AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿ ಕಾಲು ಮುರಿದುಕೊಂಡ ಎತ್ತು; ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್

ಮೂಕ ವೇದನೆಯನ್ನು ಗಮನಿಸಿದ ಡಿಸಿಎಂ ಜಿ. ಪರಮೇಶ್ವರ್ ಅವರು ರೈತನ ಬಳಿ ಧಾವಿಸಿದರು. ಅನ್ನದಾತನನ್ನು ಸಮಾಧಾನ ಪಡಿಸಿದ ಪರಮೇಶ್ವರ್, ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ, ಧೈರ್ಯವಾಗಿರು ಎಂದು ಧೈರ್ಯ ತುಂಬಿದ್ದಾರೆ.

ಹೊಲದಲ್ಲಿ ಕಾಲು ಮುರಿದುಕೊಂಡ ಎತ್ತು; ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್
ಹೊಲದಲ್ಲಿ ಕಾಲು ಮುರಿದುಕೊಂಡ ಎತ್ತು; ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್
TV9 Web
| Edited By: |

Updated on: Aug 19, 2021 | 11:39 AM

Share

ತುಮಕೂರು: ಹೊಲದಲ್ಲಿ ಎತ್ತೊಂದು ಕಾಲು ಮುರಿದುಕೊಂಡು ಬಿದ್ದಿತ್ತು. ಅದನ್ನು ಕಂಡು ಗೋಲಾಡುತ್ತಿದ್ದ ಎತ್ತಿನ ಮಾಲೀಕನಿಗೆ ಸಾಂತ್ವನ ಹೇಳಿ ಮಾನವೀಯತೆ ಮೆರೆದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ ಎಂದು ಆತನಿಗೆ ಧೈರ್ಯ ತುಂಬಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ (ಡಿಸಿಎಂ) ಡಾ. ಜಿ. ಪರಮೇಶ್ವರ್ ಅವರು ಇಂದು ತಮ್ಮ ಕೊರಟಗೆರೆ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದರು. ಆ ವೇಳೆ ಮಾರ್ಗ ಮಧ್ಯೆ, ಹೊಲದಲ್ಲಿ ಕಣ್ಣೀರು ಹಾಕಿಕೊಂಡು ರೈತನೊಬ್ಬ ಕುಳಿತಿರುವುದು ಅವರಿಗೆ ಕಂಡುಬಂದಿದೆ. ಉತ್ತಮ ಮುಂಗಾರು ಹಂಗಾಮಿನ ಸಂದರ್ಭದಲ್ಲಿ ಭೂಮಿಯನ್ನು ಹದ ಮಾಡುತ್ತಿದ್ದ ವೇಳೆ ರೈತನ ಒಂದು ಎತ್ತು ಕಾಲು ಮುರಿದುಕೊಂಡು ಒದ್ದಾಡುತ್ತಿತ್ತು. ಅದನ್ನು ಕಂಡು ವಿಧಿಯಿಲ್ಲದೆ ರೈತ ಗೋಳಾಡತೊಡಗಿದ್ದ.

ಈ ಮೂಕ ವೇದನೆಯನ್ನು ಗಮನಿಸಿದ ಡಿಸಿಎಂ ಜಿ. ಪರಮೇಶ್ವರ್ ಅವರು ರೈತನ ಬಳಿ ಧಾವಿಸಿದರು. ಅನ್ನದಾತನನ್ನು ಸಮಾಧಾನ ಪಡಿಸಿದ ಪರಮೇಶ್ವರ್, ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ, ಧೈರ್ಯವಾಗಿರು ಎಂದು ಧೈರ್ಯ ತುಂಬಿದ್ದಾರೆ. ಕೊರಟಗೆರೆ ತಾಲೂಕಿನ ಚಿಂಪಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು.. ಜಾತ್ರೆಯಲ್ಲಿ ಮಹಿಳೆಯರಿಗೆ ಬಳೆ ಕೊಡಿಸಿದ ಮಾಜಿ ಡಿಸಿಎಂ ಪರಮೇಶ್ವರ್

(former dcm dr g parameshwar lends helping hand to a farmer in a village in koratagere)

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು