AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ಹೋಗಿದ್ದವನಿಗೆ ಚಾಕು ಇರಿತ, ಬಿಜೆಪಿಗರಿಂದ ಹಲ್ಲೆ ಆರೋಪ

ತುಮಕೂರು ಜಿಲ್ಲೆಯ ಕುಣಿಗಲ್(Kunigal) ತಾಲ್ಲೂಕಿನ ನಡೇಮಾವಿನಪುರದಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನಿಗೆ ಚಾಕು ಇರಿದ ಆರೋಪ ಕೇಳಿಬಂದಿದೆ. ರಾಜಕೀಯ ವೈಷಮ್ಯ ಹಿನ್ನೆಲೆ‌ ಹಲ್ಲೆ ಮಾಡಿದ್ದಾರೆಂದು ಯೂತ್ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿಯಾಗಿರುವ ಕೀರ್ತಿ ಎಂಬುವವರು ದೂರು ನೀಡಿದ್ದಾರೆ.

ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ಹೋಗಿದ್ದವನಿಗೆ ಚಾಕು ಇರಿತ, ಬಿಜೆಪಿಗರಿಂದ ಹಲ್ಲೆ ಆರೋಪ
DK ಸುರೇಶ್ ನಾಮಪತ್ರ ಸಲ್ಲಿಕೆಗೆ ಹೋಗಿದ್ದವನ ಮೇಲೆ ಬಿಜೆಪಿಗರಿಂದ ಚಾಕು ಇರಿತ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on:Apr 07, 2024 | 3:18 PM

Share

ತುಮಕೂರು, ಏ.07: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ, ಬಿಜೆಪಿಯ ಮೂವರು ಕಾರ್ಯಕರ್ತರು ಹಲ್ಲೆ ಮಾಡಿ, ಬಳಿಕ ಚಾಕುವಿನಿಂದ ಇರಿದ ಆರೋಪ ಕೇಳಿಬಂದಿದೆ. ಕುಣಿಗಲ್ (Kunigal) ತಾಲ್ಲೂಕಿನ ನಡೇಮಾವಿನಪುರದಲ್ಲಿ ಘಟನೆ ನಡೆದಿದೆ. ವೆಂಕಟಗೌಡನಪಾಳ್ಯದ ಕೀರ್ತಿ ಹಲ್ಲೆಗೊಳಗಾದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ. ಚಂದ್ರು, ಜಗದೀಶ್​, ಸುನೀಲ್ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತರೆಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಕೀರ್ತಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಗ್ರೆಸ್​ ಮುಖಂಡ ಡಿಕೆ‌ ಸುರೇಶ್(DK Suresh) ಅವರ ನಾಮಪತ್ರ ಸಲ್ಲಿಕೆಗೆ ಯಾಕೆ‌ ಹೋಗಿದ್ದೆ ಅಂತ ಕೀರ್ತಿ ಅವರ ಜೊತೆ ಮೂವರು ಗಲಾಟೆ ತೆಗೆದಿದ್ದಾರೆ. ಬಳಿಕ ದೊಣ್ಣೆಯಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿದ್ದಾರೆ ಅಂತ ಆರೋಪ ಕೇಳಿಬಂದಿದೆ. ರಾಜಕೀಯ ವೈಷಮ್ಯ ಹಿನ್ನೆಲೆ‌ಯಲ್ಲಿ ಹಲ್ಲೆ ಮಾಡಿದ್ದಾರೆಂದು ಯೂತ್ ಕಾಂಗ್ರೆಸ್​​ಪ್ರಧಾನ ಕಾರ್ಯದರ್ಶಿ ಕೀರ್ತಿ ಪೊಲೀಸರಿಗೆ ತಿಳಿಸಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ ಪ್ರಕರಣ: ಗಲಾಟೆ ವೇಳೆ ಚನ್ನರಾಜ ಹಟ್ಟಿಹೊಳಿ ಕಾರು ಪತ್ತೆ

ಬೆಂಗಳೂರಿನಲ್ಲಿ ಕತ್ತು ಬಿಗಿದು ಪತ್ನಿ ಹತ್ಯೆಗೈದ ಪತಿ

ಬೆಂಗಳೂರು: ಪತಿ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ವೆಂಕಟೇಶ್ ಕೊಲೆ ಮಾಡಿದ ಆರೋಪಿ. ನೇತ್ರಾವತಿ ಮೃತ ದುರ್ದೈವಿ. ನಿನ್ನೆ(ಏ.06) ರಂದು ರಾತ್ರಿ ವೆಂಕಟೇಶ್ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಬೆಳಿಗ್ಗೆ ಪಕ್ಕದ ಮನೆಯವರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:27 pm, Sun, 7 April 24

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ