ಮಳೆಯಿಂದ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ದಂಪತಿ ಸಮಾಧಿ ಮುಳುಗಡೆ

ತುಮಕೂರು ಜಿಲ್ಲಾದ್ಯಂತ ಒಂದು ವಾರದಿಂದ ಭರ್ಜರಿ ಮಳೆ(Rain) ಆಗುತ್ತಿದ್ದು, ಈ ಹಿನ್ನಲೆ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ(Gubbi Veeranna) ದಂಪತಿ ಸಮಾಧಿಗಳು ನೀರಿನಲ್ಲಿ ಮುಳುಗಡೆಯಾಗಿದೆ. ಇನ್ನು ಸಮಾಧಿಗಳು ಇರುವ ಜಮೀನಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ದಾವೆ ಇದ್ದು, ಇದನ್ನೇ ನೆಪ ಮಾಡಿಕೊಂಡ ಸ್ಥಳೀಯ ಆಡಳಿತವು, ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎನ್ನಲಾಗಿದೆ.

ಮಳೆಯಿಂದ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ದಂಪತಿ ಸಮಾಧಿ ಮುಳುಗಡೆ
ಮಹೇಶ್ ಇ, ಭೂಮನಹಳ್ಳಿ Edited By: ಕಿರಣ್ ಹನುಮಂತ್​ ಮಾದಾರ್

Updated on: May 26, 2024 | 3:57 PM

ತುಮಕೂರು, ಮೇ.26: ಜಿಲ್ಲಾದ್ಯಂತ ಒಂದು ವಾರದಿಂದ ಉತ್ತಮ ಮಳೆ(Rain) ಆಗುತ್ತಿದ್ದು, ಈ ಹಿನ್ನಲೆ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ(Gubbi Veeranna) ಹಾಗೂ ಪತ್ನಿ ಸಮಾಧಿಗಳು ನೀರಿನಲ್ಲಿ ಮುಳುಗಡೆಯಾಗಿದೆ. ದಂಪತಿ ಸಮಾಧಿಗಳು ತಗ್ಗಿನ ಪ್ರದೇಶದಲ್ಲಿ ಇರುವುದರಿಂದ ಮಳೆಯ ನೀರು ಹರಿಯಲು ವ್ಯವಸ್ಥಿತ ಕ್ರಮ ಕೈಗೊಂಡಿಲ್ಲ. ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತಿ ಆಡಳಿತದ ತೀವ್ರ ನಿರ್ಲಕ್ಷ್ಯಕ್ಕೆ ಸಮಾಧಿಗಳು ಮುಳುಗಿವೆ.

ಇನ್ನು ಸಮಾಧಿಗಳು ಇರುವ ಜಮೀನಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ದಾವೆ ಇದ್ದು, ಇದನ್ನೇ ನೆಪ ಮಾಡಿಕೊಂಡ ಸ್ಥಳೀಯ ಆಡಳಿತವು, ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎನ್ನಲಾಗಿದೆ. ಗುಬ್ಬಿ ಪಟ್ಟಣದಲ್ಲಿ ವೀರಣ್ಣನವರ ಹೆಸರಿನಲ್ಲಿ ಟ್ರಸ್ಟ್ ರಚಿಸಿ ರಂಗಮಂದಿರ ನಿರ್ಮಿಸಿದ್ದರೂ, ಸಮಾಧಿಯನ್ನು ನಿರ್ಲಕ್ಷಿಸಿರುವುದು ವಿಪರ್ಯಾಸ ಎನ್ನುತ್ತಿದ್ದಾರೆ ರಂಗ ಕಲಾವಿದರು.

ಇದನ್ನೂ ಓದಿ:ಮಳೆಯಿಂದ ತೊಂದರೆಗೊಳಗಾದವರಿಗೆ ಸಮರ್ಪಕವಾಗಿ ನೆರವು ವಿತರಿಸುವಂತೆ ಅಧಿಕಾರಿಗಳಿಗೆ ಬೀಳಗಿ ಶಾಸಕ ತರಾಟೆ

ಗುಬ್ಬಿ ವೀರಣ್ಣ, ಕನ್ನಡ ನಾಡು ಕಂಡ ಶ್ರೇಷ್ಠ ರಂಗಕರ್ಮಿಗಳೊಲೊಬ್ಬರು. ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ವ್ಯವಸ್ಥಾಪಕರಾಗಿದ್ದ ವೀರಣ್ಣನವರು, ಅನೇಕ ಕಲಾವಿದರಿಗೆ ಉದ್ಯೋಗವಕಾಶ ಕಲ್ಪಿಸಿ, ಹಲವಾರು ಹೊಸ ರಂಗ ಪ್ರಯೋಗಳನ್ನು ಮಾಡಿ ಹಾಗೂ ಅನೇಕ ರಂಗಮಂದಿರಗಳನ್ನು ಕಟ್ಟಿಸಿ, ಕನ್ನಡ ಮತ್ತು ಕನ್ನಡ ರಂಗಭೂಮಿಯನ್ನು ಸಲುಹಿದ ಕರ್ಮಜೀವಿ. ಇದೀಗ ಇಂತಹ ವ್ಯಕ್ತಿಯ ಸಮಾಧಿ ರಕ್ಷಣೆಗೆ ಮುಂದಾಗದೆ ನಿರ್ಲಕ್ಷ್ಯ ತೋರಿರುವುದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us