AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ರೈತರ ಮನವಿಗೆ ಬಗ್ಗದೆ ಫಸಲು ನೀಡುತ್ತಿದ್ದ ಅಡಕೆ, ತೆಂಗಿನ ಮರಗಳನ್ನ ತೆರವುಗೊಳಿಸಿದ ಅರಣ್ಯ ಅಧಿಕಾರಿಗಳು

ಶಾರದಮ್ಮ ಎಂಬುವವರು ಅಡಕೆ, ತೆಂಗು ಬೆಳೆದಿದ್ದರು. ಆದರೆ ರೈತರಿಗೆ ಸೇರಿದ್ದ ಭೂಮಿಯನ್ನ ಮೀಸಲು ಅರಣ್ಯ ಪ್ರದೇಶ ಎಂದು ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೋಲಿಸ್ ಭದ್ರತೆಯಲ್ಲಿ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.

ತುಮಕೂರಿನಲ್ಲಿ ರೈತರ ಮನವಿಗೆ ಬಗ್ಗದೆ ಫಸಲು ನೀಡುತ್ತಿದ್ದ ಅಡಕೆ, ತೆಂಗಿನ ಮರಗಳನ್ನ ತೆರವುಗೊಳಿಸಿದ ಅರಣ್ಯ ಅಧಿಕಾರಿಗಳು
ಕೃಷಿ ಭೂಮಿಯನ್ನು ತೆರವು ಮಾಡದಂತೆ ಅಧಿಕಾರಿಗಳಿಗೆ ಅಡ್ಡ ಬಂದ ರೈತ ಕುಟುಂಬ
TV9 Web
| Edited By: |

Updated on:Mar 07, 2022 | 9:03 AM

Share

ತುಮಕೂರು: ರೈತರಿಗೆ (Farmers) ಯಾವುದೇ ನೋಟಿಸ್ ನೀಡದೆ ಅಧಿಕಾರಿಗಳು ಏಕಾಏಕಿ ಕೃಷಿ ಭೂಮಿಯನ್ನು ತೆರವು ಮಾಡಿಸಿದ ಘಟನೆ ತುಮಕೂರು (Tumkur) ಜಿಲ್ಲೆಯ ಗುಬ್ಬಿ ತಾಲೂಕಿನ ಅಮ್ಮನಘಟ್ಟದಲ್ಲಿ ನಡೆದಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ಕೃಷಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಅಧಿಕಾರಿಗಳು ಭಾನುವಾರ ಸಂಜೆ ಏಕಾಏಕಿ ನೂರಕ್ಕೂ ಹೆಚ್ಚು ಅಡಕೆ, ತೆಂಗು ಮರಗಳನ್ನ ತೆರವು ಮಾಡಿಸಿದ್ದಾರೆ. ರೈತರು ಭೂಮಿ ತಮಗೆ ಸೇರಿದ್ದಾಗಿ ದಾಖಲೆಗಳನ್ನ ತೋರಿಸಿದ್ದರು. ಅಲ್ಲದೆ ಅಡಕೆ, ತೆಂಗು ಮರ ತೆರವು ಮಾಡದಂತೆ ಮನವಿ ಮಾಡಿದ್ದರು. ಆದರೆ ಯಾವುದನ್ನೂ ಲೆಕ್ಕಿಸದೆ ನಿನ್ನೆ ಸಂಜೆ ಏಕಾಏಕಿ ತೆರವು ಕಾರ್ಯ ನಡೆಸಿದ್ದಾರೆ.

ಗ್ರಾಮದ ಶಾರದಮ್ಮ ಎಂಬುವವರು ಅಡಕೆ, ತೆಂಗು ಬೆಳೆದಿದ್ದರು. ಆದರೆ ರೈತರಿಗೆ ಸೇರಿದ್ದ ಭೂಮಿಯನ್ನ ಮೀಸಲು ಅರಣ್ಯ ಪ್ರದೇಶ ಎಂದು ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೋಲಿಸ್ ಭದ್ರತೆಯಲ್ಲಿ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ರೈತ ಮಹಿಳೆ ಶಾರದಮ್ಮ ಕೋರ್ಟ್ಗೆ ಅಫೀಲು ಹೋಗಿದ್ದು, ತಡೆ ಅರ್ಜಿಯನ್ನು ಸೋಮವಾರ ತೊರಿಸುತ್ತೇವೆ ಎಂದರೂ ಅಧಿಕಾರಿಗಳು ಬೀಡಲಿಲ್ಲ. ಇದೊಂದು ಉದ್ದೇಶ ಪೂರ್ವಕವಾಗಿ ನಡೆದ ಕೃತ್ಯ ಅಂತ ರೈತ ಕುಟುಂಬ ಗಂಭೀರ ಆರೋಪ ಮಾಡುತ್ತಿದೆ.

ಆಕಸ್ಮಿಕ ಬೆಂಕಿ ತಗುಲಿ‌ ಸುಟ್ಟು ಕರಕಲಾದ ಅಂಗಡಿ: ಮೈಸೂರು: ಆಕಸ್ಮಿಕ ಬೆಂಕಿ ತಗುಲಿ‌ ಪೆಟ್ಟಿ ಅಂಗಡಿ ಕರಕಲಾಗಿದೆ. ಈ ಘಟನೆ ಮೈಸೂರು ಕುವೆಂಪುನಗರದ ಕೆ ಬ್ಲಾಕ್​ನಲ್ಲಿ ನಡೆದಿದೆ. ಗಾನಭಾರತಿ ವೀಣೆ ಶೇಷಣ್ಣ ಹಿಂಭಾಗದ ಬಟ್ಟೆ ಐರನ್ ಅಂಗಡಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ಮೂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ. ಸದ್ಯ ಈ ಪ್ರಕರಣ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

Russia-Ukraine War Live: ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಬದಲಾದ ಪೋಷಕರ ಮನಸ್ಥಿತಿ; ಸ್ವದೇಶದಲ್ಲೇ ಶಿಕ್ಷಣಕ್ಕೆ ಆಗ್ರಹ

ಗರ್ಭಿಣಿ ಪತ್ನಿಯನ್ನು ಉಕ್ರೇನ್​​ನಲ್ಲಿ ಬಿಟ್ಟು ಬರಲಾರೆ: ಭಾರತಕ್ಕೆ ಮರಳಲು ನಿರಾಕರಿಸಿದ ವ್ಯಕ್ತಿ

Published On - 8:59 am, Mon, 7 March 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ