AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಜಿಲ್ಲೆಯಲ್ಲಿ ಹೆಚ್ಚಾದ ಡೆಂಗ್ಯೂ; ಮನೆ ಮನೆಗೂ ಲಾರ್ವಾ ಸರ್ವೆ ನಡೆಸಲು ಡಿಎಚ್​ಓ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಡೆಂಘೀ/ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂಬತ್ತು ತಿಂಗಳಲ್ಲಿ ಒಟ್ಟು 138 ಪ್ರಕರಣಗಳು ದೃಢಪಟ್ಟಿದ್ದು, ಡೆಂಘೀ ಎದುರಿಸಲು ಜಿಲ್ಲಾ ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಅದರಂತೆ ಪ್ರತಿ ಶುಕ್ರವಾರದಂದು ಮನೆ ಮನೆಗೂ ಲಾರ್ವಾ ಸರ್ವೆ ನಡೆಸಲು ಡಿಎಚ್​ಓ ಸೂಚನೆ ನೀಡಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಹೆಚ್ಚಾದ ಡೆಂಗ್ಯೂ; ಮನೆ ಮನೆಗೂ ಲಾರ್ವಾ ಸರ್ವೆ ನಡೆಸಲು ಡಿಎಚ್​ಓ ಸೂಚನೆ
ತುಮಕೂರಿನಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Sep 21, 2023 | 10:00 AM

Share

ತುಮಕೂರು, ಸೆ.21: ಜಿಲ್ಲೆಯಲ್ಲಿ ಡೆಂಘೀ/ ಡೆಂಗ್ಯೂ (Dengue) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂಬತ್ತು ತಿಂಗಳಲ್ಲಿ ಒಟ್ಟು 138 ಪ್ರಕರಣಗಳು ದೃಢಪಟ್ಟಿದ್ದು, ಡೆಂಘೀ ಎದುರಿಸಲು ಜಿಲ್ಲಾ ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಅದರಂತೆ ಪ್ರತಿ ಶುಕ್ರವಾರದಂದು ಮನೆ ಮನೆಗೂ ಲಾರ್ವಾ ಸರ್ವೆ ನಡೆಸಲು ಡಿಎಚ್​ಓ ಸೂಚನೆ ನೀಡಿದ್ದಾರೆ.

ಮಾನ್ಸೂನ್ ಮಳೆಯಿಂದ ಡೆಂಘೀ ಜ್ವರದ ಪ್ರಕರಣ ಹೆಚ್ಚಳವಾಗುತ್ತಿದ್ದು, ಟಯರ್, ಚಿಪ್ಪುತೊಟ್ಟಿಗಳಲ್ಲಿ ನಿಂತ ಮಳೆನೀರಿನಿಂದ ರೋಗ ಹರಡುವ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಇಡಿಸಿಜಿಪಿ ಎಂಬ ಸೊಳ್ಳೆ ಮೂಲಕವೂ ವೈರಸ್ ಹರಡುತ್ತಿದೆ. ಇಡಿಸಿಜಿಪಿ ಸೊಳ್ಳೆ ಶುದ್ಧ ನೀರಿನ ಮೂಲಕ ಉತ್ಪತ್ತಿಯಾಗುತ್ತವೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು; ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ

ಜಿಲ್ಲೆಯಲ್ಲಿ ಡೆಂಘೀ ಎದುರಿಸಲು ಜಿಲ್ಲಾ ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸಿದ್ದು, ಮಳೆ‌ನೀರು ಶೇಖರಣೆ ಮಾಡದಂತೆ ಡಿಎಚ್​ಓ ಮಂಜುನಾಥ್ ಸೂಚನೆ ನೀಡಿದ್ದಾರೆ. ಅಲ್ಲದೆ, ಡೆಂಘೀ ತಡೆಗಟ್ಟಲು ಪ್ರತಿ ಶುಕ್ರವಾರ ಮನೆ ಮನೆಗೂ ಲಾರ್ವಾ ಸರ್ವೆ ನಡೆಸಲು ಸೂಚಿಸಿದ್ದಾರೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಮಹಾನಗರ ಪಾಲಿಕೆ, ಎಲ್ಲಾ ತಾಲೂಕು ಅಧಿಕಾರಿಗಳಿಗೆ ಪತ್ರ ಬರೆದಿರುವ ಮಂಜುನಾಥ್, ಹೆಚ್ಚು ಸೊಳ್ಳೆಯಿರುವ ಪ್ರದೇಶದಲ್ಲಿ ಓಂದು ವಾರ ಔಷಧಿ ಸಿಂಪಡಣೆಗೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಸೊಳ್ಳೆಪರದೆ ಬಳಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದ್ದು, ಜ್ವರ ಬಂದ ತಕ್ಷಣ ಚಿಕಿತ್ಸೆ ಪಡೆದು ರಕ್ತ ಪರೀಕ್ಷೆ ಮಾಡಿಸಲು ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ ಅಂತಾನೂ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...