AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್ ಪಟ್ಟಣದಾದ್ಯಂತ ‘ಡಿಕೆಶಿ ಸಿಎಂ ಆಗಲಿ’ ಎಂಬ ಪ್ಲೆಕ್ಸ್‌: ಶಾಸಕ ರಂಗನಾಥ್ ನೇತೃತ್ವದಲ್ಲಿ ನವಚಂಡಿಕಾ ಹೋಮ

ತುಮಕೂರು ಜಿಲ್ಲೆಯ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಭಿಮಾನಿಗಳು ಚಂಡಿಕಾ ಹೋಮ ನಡೆಸಿದರು. ತಮ್ಮ ನಾಯಕರು ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಸಿಎಂ ಬದಲಾವಣೆ ಚರ್ಚೆಗಳ ನಡುವೆ ಈ ಹೋಮ ರಾಜಕೀಯ ಮಹತ್ವ ಪಡೆದಿದೆ. ಆದರೆ, ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಶಾಸಕ ರಂಗನಾಥ್ ನಿರಾಕರಿಸಿದ್ದಾರೆ.

ಕುಣಿಗಲ್  ಪಟ್ಟಣದಾದ್ಯಂತ ‘ಡಿಕೆಶಿ ಸಿಎಂ ಆಗಲಿ’ ಎಂಬ ಪ್ಲೆಕ್ಸ್‌: ಶಾಸಕ ರಂಗನಾಥ್ ನೇತೃತ್ವದಲ್ಲಿ ನವಚಂಡಿಕಾ ಹೋಮ
ಶಾಸಕ ರಂಗನಾಥ್ ನೇತೃತ್ವದಲ್ಲಿ ನವಚಂಡಿಕಾ ಹೋಮ
Jagadisha B
| Updated By: Ganapathi Sharma|

Updated on: Nov 12, 2025 | 5:03 PM

Share

ತುಮಕೂರು, ನವೆಂಬರ್ 12: ತುಮಕೂರು ಜಿಲ್ಲೆಯ ಕುಣಿಗಲ್  (Kunigal) ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಂಡಿಕಾ ಹೋಮ ಆಯೋಜಿಸಿದ್ದು, ತಮ್ಮ ನಾಯಕರು ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಹುಲಿಯೂರಮ್ಮ ದೇವಸ್ಥಾನದಲ್ಲಿ ನಡೆದ ಈ ಚಂಡಿಕಾ ಹೋಮ ಬೆಳಗ್ಗಿನಿಂದಲೇ ಭಕ್ತಿಭಾವದಿಂದ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಹುಲಿಯೂರುದುರ್ಗ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ದಂಪತಿ, ವಿ.ಎಸ್.ಎಸ್.ಎನ್. ಅಧ್ಯಕ್ಷ ಮಧು ದಂಪತಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ದಂಪತಿ, ಪಂಚಾಯಿತಿ ಸದಸ್ಯ ನಾಗೇಶ್ ದಂಪತಿ ಸೇರಿದಂತೆ ಹಲವು ನಾಯಕರು ಹೋಮ ಹವನದಲ್ಲಿ ಪಾಲ್ಗೊಂಡಿದ್ದಾರೆ. ಪಟ್ಟಣದಾದ್ಯಂತ ಡಿಕೆಶಿ ಸಿಎಂ ಆಗಲಿ ಎಂಬ ಆಶಯದೊಂದಿಗೆ ಪ್ಲೆಕ್ಸ್‌ಗಳು ಅಲಂಕರಿಸಲ್ಪಟ್ಟಿವೆ.

ಕುಣಿಗಲ್ ಶಾಸಕ ರಂಗನಾಥ್ ಹೋಮ ಹವನದಲ್ಲಿ ಭಾಗಿಯಾಗಿ ಮಾತನಾಡಿ, ಹುಲಿಯೂರಮ್ಮ ದೇವಾಲಯ ಬಹುಶಕ್ತಿಯ ಸ್ಥಳ. ಹಿಂದೆಯೂ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಹಳೆಊರಮ್ಮ ದೇವಾಲಯಕ್ಕೆ ಬಂದು ಆಶೀರ್ವಾದ ಪಡೆದಿದ್ದರು. ಇದೇ ರೀತಿಯಾಗಿ ಈ ಬಾರಿ ನಮ್ಮ ನಾಯಕ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ಸ್ ಪಕ್ಷದ ಎಲ್ಲ ನಾಯಕರಿಗೂ ಒಳ್ಳೆಯದು ಆಗಲಿ ಎಂಬ ಸಂಕಲ್ಪದ ಪೂಜೆ ನಡೆಸಲಾಗಿದೆ ಎಂದು ಹೇಳಿದರು.

ನವಚಂಡಿ ಯಾಗ ಎಂದರೆ 9 ದೇವತೆಗಳ ಶಕ್ತಿ ಆಹ್ವಾನಿಸುವ ಶಕ್ತಿಪೂಜೆ. ಪಕ್ಷಕ್ಕೆ ಶಕ್ತಿಯೂ, ಏಕತೆಯೂ ಬರಲಿ ಎಂಬ ಉದ್ದೇಶದಿಂದ ಈ ಹೋಮ ಹವನ ಆಯೋಜಿಸಲಾಗಿದೆ ಎಂದು ವಿವರಿಸಿದರು. ಹೋಮದಿಂದ ಡಿಕೆಶಿಗೆ ರಾಜಕೀಯ ಲಾಭವಾಗಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನನಗೆ ಈ ವಿಷಯದ ಬಗ್ಗೆ ಮಾತನಾಡಬಾರದು ಎಂದು ನೋಟಿಸ್ ಕೊಟ್ಟಿದ್ದಾರೆ. ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ಡಿಕೆಶಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಎಲ್ಲರಿಗೂ ಒಳ್ಳೆಯದು ಆಗಲಿ ಅಷ್ಟೇ ನಾನು ಹೇಳಬಲ್ಲೆ ಎಂದರು.

ಇದನ್ನೂ ಓದಿ: ಕುಣಿಗಲ್ ಶಾಸಕ ಡಾ.ರಂಗನಾಥ್​ಗೂ ತಟ್ಟಿದ ಲೋಡ್​ಶೆಡ್ಡಿಂಗ್ ಬಿಸಿ; ಟಾರ್ಚ್​ ಬೆಳಕಿನಲ್ಲಿ ಶಾಸಕರ ಸಭೆ

ತಿಂಗಳ ಹಿಂದಷ್ಟೇ ‘ಡಿಕೆ ಶಿವಕುಮಾರ್ ಸಿಎಂ ಆಗಬೇಕು’ ಎಂದು ಹೇಳಿದ್ದ ವಿಚಾರವಾಗಿ ಶಾಸಕ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿತ್ತು. ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲೇ ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಹಾಗೂ ಕುಣಿಗಲ್ ರಂಗನಾಥ್ ಹೇಳಿಕೆ ನೀಡಿದ್ದರು. ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ ಎಂದು ಕೆಪಿಸಿಸಿ ಹೇಳಿದ್ದು, ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ನೋಟಿಸ್ ನೀಡಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ