AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಕರಿಬಸವೇಶ್ವರ ಮಠದ ಆನೆ ಅಪಹರಣಕ್ಕೆ ಯತ್ನ! ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ

ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಗೆ ಬನ್ನೇರುಘಟ್ಟದಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಲಾರಿಯಲ್ಲಿ ಹತ್ತಿಸಿಕೊಂಡು ಹೋಗಿದ್ದಾರೆ. ದಾಬಾಸ್ ಪೇಟೆ ಬಳಿ ಮಠದ ಆನೆಯ ಮಾವುತನಿಗೆ ಹಲ್ಲೆ ಮಾಡಿ ಆತನನ್ನು ಕೆಳಗಿಳಿಸಿ ಆನೆ ಅಪಹರಣಕ್ಕೆ ಯತ್ನಿಸಿದ್ದಾರೆ.

ತುಮಕೂರು ಕರಿಬಸವೇಶ್ವರ ಮಠದ ಆನೆ ಅಪಹರಣಕ್ಕೆ ಯತ್ನ! ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ
ಕರಿಬಸವೇಶ್ವರ ಮಠದ ಆನೆ
TV9 Web
| Updated By: sandhya thejappa|

Updated on: Jan 02, 2022 | 4:44 PM

Share

ತುಮಕೂರು: ಕರಿಬಸವೇಶ್ವರ ಮಠದ ಆನೆಯನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಖದೀಮರ ಗುಂಪೊಂದು ಲಕ್ಷ್ಮೀ ಎಂಬ ಹೆಣ್ಣಾನೆಯನ್ನು ಅಪಹರಿಸಿ ಗುಜರಾತ್​ಗೆ ಸಾಗಿಸಲು ಯತ್ನಿಸಿದೆ. ಆನೆಗೆ ಚಿಕಿತ್ಸೆ ಕೊಡಿಸಬೇಕು ಎಂದು ಪ್ಲ್ಯಾನ್ ಮಾಡಿ ಅಪಹರಣಕ್ಕೆ ಮುಂದಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸಹಕಾರದೊಂದಿಗೆ ಅಪಹರಣಕ್ಕೆ ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಗೆ ಬನ್ನೇರುಘಟ್ಟದಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಲಾರಿಯಲ್ಲಿ ಹತ್ತಿಸಿಕೊಂಡು ಹೋಗಿದ್ದಾರೆ. ದಾಬಾಸ್ ಪೇಟೆ ಬಳಿ ಮಠದ ಆನೆಯ ಮಾವುತನಿಗೆ ಹಲ್ಲೆ ಮಾಡಿ ಆತನನ್ನು ಕೆಳಗಿಳಿಸಿ ಆನೆಯನ್ನು ಅಪಹರಿಸಲು ಯತ್ನಿಸಿದ್ದಾರೆ.  ಬನ್ನೇರುಘಟ್ಟಕ್ಕೆ ಕರೆದುಕೊಂಡು ಹೋಗುವ ಬದಲು ಕುಣಿಗಲ್ ತಾಲೂಕಿನ ನಾರನಹಳ್ಳಿ ಹಳ್ಳಿಯೊಂದರಲ್ಲಿ ಆನೆಯನ್ನು ಬಚ್ಚಿಡಲಾಗಿತ್ತು. ಈ ವೇಳೆ ಆನೆಗೂ ಜೆಸಿಬಿಯಿಂದ ಹಲ್ಲೆ ಮಾಡಲಾಗಿತ್ತು ಅಂತ ಮಠದ ಸಿಬ್ಬಂದಿಗಳು ಆರೋಪಿಸುತ್ತಿದ್ದಾರೆ.

ಆರೋಪಿಗಳು ಗುಜರಾತ್ ಮೂಲದ ಸರ್ಕಸ್ ಕಂಪನಿಗೆ ಆನೆಯನ್ನು ಮಾರಲು ಯತ್ನಿಸಿದ್ದಾರೆ. ಸದ್ಯ ಮಠದ ಆಡಳಿತ ಮಂಡಳಿ ತುಮಕೂರು ನಗರ ಠಾಣೆಗೆ ದೂರು ನೀಡಿದ್ದು, ವಿಚಾರಣೆ ಬಳಿಕ ಇನ್ನಷ್ಟು ಮಾಹಿತಿ ಹೊರ ಬೀಳಲಿದೆ.

ಇದನ್ನೂ ಓದಿ

ಬೆಂಗಳೂರಿಗೆ ಮೇಕಪ್: ಗುಂಡಿಮುಚ್ಚಿ, ಲೈಟ್ ಹಾಕಿ, ಕ್ಯಾಮೆರಾ ಅಳವಡಿಸಲು ರಾಜ್ಯ ಸರ್ಕಾರ ಸೂಚನೆ

ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ; ಈ ವಿಶ್ವವಿದ್ಯಾಲಯವು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾಗಲಿದೆ: ನರೇಂದ್ರ ಮೋದಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ