AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯಕ್ರಿಯೆಗೆ ಜಾಗವಿಲ್ಲದೆ ನಡು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ ಕುಟುಂಬಸ್ಥರು

ಈ ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಹಶಿಲ್ದಾರ್ ವರದರಾಜ್, ರುದ್ರಭೂಮಿಗಾಗಿ ಬೇರೆ ಜಾಗ ನೀಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು. ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಅರಸಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂತ್ಯಕ್ರಿಯೆಗೆ ಜಾಗವಿಲ್ಲದೆ ನಡು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ ಕುಟುಂಬಸ್ಥರು
ನಡುರಸ್ತೆಯಲ್ಲೇ ಅಂತ್ಯಸಂಸ್ಕಾರ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on:Sep 20, 2023 | 1:17 PM

Share

ತುಮಕೂರು ಸೆ.20: ಅಂತ್ಯಕ್ರಿಯೆಗೆ ಜಾಗವಿಲ್ಲದೆ ಕುಟುಂಬಸ್ಥರು ನಡು ರಸ್ತೆಯಲ್ಲೇ ಶವ ಸಂಸ್ಕಾರ (Burial) ಮಾಡಿದ ಘಟನೆ ಜಿಲ್ಲೆಯ ಪಾವಗಡ (Pawagad) ತಾಲೂಕಿನ ಕ್ಯಾತಗಾನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಈರಣ ಎಂಬುವರು ಅನಾರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದರು. ಗ್ರಾಮದ ಹೊರವಲಯದ ರಾಜಕಾಲುವೆ ಪಕ್ಕದ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ ಈ ಜಾಗ ನಮ್ಮದು ಎಂದು ಪಕ್ಕದ ಜಮೀನು ಮಾಲೀಕರು ಜಗಳ ಮಾಡಿದ್ದಾರೆ. ಕೊನೆಗೆ ವಿಧಿ ಇಲ್ಲದೆ ಕುಟುಂಬಸ್ಥರು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ್ದಾರೆ.

ಈ ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಹಶಿಲ್ದಾರ್ ವರದರಾಜ್, ರುದ್ರಭೂಮಿಗಾಗಿ ಬೇರೆ ಜಾಗ ನೀಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು. ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಅರಸಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಲಾಟೆ ವೇಳೆ ಗರ್ಭಿಣಿ ಹೊಟ್ಟೆಗೆ ಒದ್ದ ದಾಯಾದಿಗಳು, ಭ್ರೂಣ ಸಾವು

ಗುಬ್ಬಿ ತಾಲ್ಲೂಕಿನ ನಾಗಸಂಧ್ರ ಗೊಲ್ಲರಹಟ್ಟಿಯಲ್ಲಿ ಜಮೀನು ವಿಚಾರಕ್ಕೆ ದಾಯಾದಿಗಳ ನಡುವೆ ಗಲಾಟೆ ನಡೆದಿದ್ದು, ಬಿಡಿಸಲು ಬಂದ ಐದು ತಿಂಗಳ ಗರ್ಭಿಣಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಮೀನು ವಿಚಾರಕ್ಕೆ ಗ್ರಾಮದ ಕುಮಾರ್ ಹಾಗೂ ಹರೀಶ್ ಗಂಗಣ್ಣ, ಗಿಡಯ್ಯ ಬಸವರಾಜು ಪಾಪಣ್ಣ, ಕಲಿ ನಡುವೆ ಜಗಳ ನಡೆದಿತ್ತು.

ಇದನ್ನೂ ಓದಿ: ಪಾವಗಡ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳ ಸಾವು, ಓರ್ವ ಗಂಭೀರ ಗಾಯ 

ಈ ವೇಳೆ ಜಗಳ ಬಿಡಿಸಲು ಬಂದ ಕುಮಾರ್ ಪತ್ನಿ ಗರ್ಭಿಣಿ ಹರ್ಷಿತಾ ಅವರ ಹೊಟ್ಟೆಗೆ ದಾಯಾದಿಗಳು ಒದ್ದಿದ್ದಾರೆ. ಇದರಿಂದ ಹೊಟ್ಟೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಭ್ರೂಣ ಮೃತಪ್ಪಟ್ಟಿದೆ. ಹಲ್ಲೆ ಹಾಗೂ ಮಗು ಸಾವಿನ‌ ಬಗ್ಗೆ ದಂಪತಿಗಳು ಸಿ.ಎಸ್​ಪುರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ.

ಇನ್ನು ಹಲ್ಲೆ ಮಾಡಿದವರು ದಂಪತಿಗಳಿಗೆ ಬೆದರಿಕೆ ಹಾಕುತ್ತಿತ್ತಿದ್ದಾರೆ. ಹೀಗಾಗಿ ನ್ಯಾಯಕ್ಕಾಗಿ ದಂಪತಿಗಳು ನಿತ್ಯ ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾರೆ. ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 20 September 23

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ