AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಣಂತಿ, ಶಿಶುವನ್ನು ಊರಿಂದ ಹೊರಗಿಟ್ಟ ಕಾಡುಗೊಲ್ಲ ಕುಟುಂಬ; ನಮ್ಮ ದೇವರಿಗೆ ಸೂತಕ ಆಗಲ್ಲ, ನಾವು ಬಿಟ್ಟುಕೊಳ್ಳಲ್ಲ ಎಂದ ಹಿರಿಯರು

ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯ ವಸಂತಾ ಅನ್ನೋ ಬಾಣಂತಿ ಹಾಗೂ ನವಜಾತ ಶಿಶುವನ್ನು ಊರಾಚೆಯ ಜಮೀನಿನಲ್ಲಿ ನಿರ್ಮಿಸಿರುವ ತಾತ್ಕಾಲಿಕ ಗುಡಿಸಲಿನಲ್ಲಿ ಇರಿಸಲಾಗಿದೆ.

ಬಾಣಂತಿ, ಶಿಶುವನ್ನು ಊರಿಂದ ಹೊರಗಿಟ್ಟ ಕಾಡುಗೊಲ್ಲ ಕುಟುಂಬ; ನಮ್ಮ ದೇವರಿಗೆ ಸೂತಕ ಆಗಲ್ಲ, ನಾವು ಬಿಟ್ಟುಕೊಳ್ಳಲ್ಲ ಎಂದ ಹಿರಿಯರು
ಗುಡಿಸಲಲ್ಲಿ ಬಾಣಂತಿ, ಶಿಶು ವಾಸ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on: Jul 19, 2023 | 8:19 AM

Share

ತುಮಕೂರು: ಇತ್ತೀಚಿನ ಬದಲಾದ ಕಾಲಮಾನದಲ್ಲಿ ಆಧುನಿಕತೆ ಅನ್ನೋದು ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ತಿದೆ. ಏನೆಲ್ಲಾ ಬದಲಾದರೂ ನಾವು ಮಾತ್ರ ಮೌಢ್ಯ(Superstition) ಮರೆಯಲ್ಲಾ ಅಂತಿದ್ದಾರೆ ತುಮಕೂರಿನ(Tumkur) ಈ ಗ್ರಾಮದ ಜನ. ಸೂತಕ ಸಂಪ್ರದಾಯದ ಆಚರಣೆ ಮಾಡೋ ಮೂಲಕ ಇಲ್ಲೊಂದು ಕಾಡು ಗೊಲ್ಲರ ಕುಟುಂಬ ಹಸಿ ಬಾಣಂತಿ ಹಾಗೂ ಎಳೆ ಕಂದಮ್ಮನನ್ನ ಮೌಢ್ಯಕ್ಕೆ ನೂಕಿದೆ.

ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯ ವಸಂತಾ ಅನ್ನೋ ಬಾಣಂತಿ ಹಾಗೂ ನವಜಾತ ಶಿಶುವನ್ನು ಊರಾಚೆಯ ಜಮೀನಿನಲ್ಲಿ ನಿರ್ಮಿಸಿರುವ ತಾತ್ಕಾಲಿಕ ಗುಡಿಸಲಿನಲ್ಲಿ ಇರಿಸಲಾಗಿದೆ. ಸಂಪ್ರದಾಯದ ಹೆಸರಿನಲ್ಲಿ ತಾಯಿ, ಮಗುವಿನ ಜೀವಕ್ಕೆ ಕುತ್ತು ತರುವಂತಾ ಮೌಢ್ಯಾಚರಣೆಗೆ ನಡೆಯುತ್ತಿದೆ. ಪುಟ್ಟ ಗುಡಿಸಿಲಿನಲ್ಲಿ 5 ದಿನಗಳಿಂದ ಹಸಿ ಬಾಣಂತಿ, ನವಜಾತ ಶಿಶು ವಾಸ ಮಾಡ್ತಿದ್ದಾರೆ. ಬಾಣಂತಿ ಹಾಗೂ ಪುಟ್ಟ ಮಗುವನ್ನು ಊರಿನಿಂದ ಹೊರಗಿಟ್ಟ ಸಮುದಾಯ ಈ ಪುಟ್ಟ ಗುಡಿಸಿನಲ್ಲಿ ಏಕಾಂಕಿಯಾಗಿ ವಾಸ ಮಾಡುವಂತೆ ಕಟ್ಟಪ್ಪಣೆ ಮಾಡಿದೆ.

ಇದನ್ನೂ ಓದಿ: ದಾವಣಗೆರೆ: ಮುಖ್ಯಶಿಕ್ಷಕರ ಬೇಜವಾಬ್ದಾರಿತನಕ್ಕೆ ಬಿಸಿಯೂಟದಿಂದ ವಂಚಿತರಾದ ಶಾಲೆ ಮಕ್ಕಳು, ವಿದ್ಯಾರ್ಥಿಗಳಿಂದಲೇ ಅಡುಗೆ ತಯಾರಿ

ಇದೇ ಗ್ರಾಮದ ವಸಂತ ಎಂಬ ಗರ್ಭಿಣಿ, 5 ದಿನಗಳ ಹಿಂದೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವಳಿ‌ ಶಿಶುವಿಗೆ ಜನ್ಮ ನೀಡಿದ್ದರು. ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಆರೋಗ್ಯವಾಗಿದೆ. ಹೆರಿಗೆ ಮುಗಿಸಿ ವಾಪಸ್ ಬಂದ ವಸಂತ ಮನೆಗೆ ತೆರಳದೇ ಊರ ಹೊರಗಿನ ಗುಡಿಸಲಿನಲ್ಲಿ ತನ್ನ ಚೊಚ್ಚಲ ಬಾಣಂತನ ಆರಂಭಿಸಿದ್ದಾರೆ. ಸದ್ಯ ಬದುಕಿರುವ ನವಜಾತ ಹೆಣ್ಣು ಮಗುವಿನೊಂದಿಗೆ ತಾಯಿ ವಸಂತಾ ವಾಸ ಮಾಡುತ್ತಿದ್ದು, ನಮ್ಮ ದೇವರಿಗೆ ಸೂತಕ ಆಗಲ್ಲ ಹಾಗಾಗಿ ನಾವು ಒಳಗೆ ಬಿಟ್ಟುಕೊಳ್ಳುವುದಿಲ್ಲ, ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು. ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಆಗಲ್ಲ, ಹಿಂದಿನಿಂದಲೂ ಈ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಕಾಡುಗೊಲ್ಲ ಸಮುದಾಯದ ಮುಖಂಡರು ತಮ್ಮ ಮೌಢ್ಯಾಚರಣೆ ಮುಂದುವರೆಸಿದ್ದಾರೆ.

ಸದ್ಯ ವಸಂತಾಳ ಗುಡಿಸಲು ವಾಸಕ್ಕೆ 5 ದಿನಗಳು ಕಳೆದಿದ್ದು, ಇನ್ನೂ ಎರಡು ತಿಂಗಳು‌ ಇಲ್ಲೇ ಇರಲಿದ್ದಾರೆ. ಬಾಲಕಿಯರು ಋತುಮತಿಯಾದಾಗ, ಮಹಿಳೆಯರ ಮಾಸಿಕ ಋತುಚಕ್ರ ಮತ್ತು ಹೆರಿಗೆ ಸಂದರ್ಭದಲ್ಲಿ ನಿರ್ದಿಷ್ಟ ದಿನಗಳವರೆಗೆ ಗ್ರಾಮದಿಂದ ಹೊರಗೆ ಗುಡಿಸಲಿನಲ್ಲಿ ಇರುವ ಪದ್ಧತಿ ಬುಡಕಟ್ಟು ಸಂಪ್ರದಾಯ ಪಾಲಿಸುವ ಗೊಲ್ಲ ಸಮುದಾಯದಲ್ಲಿ ಬಹಳ ಹಿಂದಿನಿಂದಲ್ಲೂ ನಡೆದುಕೊಂಡು ಬಂದಿದೆ. ಬಾಣಂತಿ ತಾಯಿ ಮತ್ತು ಮಗುವಿನ ಆರೈಕೆಗೆ ಸಾಕಷ್ಟು ಪ್ರಾಮುಖ್ಯತೆ ನೀಡೋ ಈ ಆಧುನಿಕತೆಯಲ್ಲಿ ಹೀಗೆ ಅಪಾಯದ ಹಾದಿಗೆ ದೂಡಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ