Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ನಾಗಾಸಾಧು ವೇಷದಲ್ಲಿ ಬಂದು ವ್ಯಕ್ತಿಯೊಬ್ಬರ ಕೈಯಲ್ಲಿನ ಉಂಗುರ ದೋಚಿ ಪರಾರಿ

ಕೈಯಲ್ಲಿ ಕಮಂಡಲ.. ಮೈಮೇಲೆ ಕಾವಿ.. ಹಣೆಯಲ್ಲಿ ವಿಭೂತಿ ಹಚ್ಚಿಕೊಂಡು ಬಂದಿದ್ದ ನಕಲಿ ನಾಗಸಾಧುಗಳು ಭಕ್ತರೊಬ್ಬರಿಗೆ ಮಂಕುಬೂದಿ ಎರಚಿ ಚಿನ್ನದ ಉಂಗುರ ಕದ್ದು ಪರಾರಿಯಾಗಿದ್ದಾರೆ. ಭಕ್ತರೊಬ್ಬರಿಗೆ ಧ್ಯಾನ ಮಾಡುವಂತೆ ಹೇಳಿ ಆತನ ಕೈಯಲ್ಲಿದ್ದ ಚಿನ್ನದುಂಗುರ ದೋಚಿಕೊಂಡು ಹೋಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ನಾಗಾಸಾಧು ವೇಷದಲ್ಲಿ ಬಂದು ವ್ಯಕ್ತಿಯೊಬ್ಬರ ಕೈಯಲ್ಲಿನ ಉಂಗುರ ದೋಚಿ ಪರಾರಿ
ನಕಲಿ ನಾಗಸಾಧು
Follow us
ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Aug 13, 2023 | 1:10 PM

ತುಮಕೂರು, (ಆಗಸ್ಟ್ 13): ನಾಗಾಸಾಧುಗಳ(Naga Sadhu) ಸೋಗಿನಲ್ಲಿ ಬಂದು ಸಿನಿಮೀಯ ಸ್ಟೈಲಿನಲ್ಲಿ ಭಕ್ತರೊಬ್ಬರಿಗೆ ಮಂಕು ಬೂದಿ ಎರಚಿ ಚಿನ್ನದ ಉಂಗುರದೊಂದಿಗೆ(Gold Ring) ಪರಾರಿಯಾಗಿರುವ ಘಟನೆ ತುಮಕೂರು(Tumakuru)  ನಗರದ ಎಂ.ಜಿ ರಸ್ತೆಯಲ್ಲಿ ನಡೆದಿದೆ. ಹೌದು..ನಕಲಿ ನಾಗಾ ಸಾಧುಗಳು ಭಕ್ತರೊಬ್ಬರಿಗೆ ಕೈಯಲ್ಲಿ ರುದ್ರಾಕ್ಷಿ ಕೊಟ್ಟು ಧ್ಯಾನ ಮಾಡುವಂತೆ ಹೇಳಿ ಆತನ ಉಂಗುರ ಕದ್ದು ಓಡಿ ಹೋಗಿದ್ದಾರೆ. ತುಮಕೂರು ನಗರದ ಎಂ.ಜಿ ರಸ್ತೆಯಲ್ಲಿರುವ ಮಲ್ನಾಡ್ ಸ್ಟುಡಿಯೋ ಮಾಲೀಕ ಚಂದ್ರುವಿನ ಕೈಯಲ್ಲಿ ರುದ್ರಾಕ್ಷಿ ಇಟ್ಟು ಎರಡೂ ಕೈಯನ್ನು ಬಲವಾಗಿ ಹಿಡಿದು ಮಂತ್ರ ಹೇಳಿದ್ದಾರೆ. ಮಂತ್ರ ಹೇಳಿಸುವ ನೆಪದಲ್ಲಿ ಬೆರಳಲ್ಲಿದ್ದ ಉಂಗುರ ಲಪಟಾಯಿಸಿದ್ದು, ಬಳಿಕ ಎರಡು ನಿಮಿಷ ಧ್ಯಾನ ಮಾಡಿ ಎಂದು ಹೇಳಿ ನಿಧಾನವಾಗಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ನಂತರ ಧ್ಯಾನದಿಂದ ಹೊರಬಂದು ನೋಡಿದಾಗ ಬಲಗೈಯಲ್ಲಿದ್ದ ಉಂಗುರ ದೋಚಿಕೊಂಡು ಹೋಗಿರುವುದು ಚಂದ್ರು ಗಮನಕ್ಕೆ ಬಂದಿದೆ.ಕೂಡಲೇ ಈ ಸಂಬಂಧ ತುಮಕೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಒಟ್ಟು ಮೂವರು ನಾಗಸಾಧು ವೇಷದಲ್ಲಿ ತಿರುಗಾಡುತ್ತಿದ್ದ ಸಿಸಿಟಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳ್ಳರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್, 50 ಮೊಬೈಲ್ ವಶಕ್ಕೆ

ಫಸಲಿಗೆ ಬಂದಿದ್ದ ಅಡಿಕೆ ಮರಗಳು ನಾಶ

ತುಮಕೂರು: ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು ನಾಶ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ವಿರುಪಾಕ್ಷಪ್ಪ ಎಂಬುವರು ಬೆಳೆಸಿದ್ದ ಅಡಿಕೆ ಮರಗಳನ್ನು ನಾಶ ಮಾಡಿದ್ದು, ಪಕ್ಕದ ಜಮೀನಿನ ಹರೀಶ್ ಅವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನು ತಮಗೆ ಸೇರಬೇಕೆಂದು ಅಡಿಕೆ ಮರ ಕಡಿದಿದ್ದಾರೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:26 pm, Sun, 13 August 23

ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್