AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್ ಪ್ರತಾಪ್​ಗೆ ಮತ್ತಷ್ಟು ಸಂಕಷ್ಟ: ಮುಖ್ಯಮಂತ್ರಿಗಳ ಕಚೇರಿಯಿಂದ ಬಂತು ಮಹತ್ವದ ಸೂಚನೆ

ತುಮಕೂರಿನಲ್ಲಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡ್ರೋನ್ ಪ್ರತಾಪ್​ಗೆ ಮತ್ತಷ್ಟು ಸಂಕಷ್ಟ: ಮುಖ್ಯಮಂತ್ರಿಗಳ ಕಚೇರಿಯಿಂದ ಬಂತು ಮಹತ್ವದ ಸೂಚನೆ
ಡ್ರೋನ್​ ಪ್ರತಾಪ್​​
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Dec 16, 2024 | 1:48 PM

Share

ತುಮಕೂರು, ಡಿಸೆಂಬರ್​ 16: ಕೃಷಿ ಹೊಂಡಕ್ಕೆ ಸೋಡಿಯಂ (Sodium) ಎಸೆದು ಸ್ಫೋಟಿಸಿದ್ದ ಘಟನೆಯ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿ (CM Office) ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಧುಗಿರಿ ಸಿಪಿಐ ಕಚೇರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತೆರಳಿ ಮಾಹಿತಿ ಪಡೆದುಕೊಂಡರು. ಬಳಿಕ, ಅಧಿಕಾರಿಗಳು ಸೋಡಿಯಂ ಸ್ಫೋಟಗೊಂಡ ಜನಕಲೋಟಿ ಬಳಿಯ ಕೃಷಿಹೊಂಡಕ್ಕೆ ತೆರಳಿ ನೀರು ಮತ್ತು ಸ್ಥಳದಲ್ಲಿದ್ದ ಕೆಮಿಕಲ್ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್​ಗೆ ಕಳುಹಿಸಿದ್ದಾರೆ.

ಏನಿದು ಪ್ರಕರಣ

ಡ್ರೋನ್​ ಪ್ರತಾಪ್ (Drone Pratap) ಅವರು ಕೆಲ ದಿನಗಳ ಹಿಂದೆ ತುಮಕೂರು ‌ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದರು. ಅನಮತಿ ಇಲ್ಲದೆ ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ​ಅವರನ್ನು ಕಳೆದ ಗುರುವಾರ (ಡಿಸೆಂಬರ್​ 12) ಮಿಡಿಗೇಶಿ ಪೊಲೀಸರ ಬಂಧಿಸಿದ್ದರು. ಬಳಿಕ, ಪೊಲೀಸರು ಡ್ರೋನ್​ ಪ್ರತಾಪ್​ನನ್ನು ಶುಕ್ರವಾರ (ಡಿಸೆಂಬರ್​ 13) ರಂದು ‌ಮಧುಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಿದ್ದರು.

ಸೋಮವಾರ (ಡಿ.16) ಪೊಲೀಸ್​ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್​ ಪ್ರತಾಪ್​ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ

ಪ್ರಕರಣ ಸಂಬಂಧ ಡ್ರೋನ್​ ಪ್ರತಾಪ್​ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಜಮೀನು ಮಾಲೀಕನ ಅನುಮತಿ ಇಲ್ಲದೆ ಸ್ಫೋಟ

ಜಮೀನು ಮಾಲೀಕನಿಗೆ ತಾನು ಸೋಡಿಯಂನಿಂದ ಸ್ಫೋಟಿಸುತ್ತಿರುವ ವಿಚಾರ ತಿಳಿಸದೆ, ಪ್ಲಾಸಿಕ್​ ಕವರ್​​ನಲ್ಲಿ ಸೋಡಿಯಂ ಉಂಡೆಯನ್ನು ಹಾಕಿ ಕೃಷಿ ಹೊಂಡದಲ್ಲಿ ಡ್ರೋನ್​ ಪ್ರತಾಪ್​ ಎಸೆದಿದ್ದಾರೆ. ಆಗ, ದೊಡ್ಡ ಪ್ರಮಾಣದ ಸದ್ದಿನೊಂದಿಗೆ ಸೋಡಿಯಂ ಸ್ಫೋಟಗೊಂಡಿದೆ. ಇದರಿಂದ ಅಕ್ಕ-ಪಕ್ಕದ ತೋಟದಲ್ಲಿದ್ದ ಜನರು ಮತ್ತು ಮನೆಯವರು ಗಾಭರಿಗೊಂಡಿದ್ದರು.

ಸ್ಫೋಟಕ್ಕೆ ಅನುಮತಿ ಕಡ್ಡಾಯ

ಇಂತಹ ಪ್ರಯೋಗಗಳಿಗೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಸ್ಥಳೀಯ ಪೊಲೀಸ್ ಠಾಣೆ ಹಾಗೂ ಸಂಬಂಧಿಸಿದ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೃಷಿ ಇಲಾಖೆ ಸೇರಿದಂತೆ ಹಲವು ಇಲಾಖೆಯ ಅನುಮತಿ ಪಡೆಯಬೇಕು. ಆದರೆ, ಡ್ರೋನ್​ ಪ್ರತಾಪ್​ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ ಎಂದು ಮಾಹಿತಿ ದೊರೆತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್