AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ವಿದ್ಯೋದಯ ಕಾನೂನು ಕಾಲೇಜಿನ ಟ್ರಸ್ಟಿ ಪ್ರೋ ಎಚ್ಎಸ್ ಶೇಷಾದ್ರಿ ನಿಧನ

ತುಮಕೂರಿನ ಸಿದ್ದಗಂಗಾ ಮಠದ ಉಚ್ವಾಟಿತ ಗೌರಿಶಂಕರ್ ಸ್ವಾಮೀಜಿ ಪರವಾಗಿ ಸುಪ್ರೀಂಕೋರ್ಟ್​ನಲ್ಲಿ ಶೇಷಾದ್ರಿ ಅವರು ವಾದಿಸಿದ್ದರು.

Tumkur News: ವಿದ್ಯೋದಯ ಕಾನೂನು ಕಾಲೇಜಿನ ಟ್ರಸ್ಟಿ ಪ್ರೋ ಎಚ್ಎಸ್ ಶೇಷಾದ್ರಿ ನಿಧನ
ಎಚ್​.ಎಸ್.ಶೇಷಾದ್ರಿ
TV9 Web
| Edited By: |

Updated on: Aug 31, 2022 | 7:41 PM

Share

ತುಮಕೂರು: ಹಿರಿಯ ವಕೀಲ ಹಾಗೂ ತುಮಕೂರಿನ ವಿದ್ಯೋದಯ ಕಾನೂನು ಶಿಕ್ಷಣ ಸಂಸ್ಥೆಯ ಟ್ರಸ್ಟಿ ಪ್ರೊ ಎಚ್.ಎಸ್.ಶೇಷಾದ್ರಿ (99) (HS Sheshadri) ನಗರದಲ್ಲಿ ಬುಧವಾರ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ವಿದ್ಯೋದಯ ಸಂಸ್ಥೆಯ ಅಧ್ಯಕ್ಷರೂ ಆಗಿದ್ದ ಅವರ ಶಿಷ್ಯರು ದೇಶದ ವಿವಿಧೆಡೆ ವಕೀಲರು ಹಾಗೂ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಗರದಲ್ಲಿ ಅವರ ಅಭಿಮಾನಿ ಬಳಗವೂ ದೊಡ್ಡದಾಗಿದೆ. ತುಮಕೂರಿನಲ್ಲಿ ಶಿಕ್ಷಣ ಹಾಗೂ ಕಾನೂನು ಸೇವೆಯ ವಲಯಕ್ಕೆ ಶೇಷಾದ್ರಿ ಅವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ವಿದ್ಯೋದಯ ಕಾನೂನು ವಿದ್ಯಾಲಯ ಹಾಗೂ ಕೆಂಪೇಗೌಡ ಪಟ್ಟಣ ಸಹಕಾರ ಬ್ಯಾಂಕಿನ ಸಂಸ್ಥಾಪಕರಾಗಿ ಅವರು ಅಪೂರ್ವ ಸೇವೆ ಸಲ್ಲಿಸಿದ್ದರು. ಜಿಲ್ಲೆಯಲ್ಲಿ ಲಯನ್ ಶೇಷಾದ್ರಿ ಎಂದೇ ಅವರನ್ನು ಕರೆಯಲಾಗುತ್ತದೆ.

ತುಮಕೂರಿನ ಸಿದ್ದಗಂಗಾ ಮಠದ ಉಚ್ವಾಟಿತ ಗೌರಿಶಂಕರ್ ಸ್ವಾಮೀಜಿ ಪರವಾಗಿ ಸುಪ್ರೀಂಕೋರ್ಟ್​ನಲ್ಲಿ ಶೇಷಾದ್ರಿ ಅವರು ವಾದಿಸಿದ್ದರು. ಶೇಷಾದ್ರಿ ಅವರ ಪ್ರಬಲ ವಾದ ಮಂಡನೆಯ ನಂತರ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಆದೇಶಿಸಿತ್ತು.

ಶೇಷಾದ್ರಿ ನಿಧನಕ್ಕೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಸಂತಾಪ ಸೂಚಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ಅಬಕಾರಿ ಗೋಪಾಲಯ್ಯ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​