AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿದ್ದ ಇಬ್ಬರು ಸ್ವಾಮೀಜಿ, ಮೂವರು ಶಾಸಕರು ಸೇರಿ 11 ಮಂದಿ ವಿರುದ್ಧ ಎಫ್​ಐಆರ್

ತುಮಕೂರಿನಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕಾಲುವೆ ವಿರೋಧಿಸಿ ನಡೆದ ಹೆದ್ದಾರಿ ತಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ 11 ಮಂದಿ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಾಸಕರು, ಬಿಜೆಪಿ ಮುಖಂಡರು ಮತ್ತು ಸ್ವಾಮೀಜಿಗಳನ್ನೂ ಒಳಗೊಂಡಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ ಮಾಡಿದ್ದಾರೆ ಎಂಬ ಆರೋಪಗಳಿವೆ.

ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿದ್ದ ಇಬ್ಬರು ಸ್ವಾಮೀಜಿ, ಮೂವರು ಶಾಸಕರು ಸೇರಿ 11 ಮಂದಿ ವಿರುದ್ಧ ಎಫ್​ಐಆರ್
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಶನಿವಾರ ನಡೆದಿದ್ದ ಪ್ರತಿಭಟನೆಯ ಚಿತ್ರ
Jagadisha B
| Updated By: Ganapathi Sharma|

Updated on: Jun 01, 2025 | 1:20 PM

Share

ತುಮಕೂರು, ಜೂನ್ 1: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ (Hemavati Link Canal Project) ವಿರೋಧಿಸಿ ಬೆಂಗಳೂರು ಶಿವಮೊಗ್ಗ ಹೆದ್ದಾರಿ (bengaluru Shivamogga Highway) ತಡೆದು ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಆ ಮೂಲಕ ಪ್ರತಿಭಟನಾಕಾರರ ಮೇಲೆ ಸರ್ಕಾರ ಬ್ರಹ್ಮಾಸ್ತ್ರ ಪ್ರಯೋಗಿಸಿದೆ. ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ 11 ಮಂದಿಯ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ, ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಗೌಡ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ವಿರುದ್ಧ ಕೇಸ್ ದಾಖಲಿಸಲಾಗಿದೆ. ಹಾಗೆಯೇ, ಬಿಜೆಪಿ ಮುಖಂಡರಾದ ದಿಲೀಪ್ ಕುಮಾರ್, ಹೆಬ್ಬಾಕ ರವಿ ಹಾಗೂ ಇಬ್ಬರು ಸ್ವಾಮೀಜಿಗಳ ವಿರುದ್ಧವೂ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಆದರೆ, ಸ್ವಾಮೀಜಿಗಳ ಹೆಸರು ಉಲ್ಲೇಖಿಸಿಲ್ಲ. ನೂರಾರು ಜನರ ವಿರುದ್ಧ ಒಟ್ಟು 11 ಎಫ್​ಐಆರ್ ದಾಖಲಿಸಿದ್ದು, ಇದರಲ್ಲಿ 10 ಸ್ವಯಂಪ್ರೇರಿತ ಪ್ರಕರಣಗಳಾಗಿವೆ. ಒಂದು ಕೇಸ್ ಮಾತ್ರ ಕಂಟ್ರ್ಯಾಕ್ಟರ್ ನೀಡಿದ ದೂರಿನ ಮೇಲೆ ದಾಖಲಾಗಿದ್ದು, ಇನ್ನೂ ಮೂರರಿಂದ ನಾಲ್ಕು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಏನೇ ಎಫ್​ಐಆರ್ ದಾಖಲಿಸಿದರೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

ಗುಬ್ಬಿ ಕಾಂಗ್ರೆಸ್ ಶಾಸಕ ಶ್ರೀನಿವಾಸ್, ಈ ಯೋಜನೆಗೆ ನನ್ನ ವಿರೋಧವೂ ಇದೆ. ಜನರ ಅಭಿಪ್ರಾಯ ಏನಿದೆಯೋ ಅದೇ ನನ್ನ ಅಭಿಪ್ರಾಯ ಎಂದಿದ್ದಾರೆ. ಕುಣಿಗಲ್ ಕಾಂಗ್ರೆಸ್ ಶಾಸಕ ಕೂಡಾ ಮಾಗಡಿಗೆ ನೀರು ಹೋಗಲ್ಲ. ಕುಣಿಗಲ್‌ಗೆ ಮಾತ್ರ ಸೀಮಿತ ಎಂದಿದ್ದಾರೆ.

ಇದನ್ನೂ ಓದಿ
Image
ಮಲ್ಲಸಂದ್ರ ಬಳಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ, ಕ್ಯಾಮರಾ ಅಳವಡಿಕೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
Image
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?
Image
ಡಿಕೆಶಿ ಕನಸಿನ ಯೋಜನೆಗೆ ವಿರೋಧ ಏಕೆ? ಏನಿದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್

ತುಮಕೂರು ಜನರಿಗೆ ತೊಂದರೆ ಕೊಡಬೇಡಪ್ಪಾ: ಡಿಕೆಗೆ ಕುಟುಕಿದ ಸೋಮಣ್ಣ

ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಕೋಟಿ ನಮಸ್ಕಾರ. ಯಾಕ್ ಗಂಟು ಬಿದ್ದಿದ್ದಾರೋ ಗೊತ್ತಿಲ್ಲ. ತುಮಕೂರು ಜನರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡುತ್ತಲೇ ವಿ. ಸೋಮಣ್ಣ ಕುಟುಕಿದ್ದಾರೆ. ತಿಪ್ಪಗೊಂಡನಹಳ್ಳಿ, ಮಂಚನ ಬೆಲೆಯಿಂದ ಹೊಸ ಲೈನ್ ಹಾಕುವ. ಕನಕಪುರಕ್ಕೂ ನೀರು ಬಿಟ್ಟುಕೊಳ್ಳಲಿ. ದೊಡ್ಡ ಬೋರ್ಡ್ ಹಾಕಿಸಿಕೊಳ್ಳಲಿ ಎಂದಿರುವ ಸೋಮಣ್ಣ, ‘‘ನೀನೇ ಮಹಾರಾಜ, ನೀನೇ ಉಪಮುಖ್ಯಮಂತ್ರಿ’’ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಡಿಕೆಶಿ ಕನಸಿನ ಯೋಜನೆಗೆ ವಿರೋಧ ಏಕೆ? ಏನಿದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್?

ಸದ್ಯ ಹೇಮಾವತಿ ಜಲ ಹೋರಾಟ ಬೂದಿ ಮುಚ್ಚಿದ ಕೆಂಡದಂತಿದೆ. ರಾಜಕೀಯ ಜಟಾಪಟಿ ಜೋರಾಗಿದೆ. ದೂರು ದಾಖಲಾಗಿರೋದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೊಸ ಯುದ್ಧಕ್ಕೆ ನಾಂದಿ ಹಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ