AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು.. ಜಾತ್ರೆಯಲ್ಲಿ ಮಹಿಳೆಯರಿಗೆ ಬಳೆ ಕೊಡಿಸಿದ ಮಾಜಿ ಡಿಸಿಎಂ ಪರಮೇಶ್ವರ್

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಮಾರಮ್ಮ ಜಾತ್ರೆಯಲ್ಲಿ ಇಂದು ಬಹಳಷ್ಟು ಮಹಿಳೆಯರು ಬಂದಿದ್ದರು. ಇನ್ನು, ತುಂಬಾಡಿ ಜಾತ್ರೆಗೆ ಶಾಸಕ ಪರಮೇಶ್ವರ್ ಸಹ ತೆರಳಿದ್ದರು. ಆ ಸಂದರ್ಭದಲ್ಲಿ, ಜಾತ್ರೆಯಲ್ಲಿ ನೆರೆದಿದ್ದ ಮಹಿಳೆಯರಿಗೆ ಪರಮೇಶ್ವರ್ ಬಳೆ ಕೊಡಿಸಿದರು. ಬಳೆ ಕೊಡಿಸಿದ ಹಿನ್ನೆಲೆ ಮಹಿಳೆಯರು ಪುಲ್ ಖುಷ್‌ ಆದರು.

ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು.. ಜಾತ್ರೆಯಲ್ಲಿ ಮಹಿಳೆಯರಿಗೆ ಬಳೆ ಕೊಡಿಸಿದ ಮಾಜಿ ಡಿಸಿಎಂ ಪರಮೇಶ್ವರ್
ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು.. ಜಾತ್ರೆಯಲ್ಲಿ ಮಹಿಳೆಯರಿಗೆ ಬಳೆ ಕೊಡಿಸಿದ ಮಾಜಿ ಡಿಸಿಎಂ ಪರಮೇಶ್ವರ್
TV9 Web
| Updated By: ಸಾಧು ಶ್ರೀನಾಥ್​|

Updated on: Aug 04, 2021 | 1:20 PM

Share

ತುಮಕೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಈಗ ಏನು ಮಾಡುತ್ತಿದ್ದಾರೆ ಎಂದು ಕೇಳಿದವರಿಗೆ ಅದಕ್ಕೊಂದು ಚೆಂದನೆಯ ನಿದರ್ಶನ ಸಿಕ್ಕಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಮಾರಮ್ಮ ಜಾತ್ರೆ ಇಂದು ಸರಳವಾಗಿ ಆಚರಿಸಲ್ಪಟ್ಟಿತು. ಆ ವೇಳೆ ಜಾತ್ರೆಯಲ್ಲಿ ಮಾಜಿ ಡಿಸಿಎಂ ಪರಮೇಶ್ವರ್ ಅವರು ಮಹಿಳೆಯರಿಗೆ ಬಳೆ ಕೊಡಿಸಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಮಾರಮ್ಮ ಜಾತ್ರೆಯಲ್ಲಿ ಇಂದು ಬಹಳಷ್ಟು ಮಹಿಳೆಯರು ಬಂದಿದ್ದರು. ಇನ್ನು, ತುಂಬಾಡಿ ಜಾತ್ರೆಗೆ ಶಾಸಕ ಪರಮೇಶ್ವರ್ ಸಹ ತೆರಳಿದ್ದರು. ಆ ಸಂದರ್ಭದಲ್ಲಿ, ಜಾತ್ರೆಯಲ್ಲಿ ನೆರೆದಿದ್ದ ಮಹಿಳೆಯರಿಗೆ ಪರಮೇಶ್ವರ್ ಬಳೆ ಕೊಡಿಸಿದರು. ಬಳೆ ಕೊಡಿಸಿದ ಹಿನ್ನೆಲೆ ಮಹಿಳೆಯರು ಪುಲ್ ಖುಷ್‌ ಆದರು.

ಈ ಸಂದರ್ಭದಲ್ಲಿ ನಲ್ಮೆಯ ಕವಿ ಕೆ.ಎಸ್. ನರಸಿಂಹಸ್ವಾಮಿ ಅವರು ರಚಿಸಿರುವ ಒಂದು ಜನಪ್ರಿಯ ಕವನ ಹೀಗಿದೆ:

ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು ಒಳಗೆ ಬರಲಪ್ಪಣೆಯೆ ದೊರೆಯೆ ನವಿಲೂರ ಮನೆಯಿಂದ ನುಡಿಯೊಂದ ತಂದಿಹೆನು ಬಳೆಯ ತೊಡಿಸುವುದಿಲ್ಲ ನಿಮಗೆ ||

ಮುಡಿದ ಮಲ್ಲಿಗೆ ಅರಳು ಬಾಡಿಲ್ಲ ರಾಯರೆ ತೌರಿನಲಿ ತಾಯಿ ನಗುತಿಹಳು ಕುಡಿದ ನೀರಲುಗಿಲ್ಲ ಕೊರಗದಿರಿ ರಾಯರೆ ಅಮ್ಮನಿಗೆ ಬಳೆಯಾ ತೊಡಿಸಿದರು ಅಂದು ಮಂಗಳವಾರ ನವಿಲೂರ ಕೇರಿಯಲಿ ಓಲಗದ ಸದ್ದು ತುಂಬಿತ್ತು ಬಳೆಯ ತೊಡಿಸಿದರಂದು ಅಮ್ಮನಿಗೆ ತೌರಿನಲಿ ಅಂಗಳದ ತುಂಬಾ ಜನವಿತ್ತು ||

ಸಿರಿಗೌರಿಯಂತೆ ಬಂದರು ತಾಯಿ ಹಸೆಮಣೆಗೆ ಸೆರಗಿನಲಿ ಕಣ್ಣೀರನೊರೆಸಿ ಸುಖದೊಳಗೆ ನಿಮ್ಮ ನೆನೆದರು ತಾಯಿ ಗುಣವಂತೆ ದೀಪದಲಿ ಬಿರುಗಣ್ಣನಿರಿಸಿ ಬೇಕಾದ ಹಣ್ಣಿಹುದು, ಹೂವಿಹುದು ತೌರಿನಲಿ ಹೊಸ ಸೀರೆ ರತ್ನದಾಭಾರಣ ತಾಯಿ ಕೊರಗುವರಲ್ಲಿ ನೀವಿಲ್ಲದೂರಿನಲಿ ನಿಮಗಿಲ್ಲ ಒಂದು ಹನಿ ಕರುಣ ||

ದಿನವಾದ ಬಸುರಿ ಉಸ್ಸೆಂದು ನಿಟ್ಟುಸಿರಿಟ್ಟು ಕುದಿಯ ಬಾರದು ನನ್ನ ದೊರೆಯೆ ಹಿಂಡಬಾರದು ದುಂಡು ಮಲ್ಲಿಗೆಯ ದಂಡೆಯನು ಒಣಗಬಾರದು ಒಡಲ ಚಿಲುಮೆ ಮುನಿಸು ಮಾವನ ಮೇಲೆ ಮಗಳೇನ ಮಾಡಿದಳು ನಿಮಗೇತಕೀ ಕಲ್ಲು ಮನಸು ಹೋಗಿ ಬನ್ನಿರಿ ಒಮ್ಮೆ ಕೈ ಮುಗಿದು ಬೇಡುವೆನು ಅಮ್ಮನಿಗೆ ನಿಮ್ಮದೇ ಕನಸು ಅಮ್ಮನಿಗೆ ನಿಮ್ಮದೇ ಕನಸು… ಅಮ್ಮನಿಗೆ ನಿಮ್ಮದೇ ಕನಸು

Ex dcm congress mla dr g parameshwara gets bangles for women in tumbadi village fair in koratagere taluk

ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು.. ಜಾತ್ರೆಯಲ್ಲಿ ಮಹಿಳೆಯರಿಗೆ ಬಳೆ ಕೊಡಿಸಿದ ಮಾಜಿ ಡಿಸಿಎಂ ಪರಮೇಶ್ವರ್

(Ex dcm congress mla dr g parameshwara gets bangles for women in tumbadi village fair in koratagere taluk)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್