AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಆಕಾಂಕ್ಷಿಗಳಿಗೆ ಗುಡ್​ನ್ಯೂಸ್​: ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ: ಗೃಹ ಸಚಿವ ಜಿ ಪರಮೇಶ್ವರ್​​

ರಾಜ್ಯದಲ್ಲಿ 15 ಸಾವಿರ ಪೊಲೀಸರ ಹುದ್ದೆ ಖಾಲಿಯಿದೆ. ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗಿದೆ ಎಂದು ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು.

ಪೊಲೀಸ್​ ಆಕಾಂಕ್ಷಿಗಳಿಗೆ ಗುಡ್​ನ್ಯೂಸ್​: ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ: ಗೃಹ ಸಚಿವ ಜಿ ಪರಮೇಶ್ವರ್​​
ಗೃಹ ಸಚಿವ ಡಾ.ಜಿ.ಪರಮೇಶ್ವರ್​
ಗಂಗಾಧರ​ ಬ. ಸಾಬೋಜಿ
|

Updated on:Jun 22, 2023 | 3:42 PM

Share

ತುಮಕೂರು: ರಾಜ್ಯದಲ್ಲಿ 15 ಸಾವಿರ ಪೊಲೀಸರ ಹುದ್ದೆ ಖಾಲಿಯಿದೆ. ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗಿದೆ ಎಂದು ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ (G Parameshwara)​ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪೊಲೀಸರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.

ಸ್ಮಾರ್ಟ್​​ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ಮಂಜೂರು

ಸ್ಮಾರ್ಟ್​​ಸಿಟಿ ಯೋಜನೆಯಡಿ ತುಮಕೂರಿಗೆ 1 ಸಾವಿರ ಕೋಟಿ ರೂ. ಮಂಜೂರು ಮಾಡಲಾಗಿದೆ. ಕೇಂದ್ರದಿಂದ ಶೇ.50, ರಾಜ್ಯ ಸರ್ಕಾರದಿಂದ ಶೇ.50ರಷ್ಟು ಅನುದಾನ ನೀಡಿದ್ದು, ಈಗಾಗಲೇ ಕೇಂದ್ರ ಸರ್ಕಾರ ಶೇ.45ರಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 443 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದರು.

ಇದನ್ನೂ ಓದಿ: Electricity Bill ವಿದ್ಯುತ್​ ಬಿಲ್​ ದುಪ್ಪಟ್ಟು ಬರುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಕೆಜೆ ಜಾರ್ಜ್

ಸ್ಮಾರ್ಟ್​​​ಸಿಟಿ ಯೋಜನೆಯಡಿ 170 ಕಾಮಗಾರಿ ನಡೆಯುತ್ತಿದೆ. ನವೆಂಬರ್​​ಯೊಳಗೆ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು. ತುಮಕೂರಿಗೆ ರಿಂಗ್ ರೋಡ್, ರಸ್ತೆ ಅಭಿವೃದ್ಧಿ ಕಾಮಗಾರಿ, ದೀಪಗಳ ಅಳವಡಿಕೆ, ಡ್ರೈನೇಜ್ ಅಳವಡಿಕೆ, ಬಸ್ ಸ್ಟಾಂಡ್ ಅಳವಡಿಕೆ, ಸಾರ್ವಜನಿಕ ಗ್ರಂಥಾಲಯವನ್ನ ಆಧುನಿಕವಾದ ಕಟ್ಟಲಾಗಿದೆ.

ಆಧುನಿಕ ಸೌಲಭ್ಯ ಅಳವಡಿಕೆ

ಮಕ್ಕಳಿಗೆ ಕ್ರೀಡೆಗೆ ಮಹತ್ವ ತಿಳಿಸಲು ಮಹಾತ್ಮ ಗಾಂಧಿ ಕ್ರೀಡಾಂಗಣವನ್ನ ಆಧುನಿಕರಣ ಗೊಳಿಸಲಾಗಿದೆ. ಸ್ಮಾರ್ಟ್ ಸಿಟಿ ಅಂದರೆ ಕೇವಲ ರಸ್ತೆ ಚೆನ್ನಾಗಿರುತ್ತೆ ಅಂತ ಅಲ್ಲ, ಆಧುನಿಕರಣವಾಗಿ ಎಲ್ಲಾ ಸೌಲಭ್ಯಗಳು ಸಿಗಬೇಕು. ಫ್ರೀ ವೈಫೈ ಸಿಗಬೇಕು. ಉತ್ತಮ ಪರಿಸರಕ್ಕೆ ಗಿಡಗಳು ಇರಬೇಕು.

ಇದನ್ನೂ ಓದಿ: ಕಾರ್ಯಕರ್ತರಿಗೆ ಮಾತನಾಡಲು ಅವಕಾಶ ನೀಡಿ; ಡಿವಿಎಸ್, ಬಿಜೆಪಿ ನಾಯಕರ ವಿರುದ್ಧವೇ ಸೋಮಣ್ಣ ಬೆಂಬಲಿಗರ ಆಕ್ರೋಶ

ಪ್ರಚೋದನಾಕಾರಿ ಪೋಸ್ಟ್​ಗಳ ತಡೆಗೆ ಕ್ರಮ

ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಅದರ ಬಗ್ಗೆ ಹರಿಸಿದ್ದೇವೆ. ಯಾರೋ ಒಂದು ಪೋಸ್ಟ್ ಮಾಡಿದರೆ, ಮಾಹಿತಿ ಏನಿದೆ, ಒಂದು ಸಮುದಾಯವನ್ನ ಕೆರಳಿಸುವ ರೀತಿ ಇರುತ್ತೆ. ಅದರಿಂದ ಸಾಕಷ್ಟು ಅನಾಹುತಗಳು ನಡೆಯುತ್ತೆ. ಅಂತಹ ಪೋಸ್ಟ್​ಗಳನ್ನ ನಿಯಂತ್ರಣ ಮಾಡುವ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:29 pm, Thu, 22 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!