AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ಕಾರ್ಮಿಕರಿಗೆ ಗಾರ್ಮೆಂಟ್ಸ್ ಕಂಪನಿಯಿಂದ ಪಂಗನಾಮ: ವಯಸ್ಸಾದವರು, ಅಂಗವಿಕಲರನ್ನೂ ದುಡಿಸಿಕೊಂಡು ದೋಖಾ

ನಗರದ ಗುಬ್ಬಿ ಗೇಟ್ ಬಳಿ ಇರುವ ಕೇಸರಿ ಟೆಕ್ಸ್ ಗಾರ್ಮೆಂಟ್ಸ್ ಕಂಪನಿಯು ಬಡ ಕಾರ್ಮಿಕರು, ವಯಸ್ಸಾದವರು, ಅಂಗವಿಕಲರನ್ನೂ ದುಡಿಸಿಕೊಂಡು ಸಂಬಳ ನೀಡದೆ ವಂಚಿಸಿರುವ ಘಟನೆ ನಡೆದಿದೆ. ಮೂರು ತಿಂಗಳುಗಳಿಂದ ಸಂಬಳ ನೀಡದೇ ಸತಾಯಿಸುತ್ತಿರುವ ಕಂಪನಿ ವಿರುದ್ದ ರೊಚ್ಚಿಗೆದ್ದ ನೌಕರರು ಕಂಪನಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಬಡ ಕಾರ್ಮಿಕರಿಗೆ ಗಾರ್ಮೆಂಟ್ಸ್ ಕಂಪನಿಯಿಂದ ಪಂಗನಾಮ: ವಯಸ್ಸಾದವರು, ಅಂಗವಿಕಲರನ್ನೂ ದುಡಿಸಿಕೊಂಡು ದೋಖಾ
ತುಮಕೂರು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jul 06, 2023 | 3:07 PM

Share

ತುಮಕೂರು: ನಗರದ ಗುಬ್ಬಿ ಗೇಟ್ ಬಳಿ ಇರುವ ಕೇಸರಿ ಟೆಕ್ಸ್ ಗಾರ್ಮೆಂಟ್ಸ್ ಕಂಪನಿ (Garments Company)ಯು ಬಡ ಕಾರ್ಮಿಕರು, ವಯಸ್ಸಾದವರು, ಅಂಗವಿಕಲರನ್ನೂ ದುಡಿಸಿಕೊಂಡು ಸಂಬಳ ನೀಡದೆ ವಂಚಿಸಿರುವ ಘಟನೆ ನಡೆದಿದೆ. ಮೂರು ತಿಂಗಳುಗಳಿಂದ ಸಂಬಳ ನೀಡದೇ ಸತಾಯಿಸುತ್ತಿರುವ ಕಂಪನಿ ವಿರುದ್ದ ರೊಚ್ಚಿಗೆದ್ದ ನೌಕರರು ಇಂದು(ಜು.6) ಕಂಪನಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪ್ರಕಾಶ್ ಎಂಬುವವವರಿಗೆ ಸೇರಿರುವ ಗಾರ್ಮೆಂಟ್ಸ್ ಕಂಪನಿ ಇದಾಗಿದ್ದು, ಸಂಬಳ ನೀಡದ ಕಂಪನಿ ವಿರುದ್ಧ ದೂರು ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲದ ಹಿನ್ನಲೆ ನೌಕರರೇ ಹೋರಾಟಕ್ಕೆ ಇಳಿದಿದ್ದಾರೆ.

ಕಷ್ಟಪಟ್ಟು ದುಡಿದ ಹಣ ಕೈ ಸೇರದೇ ಬಡ ನೌಕರರ ಕಣ್ಣೀರು

ಸುಮಾರು 130ರಿಂದ 150 ಮಂದಿ ಕೆಲಸ ಮಾಡುತ್ತಿದ್ದ ಗಾರ್ಮೆಂಟ್ಸ್ ಕಂಪನಿ ಇದಾಗಿದೆ. ಆದ್ರೆ, ಕಳೆದ ಮೂರು ತಿಂಗಳಿನಿಂದ ನೌಕರರಿಗೆ ಸಂಬಳ ನೀಡಿಲ್ಲ. ಒಬ್ಬೊಬ್ಬರಿಗೆ ಅಂದಾಜು 40ರಿಂದ 50 ಸಾವಿರ ರೂಪಾಯಿ ಸಂಬಳ ಬಾಕಿ ಇರಿಸಿಕೊಂಡಿದೆ. ಈ ಕುರಿತು ಕೇಳಿದಾಗ ‘ನನ್ನನ್ನ ನಂಬಿ ನಿಮ್ಮ ಸಂಬಳ ಕೊಟ್ಟೇ ಕೊಡುತ್ತೇನೆ ಎಂದು ಮಾಲೀಕ ಪ್ರಕಾಶ್ ಹೇಳುತ್ತಿದ್ದನಂತೆ. ಮಾಲೀಕನನ್ನ ನಂಬಿ ಕೆಲಸ ಮಾಡಿದವರಿಗೆ ಇದೀಗ ಪಂಗನಾಮ ಹಾಕಿದ್ದು, ಈಗ ಸಂಬಳವನ್ನೂ ನೀಡದೇ, ಫೋನ್ ಕೂಡ ರಿಸೀವ್ ಮಾಡದೇ ತಲೆ ಮರೆಸಿಕೊಂಡಿದ್ದಾನೆ.

ಇದನ್ನೂ ಓದಿ:ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ

ಪೊಲೀಸ್ ಠಾಣೆಗೆ ದೂರು ನೀಡಿದ್ರೂ ನೋ ಯೂಸ್

ಇನ್ನು ಈ ಕುರಿತು ಕಾರ್ಮಿಕ ಇಲಾಖೆ ಸೇರಿದಂತೆ ಪೊಲೀಸ್​ ಠಾಣೆಗೂ ದೂರು ನೀಡಿದ್ರೂ, ಯಾವುದೇ ಪ್ರಯೋಜನ ಆಗುತ್ತಿಲ್ಲವೆಂದು ಕಾರ್ಮಿಕರು ಅಳಲನ್ನ ತೋಡಿಕೊಳ್ಳುತ್ತಿದ್ದಾರೆ. ಹೌದು ದೂರು ನೀಡಲು ಹೋದರೆ, ತಿಲಕ್ ಪಾರ್ಕ್ ಪೊಲೀಸರು ತೆಗೆದುಕೊಂಡಿಲ್ಲ. ಬಳಿಕ ಮೂರ್ನಾಲ್ಕು ದಿನ ಅಲೆದ ಮೇಲೆ ಸದ್ಯ ಕಾಟಾಚಾರಕ್ಕೆ ಪೊಲೀಸರು ದೂರು ಸ್ವೀಕರಿಸಿದ್ದಾರಂತೆ. ಈ ಕುರಿತು ಕೇಳಿದರೇ ಇನ್ನೂ ಪ್ರಕಾಶ್ ಫೋನ್ ರಿಸೀವ್ ಮಾಡುತ್ತಿಲ್ಲ. ನಾವೇನು ಮಾಡೋಣವೆಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರಂತೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Thu, 6 July 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್