AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ಕಾರ್ಮಿಕರಿಗೆ ಗಾರ್ಮೆಂಟ್ಸ್ ಕಂಪನಿಯಿಂದ ಪಂಗನಾಮ: ವಯಸ್ಸಾದವರು, ಅಂಗವಿಕಲರನ್ನೂ ದುಡಿಸಿಕೊಂಡು ದೋಖಾ

ನಗರದ ಗುಬ್ಬಿ ಗೇಟ್ ಬಳಿ ಇರುವ ಕೇಸರಿ ಟೆಕ್ಸ್ ಗಾರ್ಮೆಂಟ್ಸ್ ಕಂಪನಿಯು ಬಡ ಕಾರ್ಮಿಕರು, ವಯಸ್ಸಾದವರು, ಅಂಗವಿಕಲರನ್ನೂ ದುಡಿಸಿಕೊಂಡು ಸಂಬಳ ನೀಡದೆ ವಂಚಿಸಿರುವ ಘಟನೆ ನಡೆದಿದೆ. ಮೂರು ತಿಂಗಳುಗಳಿಂದ ಸಂಬಳ ನೀಡದೇ ಸತಾಯಿಸುತ್ತಿರುವ ಕಂಪನಿ ವಿರುದ್ದ ರೊಚ್ಚಿಗೆದ್ದ ನೌಕರರು ಕಂಪನಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಬಡ ಕಾರ್ಮಿಕರಿಗೆ ಗಾರ್ಮೆಂಟ್ಸ್ ಕಂಪನಿಯಿಂದ ಪಂಗನಾಮ: ವಯಸ್ಸಾದವರು, ಅಂಗವಿಕಲರನ್ನೂ ದುಡಿಸಿಕೊಂಡು ದೋಖಾ
ತುಮಕೂರು
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 06, 2023 | 3:07 PM

ತುಮಕೂರು: ನಗರದ ಗುಬ್ಬಿ ಗೇಟ್ ಬಳಿ ಇರುವ ಕೇಸರಿ ಟೆಕ್ಸ್ ಗಾರ್ಮೆಂಟ್ಸ್ ಕಂಪನಿ (Garments Company)ಯು ಬಡ ಕಾರ್ಮಿಕರು, ವಯಸ್ಸಾದವರು, ಅಂಗವಿಕಲರನ್ನೂ ದುಡಿಸಿಕೊಂಡು ಸಂಬಳ ನೀಡದೆ ವಂಚಿಸಿರುವ ಘಟನೆ ನಡೆದಿದೆ. ಮೂರು ತಿಂಗಳುಗಳಿಂದ ಸಂಬಳ ನೀಡದೇ ಸತಾಯಿಸುತ್ತಿರುವ ಕಂಪನಿ ವಿರುದ್ದ ರೊಚ್ಚಿಗೆದ್ದ ನೌಕರರು ಇಂದು(ಜು.6) ಕಂಪನಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪ್ರಕಾಶ್ ಎಂಬುವವವರಿಗೆ ಸೇರಿರುವ ಗಾರ್ಮೆಂಟ್ಸ್ ಕಂಪನಿ ಇದಾಗಿದ್ದು, ಸಂಬಳ ನೀಡದ ಕಂಪನಿ ವಿರುದ್ಧ ದೂರು ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲದ ಹಿನ್ನಲೆ ನೌಕರರೇ ಹೋರಾಟಕ್ಕೆ ಇಳಿದಿದ್ದಾರೆ.

ಕಷ್ಟಪಟ್ಟು ದುಡಿದ ಹಣ ಕೈ ಸೇರದೇ ಬಡ ನೌಕರರ ಕಣ್ಣೀರು

ಸುಮಾರು 130ರಿಂದ 150 ಮಂದಿ ಕೆಲಸ ಮಾಡುತ್ತಿದ್ದ ಗಾರ್ಮೆಂಟ್ಸ್ ಕಂಪನಿ ಇದಾಗಿದೆ. ಆದ್ರೆ, ಕಳೆದ ಮೂರು ತಿಂಗಳಿನಿಂದ ನೌಕರರಿಗೆ ಸಂಬಳ ನೀಡಿಲ್ಲ. ಒಬ್ಬೊಬ್ಬರಿಗೆ ಅಂದಾಜು 40ರಿಂದ 50 ಸಾವಿರ ರೂಪಾಯಿ ಸಂಬಳ ಬಾಕಿ ಇರಿಸಿಕೊಂಡಿದೆ. ಈ ಕುರಿತು ಕೇಳಿದಾಗ ‘ನನ್ನನ್ನ ನಂಬಿ ನಿಮ್ಮ ಸಂಬಳ ಕೊಟ್ಟೇ ಕೊಡುತ್ತೇನೆ ಎಂದು ಮಾಲೀಕ ಪ್ರಕಾಶ್ ಹೇಳುತ್ತಿದ್ದನಂತೆ. ಮಾಲೀಕನನ್ನ ನಂಬಿ ಕೆಲಸ ಮಾಡಿದವರಿಗೆ ಇದೀಗ ಪಂಗನಾಮ ಹಾಕಿದ್ದು, ಈಗ ಸಂಬಳವನ್ನೂ ನೀಡದೇ, ಫೋನ್ ಕೂಡ ರಿಸೀವ್ ಮಾಡದೇ ತಲೆ ಮರೆಸಿಕೊಂಡಿದ್ದಾನೆ.

ಇದನ್ನೂ ಓದಿ:ಹೇಳಿದ್ದು 10ಸಾವಿರ ರೂ, ಕೊಟ್ಟಿದ್ದು 4ಸಾವಿರ.. ಗಾರ್ಮೆಂಟ್ಸ್​ ಕಂಪನಿ ಕೊರೊನಾ ಧೋಖಾ

ಪೊಲೀಸ್ ಠಾಣೆಗೆ ದೂರು ನೀಡಿದ್ರೂ ನೋ ಯೂಸ್

ಇನ್ನು ಈ ಕುರಿತು ಕಾರ್ಮಿಕ ಇಲಾಖೆ ಸೇರಿದಂತೆ ಪೊಲೀಸ್​ ಠಾಣೆಗೂ ದೂರು ನೀಡಿದ್ರೂ, ಯಾವುದೇ ಪ್ರಯೋಜನ ಆಗುತ್ತಿಲ್ಲವೆಂದು ಕಾರ್ಮಿಕರು ಅಳಲನ್ನ ತೋಡಿಕೊಳ್ಳುತ್ತಿದ್ದಾರೆ. ಹೌದು ದೂರು ನೀಡಲು ಹೋದರೆ, ತಿಲಕ್ ಪಾರ್ಕ್ ಪೊಲೀಸರು ತೆಗೆದುಕೊಂಡಿಲ್ಲ. ಬಳಿಕ ಮೂರ್ನಾಲ್ಕು ದಿನ ಅಲೆದ ಮೇಲೆ ಸದ್ಯ ಕಾಟಾಚಾರಕ್ಕೆ ಪೊಲೀಸರು ದೂರು ಸ್ವೀಕರಿಸಿದ್ದಾರಂತೆ. ಈ ಕುರಿತು ಕೇಳಿದರೇ ಇನ್ನೂ ಪ್ರಕಾಶ್ ಫೋನ್ ರಿಸೀವ್ ಮಾಡುತ್ತಿಲ್ಲ. ನಾವೇನು ಮಾಡೋಣವೆಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರಂತೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Thu, 6 July 23

ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ