AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಪ್ಪೂರು ಗದ್ದುಗೆ ಮಠದ ಮುಂದಿನ ಉತ್ತರಾಧಿಕಾರಿಯಾಗಿ 8ನೇ ತರಗತಿ ಓದುತ್ತಿರುವ ತೇಜಸ್ ಹೆಸರು ಘೋಷಣೆ

ವಿವಿಧ ಮಠಾಧೀಶರ ಸಮ್ಮುಖದಲ್ಲಿ ಎಡೆಯೂರಿನ ರೇಣುಕಾ ಶಿವಾಚಾರ್ಯ ಶ್ರೀಗಳು ಕುಪ್ಪೂರು ಮಠದ ಉತ್ತರಾಧಿಕಾರಿಯಾಗಿ ಯತೀಶ್ವರ ಶಿವಾಚಾರ್ಯ ಶ್ರೀಗಳ ಸಹೋದರನ ಮಗ ತೇಜಸ್ ಹೆಸರನ್ನು ಘೋಷಿಸಿದ್ದಾರೆ.

ಕುಪ್ಪೂರು ಗದ್ದುಗೆ ಮಠದ ಮುಂದಿನ ಉತ್ತರಾಧಿಕಾರಿಯಾಗಿ 8ನೇ ತರಗತಿ ಓದುತ್ತಿರುವ ತೇಜಸ್ ಹೆಸರು ಘೋಷಣೆ
ಕುಪ್ಪೂರು ಗದ್ದುಗೆ ಮಠದ ಉತ್ತರಾಧಿಕಾರಿ ತೇಜಸ್ ತಪ್ಪಿ ಕಣ್ಣೀರಿಟ್ಟ ತಾಯಿ
TV9 Web
| Edited By: |

Updated on:Sep 26, 2021 | 1:34 PM

Share

ತುಮಕೂರು: ಕುಪ್ಪೂರು ಮಠದ ಯತೀಶ್ವರ ಶಿವಾಚಾರ್ಯಶ್ರೀ ಲಿಂಗೈಕ್ಯ ಹಿನ್ನೆಲೆಯಲ್ಲಿ ಕುಪ್ಪೂರು ಗದ್ದುಗೆ ಮಠದ ಉತ್ತರಾಧಿಕಾರಿ ಹೆಸರು ಘೋಷಣೆ ಮಾಡಲಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಮಠದ ಉತ್ತರಾಧಿಕಾರಿಯಾಗಿ ಎಡೆಯೂರಿನ ರೇಣುಕಾ ಶಿವಾಚಾರ್ಯ ಶ್ರೀಗಳು ತೇಜಸ್ ಹೆಸರು ಘೋಷಿಸಿದ್ದಾರೆ.

ವಿವಿಧ ಮಠಾಧೀಶರ ಸಮ್ಮುಖದಲ್ಲಿ ಎಡೆಯೂರಿನ ರೇಣುಕಾ ಶಿವಾಚಾರ್ಯ ಶ್ರೀಗಳು ಕುಪ್ಪೂರು ಮಠದ ಉತ್ತರಾಧಿಕಾರಿಯಾಗಿ ಯತೀಶ್ವರ ಶಿವಾಚಾರ್ಯ ಶ್ರೀಗಳ ಸಹೋದರನ ಮಗ ತೇಜಸ್ ಹೆಸರನ್ನು ಘೋಷಿಸಿದ್ದಾರೆ.

Tejas

ಕುಪ್ಪೂರು ಗದ್ದುಗೆ ಮಠದ ಉತ್ತರಾಧಿಕಾರಿ ತೇಜಸ್

ಕುಪ್ಪೂರು ಮಠದ ಮುಂದಿನ ಉತ್ತರಾಧಿಕಾರಿಯಾಗಿ ತೇಜಸ್ ಹೆಸರು ಘೋಷಣೆಯಾಗುತ್ತಿದ್ದಂತೆ ತೇಜಸ್ ಪೋಷಕರು ಮಗನನ್ನ ತಬ್ಬಿ ಕಣ್ಣೀರು ಹಾಕಿದ್ದಾರೆ. ತಾಯಿ ಕಾಂತಾಮಣಿ, ತಂದೆ ಮಹೇಶ್ ಮತ್ತು ಕುಟುಂಬಸ್ಥರು ಯತೀಶ್ವರ ಶಿವಾಚಾರ್ಯಶ್ರೀಯವರನ್ನು ನೆನೆದು ಕಣ್ಣೀರು ಸುರಿಸುತ್ತಿದ್ದಾರೆ.

ಕುಪ್ಪೂರು ಗದ್ದುಗೆ ಮಠದ ಮುಂದಿನ ಉತ್ತರಾಧಿಕಾರಿ ತೇಜಸ್, 8 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಹೆಚ್ಚಿನ ಅಧ್ಯಯನಕ್ಕೆ ಸುತ್ತೂರುಗೆ ಕಳಿಸಲು ಕುಟುಂಬ ಹಾಗೂ ಸ್ವಾಮೀಜಿಗಳು ನಿರ್ಧಾರ ಮಾಡಿದ್ದಾರೆ. ಕುಪ್ಪೂರು ಗದ್ದುಗೆ ಮಠಕ್ಕೆ ವಂಶಪಾರಂಪರ್ಯವಾಗಿ ಉತ್ತರಾಧಿಕಾರಿಗಳ ನೇಮಕ ಮಾಡಿಕೊಂಡು ಬಂದಿರುವ ಹಿನ್ನೆಲೆಯಲ್ಲಿ ಲಿಂಗೈಕ್ಯರಾದ ಯತೀಶ್ವರ ಶಿವಾಚಾರ್ಯಶ್ರೀಗಳ ಸಹೋದರನ ಮಗನನ್ನು ಉತ್ತರಾಧಿಕಾರಿಯಾಗಿ ನೇಮಿಸಲಾಗಿದೆ. ಉತ್ತರಾಧಿಕಾರಿ ಘೋಷಣೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಮಾಧುಸ್ವಾಮಿ ಸೇರಿದಂತೆ ವಿವಿಧ ಮಠಾಧೀಶರ ನೆರೆದಿದ್ದರು.

ಇನ್ನು ಈ ಬಗ್ಗೆ ಮಾತನಾಡಿದ ಸಚಿವ ಮಾಧುಸ್ವಾಮಿ, ಲಿಂಗೈಕ್ಯ ಶ್ರೀಗಳ ಇಚ್ಛೆಯಂತೆ ಅವರ ಪೂರ್ವಾಶ್ರಮದ ಸಹೋದರನ ಮಗನನ್ನು ಉತ್ತರಾಧಿಕಾರಿ ಎಂದು ಘೋಷಣೆ ಮಾಡಲಾಗಿದೆ. ಗುರುಹಿರಿಯರು ಅವರ ಕುಟುಂಬದವರು ನಿನ್ನೆ ರಾತ್ರಿ ಚರ್ಚೆ ಮಾಡಿ ತೇಜಸ್​ರನ್ನೂ ಒಪ್ಪಿಸಿ ಉತ್ತರಾಧಿಕಾರಿಯನ್ನಾಗಿ ಮಾಡಲಾಗಿದೆ. ಅಂತ್ಯಸಂಸ್ಕಾರದ ವಿಧಿವಿಧಾನ ಪೂರೈಸಲು ಉತ್ತರಾಧಿಕಾರಿಯ ಅವಶ್ಯಕತೆ ಇದೆ. ಹಾಗಾಗಿ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಮುಂದೆ ಶಾಸ್ತ್ರಬದ್ದವಾಗಿ ಕಾರ್ಯಕ್ರಮ ಮಾಡಿ ಪೀಠಾರೋಹಣ ಮಾಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ತುಮಕೂರು: ಕುಪ್ಪೂರು ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ; ಇಂದು ಮಧ್ಯಾಹ್ನ 12 ಗಂಟೆಗೆ ಅಂತಿಮ ವಿಧಿವಿಧಾನ

Published On - 1:30 pm, Sun, 26 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ