AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಕಾರ್ ಖರೀದಿಗೆ ಬಂದ ರೈತನಿಗೆ ಅವಮಾನ; 10 ಲಕ್ಷ ರೂ. ತಂದು ಕಾರ್ ನೀಡುವಂತೆ ಪಟ್ಟು ಹಿಡಿದ ರೈತ

ಅವಮಾನಿಸಿದ್ದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ದುಡ್ಡು ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದಾನೆ. ಆದರೆ ಶೋರೂಂ ಸೇಲ್ಸ್ ಏಜೆಂಟ್ ಮಾತ್ರ ವಾಹನ ನೀಡದೇ, ಎರಡು ಮೂರು ದಿನದಲ್ಲಿ ವಾಹನ ನೀಡುತ್ತೇವೆ ಎಂದು ಹೇಳಿದ್ದಾರೆ.

ತುಮಕೂರು: ಕಾರ್ ಖರೀದಿಗೆ ಬಂದ ರೈತನಿಗೆ ಅವಮಾನ; 10 ಲಕ್ಷ ರೂ. ತಂದು ಕಾರ್ ನೀಡುವಂತೆ ಪಟ್ಟು ಹಿಡಿದ ರೈತ
ಕೆಂಪೇಗೌಡ
TV9 Web
| Edited By: |

Updated on:Jan 23, 2022 | 10:53 AM

Share

ತುಮಕೂರು: ಕಾರು ಖರೀದಿಗೆ ಬಂದ ಯುವ ರೈತರಿಗೆ ಅವಮಾನ ಮಾಡಿದ ಘಟನೆ ತುಮಕೂರಿನ ರಾಮನಪಾಳ್ಯದಲ್ಲಿ ನಡೆದಿದೆ. ಇಲ್ಲಿನ ಕೆಂಪೇಗೌಡ ಎನ್ನುವ ಯುವ ರೈತರಿಗೆ ಅವಮಾನ ಮಾಡಲಾಗಿದೆ. ಬೋಲೆರೋ ಗೂಡ್ಸ್ ವಾಹನ ಖರೀದಿಸಲು ಶೋರೂಂಗೆ ಬಂದಿದ್ದ ತಾಲೂಕಿನ ಹೆಬ್ಬೂರು ಹೋಬಳಿಯ ರಾಮನಪಾಳ್ಯ ನಿವಾಸಿ ಯುವರೈತ ಕೆಂಪೇಗೌಡಗೆ ಅವಮಾನ ಮಾಡಲಾಗಿದೆ. ಯುವಕನ ವೇಷಭೂಷಣ ನೋಡಿ ಶೋರೂಂನಲ್ಲಿ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಾಹಸಸಿಂಹ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ‘ದಿಗ್ಗಜರು’ ಸಿನಿಮಾವನ್ನು ನೀವು ನೋಡಿರುತ್ತೀರಿ. ಆ ಸಿನಿಮಾದಲ್ಲಿನ ದೃಶ್ಯದಂಥ ಘಟನೆಯೊಂದು ಇದೀಗ ನಿಜಜೀವನದಲ್ಲಿ ಸಂಭವಿಸಿದೆ. ತುಮಕೂರಿನ ರೈತರೊಬ್ಬರಿಗೆ ಅಂಥ ಅನುಭವವಾಗಿದೆ.

ಹತ್ತು ರೂಪಾಯಿ ದುಡ್ಡು ಕೊಡುವ ಯೋಗ್ಯತೆ ಇಲ್ಲ ಎಂದು ಸೇಲ್ಸ್ ಏಜೆಂಟ್​ರಿಂದ ಕೆಂಪೇಗೌಡಗೆ ಅವಮಾನ ಆಗಿದೆ. ಅವಮಾನಿಸಿದ್ದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ದುಡ್ಡು ತಂದು ವಾಹನ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಶೋರೂಂ ಸೇಲ್ಸ್ ಏಜೆಂಟ್ ಮಾತ್ರ ವಾಹನ ನೀಡದೇ, ಎರಡು ಮೂರು ದಿನದಲ್ಲಿ ವಾಹನ ನೀಡುತ್ತೇವೆ ಎಂದು ಹೇಳಿದ್ದಾರೆ ಎಂದು ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ.

ಕಾರ್ ಶೋರೂಮ್​ನಲ್ಲಿ ಘಟನೆ ನಡೆದಿದ್ದೇನು?

ನಮ್ಮನ್ನು ನೋಡಿ ಕೇವಲವಾಗಿ ಮಾತನಾಡಿದರು. 10 ರೂಪಾಯಿ ತರಲು ಯೋಗ್ಯತೆ ಇಲ್ಲ ಎಂದು ಅವಮಾನಿಸಿದರು. ಆಗ ನಾವು ಅರ್ಧಗಂಟೆಯಲ್ಲಿ 10 ಲಕ್ಷ ಹೊಂದಿಸಿ ತಂದು ಕೊಟ್ಟಿದ್ದೀವಿ. ಕಳೆದ ಜನವರಿ 4 ರಂದು ಶೋರೂಮ್​​ಗೆ ಹೋಗಿ ಗೂಡ್ಸ್ ವಾಹನ ತರಲು ಹೇಳಿಬರಲಾಗಿತ್ತು. ಅದರಂತೆ‌ ಮೊನ್ನೆ ಎರಡು ಲಕ್ಷ ಹಣ ಕಟ್ಟಿ ವಾಹನ ತರಲು ಶೋರೂಮ್​ಗೆ ಹೋಗಿದ್ವಿ. ಎರಡು ಲಕ್ಷ ಹಣ ಕಟ್ತೀವಿ. ವಾಹನ ಕೊಡಿ ಎಂದು ಕೇಳಿದ್ದೀವಿ. ಆಗ ಶೋರೂಮ್ ಸಿಬ್ಬಂದಿ ಏಳು ಜನರು ಕೂಡ ‘ನೀವು ತಮಾಷೆ ಮಾಡಲು ಬಂದಿದ್ದೀರಾ. ವಾಹನ ತಗೊಂಡು ಹೋಗೊದಕ್ಕೆ ಬಂದಿಲ್ಲ. ನಿಮ್ಮ ಯೋಗ್ಯತೆಗೆ 10 ರೂಪಾಯಿ ಇಲ್ಲ, ಸುಮ್ಮನೇ ಬಂದಿದ್ದೀರಾ’ ಎಂದು ಅವಮಾನ ಮಾಡಿದ್ದರು ಎಂಬ ಬಗ್ಗೆ ಹೇಳಲಾಗಿದೆ.

ನಾವು 25 ನಿಮಿಷ ಸಮಯ ಕೇಳಿದ್ದೀವಿ. ಆಗಲೂ ಅವರು ಕಿಚಾಯಿಸಿದ್ದಾರೆ. ನಾವು ಹೇಳಿದ ಸಮಯಕ್ಕೆ ಹಣ ತಂದು ಕೊಟ್ಟಿದ್ದೀವಿ. ಆದರೆ ಅವರು ವಾಹನ ನೀಡಲಿಲ್ಲ. ನಾವು ರೈತರು ಅಂತಾ ಅವಮಾನ ಮಾಡಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಬೊಲೆರೋ ವಾಹನ ತರಲು ಹೋಗಿದ್ದ ಕೆಂಪೇಗೌಡ ಹಾಗೂ ಮಾವ ರಾಮಾಂಜನೇಯ ಈ ಬಗ್ಗೆ ಟಿವಿ9ಗೆ ಹೇಳಿಕೆ ನೀಡಿದ್ದಾರೆ.

ಕ್ಯಾಂಟರ್ ಚಾಲಕರಾಗಿ ಕೆಲಸ ಮಾಡುತ್ತಿರುವ ಕೆಂಪೇಗೌಡ ಸದ್ಯ ಸ್ವಂತ ವಾಹನ ಖರೀದಿಸಲು ನಿರ್ಧರಿಸಿದ್ದರು. ಹೀಗಾಗಿ ಸ್ವಂತ ವಾಹನ ತರಲು ಮಾವ ಹಾಗೂ ಸ್ನೇಹಿತರೊಂದಿಗೆ ಹೋಗಿದ್ದರು. ಈ ವೇಳೆ ಬಟ್ಟೆ ವೇಷಭೂಷಣ ಕಂಡು ಸಿಬ್ಬಂದಿ ಅವಮಾನಿಸಿದ್ದರು ಎಂದು ತಿಳಿದುಬಂದಿದೆ. ಸಿಬ್ಬಂದಿ ವಿರುದ್ಧ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ: ತುಮಕೂರು: ಅಪಘಾತದಲ್ಲಿ ಮೂವರ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕ 16 ವರ್ಷಗಳ ಬಳಿಕ ಪೊಲೀಸರ ವಶಕ್ಕೆ!

ಇದನ್ನೂ ಓದಿ: ಹೈ ಟೆನ್ಸನ್ ! ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಪಿಡಿಒ ತಡೆ: ವಿದ್ಯುತ್​ ಕಂಬ ಏರಿ ಪ್ರತಿಭಟನೆಗೆ ಇಳಿದ ರೈತ

Published On - 9:02 am, Sun, 23 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ