ಬಣವೆಗೆ ತಗುಲಿದ್ದ ಬೆಂಕಿ ನಂದಿಸಲು ಹೋದ ರೈತ ಅದೇ ಬೆಂಕಿಯಲ್ಲಿ ಸುಟ್ಟು ಭಸ್ಮ

ತುಮಕೂರು: ಬಣವೆಗೆ ತಗುಲಿದ್ದ ಬೆಂಕಿ ನಂದಿಸಲು ಹೋದ ರೈತ ಸಜೀವದಹನವಾಗಿರುವ ಘಟನೆ ಪಾವಗಡ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಸರಾಮ್ ನಾಯಕ್(60) ಮೃತ ರೈತ. ತೊಗರಿ ಬಣವೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ತೊಗರಿ ಬೆಳೆ ಬಣವೆಗೆ ಬೆಂಕಿ ಬಿದ್ದು ಹತ್ತಿ ಉರಿದಿದೆ. ಇದನ್ನು ಗಮನಿಸಿದ ರೈತ ಹೊಸರಾಮ್ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಒಣ ಹುಲ್ಲಿಗೆ ಬೆಂಕಿ ತಗುಲಿದ್ದ ಪರಿಣಾಮ ರೈತ ಬೆಂಕಿಯಲ್ಲಿ ಸಿಲುಕಿ ಸಂಪೂರ್ಣ ಭಸ್ಮವಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದು […]

ಬಣವೆಗೆ ತಗುಲಿದ್ದ ಬೆಂಕಿ ನಂದಿಸಲು ಹೋದ ರೈತ ಅದೇ ಬೆಂಕಿಯಲ್ಲಿ ಸುಟ್ಟು ಭಸ್ಮ
ಸಾಧು ಶ್ರೀನಾಥ್​

Updated on: Jan 21, 2020 | 9:24 AM

ತುಮಕೂರು: ಬಣವೆಗೆ ತಗುಲಿದ್ದ ಬೆಂಕಿ ನಂದಿಸಲು ಹೋದ ರೈತ ಸಜೀವದಹನವಾಗಿರುವ ಘಟನೆ ಪಾವಗಡ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಸರಾಮ್ ನಾಯಕ್(60) ಮೃತ ರೈತ. ತೊಗರಿ ಬಣವೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ತೊಗರಿ ಬೆಳೆ ಬಣವೆಗೆ ಬೆಂಕಿ ಬಿದ್ದು ಹತ್ತಿ ಉರಿದಿದೆ. ಇದನ್ನು ಗಮನಿಸಿದ ರೈತ ಹೊಸರಾಮ್ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಒಣ ಹುಲ್ಲಿಗೆ ಬೆಂಕಿ ತಗುಲಿದ್ದ ಪರಿಣಾಮ ರೈತ ಬೆಂಕಿಯಲ್ಲಿ ಸಿಲುಕಿ ಸಂಪೂರ್ಣ ಭಸ್ಮವಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದು ಬೆಂಕಿಯನ್ನ ನಂದಿಸಿದ್ದಾರೆ. ತಿರುಮಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us