ಲಾರಿಗೆ ಕಾರು ಡಿಕ್ಕಿ: ಜವರಾಯನ ಅಟ್ಟಹಾಸಕ್ಕೆ ಕುಣಿಗಲ್​​ ಬಳಿ ದಾರಿಯಲ್ಲೇ ಪ್ರಾಣಬಿಟ್ಟ ನಾಲ್ವರು

ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಗೊಬ್ಬರ ತುಂಬಿದ ಲಾರಿಗೆ ಆಲ್ಟೋ ಕಾರು ಡಿಕ್ಕಿಯಾದ ಪರಿಣಾಮ ಕಾರಲ್ಲಿದ್ದ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದ್ದು, ಮೃತ ದುರ್ದೈವಿಗಳನ್ನು ಮಂಡ್ಯ ಮೂಲದವರೆಂದು ಗುರುತಿಸಲಾಗಿದೆ.

ಲಾರಿಗೆ ಕಾರು ಡಿಕ್ಕಿ: ಜವರಾಯನ ಅಟ್ಟಹಾಸಕ್ಕೆ ಕುಣಿಗಲ್​​ ಬಳಿ ದಾರಿಯಲ್ಲೇ ಪ್ರಾಣಬಿಟ್ಟ ನಾಲ್ವರು
ಸಾಂದರ್ಭಿಕ ಚಿತ್ರ
Image Credit source: AI Image
Edited By:

Updated on: May 09, 2026 | 5:43 PM

ತುಮಕೂರು, ಮೇ 09: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ. ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರು ಛಿದ್ರ ಛಿದ್ರವಾಗಿದ್ದು, ಕಾರು ಚಾಲಕ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  • ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ
  • ಅಪಘಾತದ ರಭಸಕ್ಕೆ ಆಲ್ಟೋ ಕಾರಲಿದ್ದ ನಾಲ್ವರು ಸಾವು
  • ಮೃತರು ಮಂಡ್ಯದ ಸ್ವರ್ಣಸಂದ್ರ ನಿವಾಸಿಗಳೆಂಬ ಮಾಹಿತಿ

ಇದನ್ನೂ ಓದಿ: ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ; 50ಕ್ಕೂ ಹೆಚ್ಚು ನವಿಲುಗಳ ಸಾವು!

ವಿವಾಹ ವಾರ್ಷಿಕೋತ್ಸವದ ದಿನದಂದೇ ದುರ್ಮರಣ

ಮೃತರನ್ನು ಮಂಡ್ಯದ ಸ್ವರ್ಣಸಂದ್ರ ನಿವಾಸಿಯಾದ ಕುಮಾರ ನರಸಿಂಹಸ್ವಾಮಿ, ಅವರ ಪತ್ನಿ ಗಾಯತ್ರಿ (60), ಸಹೋದರಿ ಗಾಯತ್ರಿ (55) ಹಾಗೂ ಮತ್ತೋರ್ವ ಪುರುಷ ಎಂದು ಗುರುತಿಸಲಾಗಿದೆ. ನಿನ್ನೆ ಪತ್ನಿ ಹಾಗೂ ತಂಗಿ ಜೊತೆ ತುಮಕೂರಿಗೆ ಬಂದಿದ್ದ ಕುಮಾರ ನರಸಿಂಹಸ್ವಾಮಿ ಇಂದು ಮದುವೆ ವಾರ್ಷಿಕೊತ್ಸವದ ಹಿನ್ನೆಲೆ ದೇವರಾಯನದುರ್ಗಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸ್​​ ಊರಿಗೆ ಹಿಂದಿರುಗುವಾಗ ಅವಘಡ ನಡೆದಿದೆ.

ಮತ್ತೋರ್ವನ ಗುರುತು ಪತ್ತೆ

ಕಾರಲ್ಲಿದ್ದ ನಾಲ್ವರ ಪೈಕಿ ಮತ್ತೊಬ್ಬ ಪುರುಷ ಯಾರೆಂಬ ಬಗ್ಗೆ ಆರಂಭದಲ್ಲಿ ನಿಖರ ಮಾಹಿತಿ ಸಿಕ್ಕಿರಲಿಲ್ಲ. ಹೀಗಾಗಿ ಆತನ ಬಗ್ಗೆ ಪೊಲೀಸರು ವಿಚಾರಣೆ ಮುಂದುವರಿಸಿದ್ದರು. ಆದರೆ ಮೃತ ಮತ್ತೋರ್ವರ ಅವರ ಕಾರು ಚಾಲಕ ಎಂಬ ವಿಚಾರವೀಗ ಗೊತ್ತಾಗಿದೆ. ಮೃತದೇಹಗಳನ್ನು ಕುಣಿಗಲ್​​ನ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:15 pm, Sat, 9 May 26

Follow Us