ಮೃತ ಸುರೇಶ್ (24) ಅಂತ್ಯಸಂಸ್ಕಾರಕ್ಕಾಗಿ ಪರದಾಟ ನಡೆಸಿದ್ದಾರೆ. ಗ್ರಾಮದ ಸರ್ವೆ ನಂ 43 ರಲ್ಲಿ ಸ್ಮಶಾನಕ್ಕಾಗಿ 20 ಗುಂಟೆ ಜಮೀನು ಮಂಜೂರು ಮಾಡಿದೆ. ಹಾಗೆಂದೇ, 2019 ರಲ್ಲಿ ಗ್ರಾಮ ಪಂಚಾಯತ್​ಗೆ ಭೂಮಿ ಹಸ್ತಾಂತರ ಮಾಡಲಾಗಿತ್ತು. ಆದರೆ ಅದೇ ಕಂದಾಯ ಇಲಾಖೆಯು ಸಸ್ಯಕ್ಷೇತ್ರಕ್ಕೆಂದು 1983 ರಲ್ಲಿಯೇ ಇದೇ ಜಮೀನನ್ನು ಅರಣ್ಯ ಇಲಾಖೆಗೆ ಮಂಜೂರು ಮಾಡಿರುವ ಮಾಹಿತಿಯೂ ಇದೆ.

ಹಾಗಾಗಿ ಸದ್ಯದ ವಿವಾದಗ್ರಸ್ತ ಆ ಭೂಮಿ ತಮಗೆ ಮಂಜೂರು ಆಗಿದೆ ಎಂದು ಸಾಮಾಜಿಕ ವಲಯ ಅರಣ್ಯ ಸಿಬ್ಬಂದಿ ಸದರಿ ಜಾಗವನ್ನು ಗ್ರಾಮಸ್ಥರಿಗೆ ಬಿಟ್ಟುಕೊಡಲು ತಯಾರಿಲ್ಲ. ಯುವಕ ಸುರೇಶ್ ಅಂತ್ಯಕ್ರಿಯೆ ಮಾಡಲು ಅರಣ್ಯ ಸಿಬ್ಬಂದಿ ಅವಕಾಶ ನೀಡಿಲ್ಲ. ಕಂದಾಯ ಇಲಾಖೆಯ ಆ ಯಡವಟ್ಟಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಸ್ಮಶಾನಕ್ಕೂ ಹಾಗೂ ಸಸ್ಯಕ್ಷೇತ್ರಕ್ಕೂ ಒಂದೇ ಜಾಗ ತೋರಿಸಿರುವ ಕಂದಾಯ ಇಲಾಖೆ ಜನರನ್ನು ಪರದಾಡುವಂತೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Fri, 27 October 23

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು