AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬೈಕ್​ ಮೇಲೆ ಶವ ಸಾಗಾಟ: ಸಮುದಾಯ ಆರೋಗ್ಯಾಧಿಕಾರಿಗೆ ಸಿಎಂ ಕಚೇರಿಯಿಂದ ನೋಟಿಸ್

ಆಂಬ್ಯುಲೆನ್ಸ್ ಇಲ್ಲದೇ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿತ್ತು. ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ.

ತುಮಕೂರು: ಬೈಕ್​ ಮೇಲೆ ಶವ ಸಾಗಾಟ: ಸಮುದಾಯ ಆರೋಗ್ಯಾಧಿಕಾರಿಗೆ ಸಿಎಂ ಕಚೇರಿಯಿಂದ ನೋಟಿಸ್
ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Sep 21, 2024 | 12:28 PM

Share

ತುಮಕೂರು, ಸೆಪ್ಟೆಂಬರ್​ 21: ಮಕ್ಕಳು ತಂದೆಯ ಶವವನ್ನು ಬೈಕ್​ನಲ್ಲಿ ಸಾಗಿಸಿದ್ದಕ್ಕೆ ಕಾರಣ ಕೇಳಿ ಮುಖ್ಯಮಂತ್ರಿಗಳ ಕಚೇರಿ (CM Office) ಅಧಿಕಾರಿಗಳು ಸಮುದಾಯ ಆರೋಗ್ಯಾಧಿಕಾರಿ ಲೋಕೇಶ್ ಅವರಿಗೆ ನೋಟಿಸ್​ ನೀಡಿದ್ದಾರೆ. ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ (80) ಎಂಬುವರು ಬುಧವಾರ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನು 108 ಆಂಬ್ಯುಲೆನ್ಸ್​ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದರು. ಆದರೆ, ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿತ್ತು.

ಬಳಿಕ ಮೃತ ಶರೀರವನ್ನು ಮನೆಗೆ ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕಿಸಿದ್ದರು. ಮೃತದೇಹವನ್ನು ಆಂಬ್ಯುಲೆನ್ಸ್​​ನಲ್ಲಿ ಸಾಗಿಸುವಂತಿಲ್ಲ ಎಂದಿದ್ದರು. ಕೈಯಲ್ಲಿ ಹಣವಿಲ್ಲದೆ ಕೊನೆಗೆ ಹೊನ್ನೂರಪ್ಪ ಮಕ್ಕಳು ವಿಧಿಯಿಲ್ಲದೆ ತಂದೆ ಶವವನ್ನು ಬೈಕ್​ನಲ್ಲೇ ತೆಗೆದುಕೊಂಡು ಮನೆಗೆ ಹೋಗಿದ್ದರು. ಇದು ರಾಜ್ಯಾದ್ಯಂತ ಸುದ್ದಿಯಾಗಿತ್ತು. ವೈಎನ್ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್