AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accident: ಖಾಸಗಿ ಬಸ್ ಡಿಕ್ಕಿಯಾಗಿ ಸ್ವಗ್ರಾಮದಿಂದ ಬೆಂಗಳೂರಿಗೆ ಮರಳುತ್ತಿದ್ದ ತಂದೆ-ಮಗಳು ದುರಂತ ಸಾವು

ಗುಬ್ಬಿ ತಾಲೂಕಿನ ಸಿಎಸ್​ಪುರ ಬಳಿಯ ನೆಟ್ಟಿಗೆರೆ ಸ್ವಗ್ರಾಮದಿಂದ ಬೆಂಗಳೂರಿಗೆ ಬೈಕ್‌ನಲ್ಲಿ ವಾಪಸಾಗುತ್ತಿದ್ದಾಗ ತಂದೆ-ಮಗಳು ದುರಂತ ಅಂತ್ಯಕಂಡಿದ್ದಾರೆ.

Road Accident: ಖಾಸಗಿ ಬಸ್ ಡಿಕ್ಕಿಯಾಗಿ ಸ್ವಗ್ರಾಮದಿಂದ ಬೆಂಗಳೂರಿಗೆ ಮರಳುತ್ತಿದ್ದ ತಂದೆ-ಮಗಳು ದುರಂತ ಸಾವು
ಪ್ರಾತಿನಿಧಿಕ ಚಿತ್ರImage Credit source: indianexpress.com
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 29, 2023 | 11:30 PM

Share

ತುಮಕೂರು: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ತಂದೆ-ಮಗಳು (father and daughter) ಸಾವನ್ನಪ್ಪಿರುವ ಘಟನೆ ಇಂದು(ಜನವರಿ 29) ತುಮಕೂರು (Tumakuru) ತಾಲೂಕಿನ ಹೆಬ್ಬೂರಿನ ಬನ್ನಿಮರದಕಟ್ಟೆ ಬಳಿ ಸಂಭವಿಸಿದೆ. ತಿರುಮಲೇಗೌಡ (50), ಚಂದನ (20) ಮೃತ ದುರ್ದೈವಿಗಳು. ಅಪಘಾತದ ಸ್ಥಳದಲ್ಲೇ ತಂದೆ ತಿರುಮಲೇಗೌಡ ಮೃತಪಟ್ಟಿದ್ದರೆ, ಪುತ್ರಿ ಚಂದನಾ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ನೆಟ್ಟಿಗೆರೆ ಗ್ರಾಮದ ನಿವಾಸಿಗಳಾಗಿದ್ದ ಇವರು ಬೆಂಗಳೂರಿನಲ್ಲಿ ವಾಸವಾಗಿದ್ದರು.

ಇವರು ಇಂದು ತಮ್ಮ ಊರಾದ ಗುಬ್ಬಿ ತಾಲೂಕಿನ ಸಿಎಸ್​ಪುರ ಬಳಿಯ ನೆಟ್ಟಿಗೆರೆ ಗ್ರಾಮದಲ್ಲಿ ಹಬ್ಬ ಮುಗಿಸಿಕೊಂಡು ಬೈಕ್​​ನಲ್ಲಿ ವಾಪಸ್ ಬೆಂಗಳೂರಿಗೆ ಮರಳುವಾಗ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ದಭಡಾಯಿಸಿದ್ದು, ಮೃತದೇಹಗಳನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಇನ್ನು ಈ ಬಗ್ಗೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:27 pm, Sun, 29 January 23