AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ : ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್‌ ಗೌಡ ವಿರುದ್ಧ ಎಫ್​ಐಆರ್​ ದಾಖಲು

ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್‌ ಗೌಡ ವಿರುದ್ಧ ಹೆಬ್ಬೂರು ಪೊಲೀಸ್‌ ಠಾಣೆಯಲ್ಲಿ ಎಫ್.ಐ.ಆರ್‌ ದಾಖಲಾಗಿದೆ.

ಜೀವ ಬೆದರಿಕೆ : ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್‌ ಗೌಡ ವಿರುದ್ಧ ಎಫ್​ಐಆರ್​ ದಾಖಲು
ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ
TV9 Web
| Updated By: ವಿವೇಕ ಬಿರಾದಾರ|

Updated on:Nov 26, 2022 | 5:43 AM

Share

ತುಮಕೂರು: ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್‌ ಗೌಡ (Suresh Gowda)  ವಿರುದ್ಧ ಹೆಬ್ಬೂರು ಪೊಲೀಸ್‌ ಠಾಣೆಯಲ್ಲಿ ಎಫ್.ಐ.ಆರ್‌ (FIR) ದಾಖಲಾಗಿದೆ. ಜೆಡಿಎಸ್‌ ಶಾಸಕ ಬಿ.ಸಿ ಗೌರಿಶಂಕರ್‌ ದೂರಿನ ಮೇರಿಗೆ ಎಫ್.ಐ.ಆರ್‌ ದಾಖಲಿಸಲಾಗಿದೆ. ಸುರೇಶ್‌ ಗೌಡರಿಂದ ನನಗೆ ಜೀವ ಬೆದರಿಕೆಯಿದೆ ಎಂದು ಶಾಸಕ ಗೌರಿಶಂಕರ್‌ ದೂರಿದ್ದಾರೆ.

ತುಮಕೂರು ಗ್ರಾಮಾಂತರದ ಅರೆಯೂರಿನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ, ಸುರೇಶ್​ ಗೌಡನನ್ನು ಕೊಲೆ ಮಾಡಲು, ಗೌರಿಶಂಕರ್‌ ಜೈಲಿನಲ್ಲಿರುವ ಸುಜಯ್‌ ಭಾರ್ಗವ್‌ಗೆ 5 ಕೋಟಿ ರೂಪಾಯಿ ಸುಫಾರಿ ನೀಡಿದ್ದಾರೆಂದು ಸುರೇಶ್​ ಗೌಡಸುಳ್ಳು ಆರೋಪ ಮಾಡಿದ್ದಾರೆಂದು ಶಾಸಕ ಗೌರಿಶಂಕರ್‌ ದೂರು ನೀಡಿದ್ದಾರೆ.

ಇದರಿಂದ ತೇಜೋವಧೆಯಾಗಿದೆ. ಸುರೇಶ್‌ ಗೌಡರ ಈ ಭಾಷಣದ ಹೇಳಿಕೆಯಿಂದ ನನಗೆ ಜೀವ ಭಯ ಕಾಡುತ್ತಿದೆ. ಮಾಜಿ ಶಾಸಕರ ಈ ಹೇಳಿಕೆ ಗಮನಿಸಿದರೆ ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆಂಬ ಅನುಮಾನ ಮೂಡುತ್ತಿದೆ. ಮಾಜಿ ಶಾಸಕ ಸುರೇಶ್‌ ಗೌಡ ನನ್ನನ್ನು ಯಾವಾಗಲಾದ್ರೂ ಕೊಲೆ ಮಾಡಿಸಬಹುದು ಎಂಬ ಅನುಮಾನವಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಸುರೇಶ್‌ ಗೌಡ ಈ ರೀತಿಯ ಹೇಳಿಕೆ ಕೊಡುವ ಮೂಲಕ ಕ್ಷೇತ್ರದಲ್ಲಿ ದ್ವೇಷ ಕಿಚ್ಚು ಹಚ್ಚಿದ್ದಾರೆ. ನನ್ನ ವಿರುದ್ಧ ಅಪನಂಬಿಕೆ ಬರುವಂತೆ ಹೇಳಿಕೆ ಕೊಡುತ್ತಿದ್ದಾರೆಂದು ದೂರಿದ್ದಾರೆ. ಹೆಬ್ಬೂರು ಠಾಣೆಯಲ್ಲಿ ಸೆಕ್ಷನ್‌ 120(ಬಿ) 506 ಐಪಿಸಿ ಅಡಿಯಲ್ಲಿ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:44 pm, Fri, 25 November 22

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ