AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ : ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್‌ ಗೌಡ ವಿರುದ್ಧ ಎಫ್​ಐಆರ್​ ದಾಖಲು

ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್‌ ಗೌಡ ವಿರುದ್ಧ ಹೆಬ್ಬೂರು ಪೊಲೀಸ್‌ ಠಾಣೆಯಲ್ಲಿ ಎಫ್.ಐ.ಆರ್‌ ದಾಖಲಾಗಿದೆ.

ಜೀವ ಬೆದರಿಕೆ : ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್‌ ಗೌಡ ವಿರುದ್ಧ ಎಫ್​ಐಆರ್​ ದಾಖಲು
ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ
TV9 Web
| Edited By: ವಿವೇಕ ಬಿರಾದಾರ|

Updated on:Nov 26, 2022 | 5:43 AM

Share

ತುಮಕೂರು: ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್‌ ಗೌಡ (Suresh Gowda)  ವಿರುದ್ಧ ಹೆಬ್ಬೂರು ಪೊಲೀಸ್‌ ಠಾಣೆಯಲ್ಲಿ ಎಫ್.ಐ.ಆರ್‌ (FIR) ದಾಖಲಾಗಿದೆ. ಜೆಡಿಎಸ್‌ ಶಾಸಕ ಬಿ.ಸಿ ಗೌರಿಶಂಕರ್‌ ದೂರಿನ ಮೇರಿಗೆ ಎಫ್.ಐ.ಆರ್‌ ದಾಖಲಿಸಲಾಗಿದೆ. ಸುರೇಶ್‌ ಗೌಡರಿಂದ ನನಗೆ ಜೀವ ಬೆದರಿಕೆಯಿದೆ ಎಂದು ಶಾಸಕ ಗೌರಿಶಂಕರ್‌ ದೂರಿದ್ದಾರೆ.

ತುಮಕೂರು ಗ್ರಾಮಾಂತರದ ಅರೆಯೂರಿನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ, ಸುರೇಶ್​ ಗೌಡನನ್ನು ಕೊಲೆ ಮಾಡಲು, ಗೌರಿಶಂಕರ್‌ ಜೈಲಿನಲ್ಲಿರುವ ಸುಜಯ್‌ ಭಾರ್ಗವ್‌ಗೆ 5 ಕೋಟಿ ರೂಪಾಯಿ ಸುಫಾರಿ ನೀಡಿದ್ದಾರೆಂದು ಸುರೇಶ್​ ಗೌಡಸುಳ್ಳು ಆರೋಪ ಮಾಡಿದ್ದಾರೆಂದು ಶಾಸಕ ಗೌರಿಶಂಕರ್‌ ದೂರು ನೀಡಿದ್ದಾರೆ.

ಇದರಿಂದ ತೇಜೋವಧೆಯಾಗಿದೆ. ಸುರೇಶ್‌ ಗೌಡರ ಈ ಭಾಷಣದ ಹೇಳಿಕೆಯಿಂದ ನನಗೆ ಜೀವ ಭಯ ಕಾಡುತ್ತಿದೆ. ಮಾಜಿ ಶಾಸಕರ ಈ ಹೇಳಿಕೆ ಗಮನಿಸಿದರೆ ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆಂಬ ಅನುಮಾನ ಮೂಡುತ್ತಿದೆ. ಮಾಜಿ ಶಾಸಕ ಸುರೇಶ್‌ ಗೌಡ ನನ್ನನ್ನು ಯಾವಾಗಲಾದ್ರೂ ಕೊಲೆ ಮಾಡಿಸಬಹುದು ಎಂಬ ಅನುಮಾನವಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಸುರೇಶ್‌ ಗೌಡ ಈ ರೀತಿಯ ಹೇಳಿಕೆ ಕೊಡುವ ಮೂಲಕ ಕ್ಷೇತ್ರದಲ್ಲಿ ದ್ವೇಷ ಕಿಚ್ಚು ಹಚ್ಚಿದ್ದಾರೆ. ನನ್ನ ವಿರುದ್ಧ ಅಪನಂಬಿಕೆ ಬರುವಂತೆ ಹೇಳಿಕೆ ಕೊಡುತ್ತಿದ್ದಾರೆಂದು ದೂರಿದ್ದಾರೆ. ಹೆಬ್ಬೂರು ಠಾಣೆಯಲ್ಲಿ ಸೆಕ್ಷನ್‌ 120(ಬಿ) 506 ಐಪಿಸಿ ಅಡಿಯಲ್ಲಿ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:44 pm, Fri, 25 November 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ