AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ತವರು ಕ್ಷೇತ್ರದಲ್ಲಿ ಸರ್ಕಾರಿ ಅಧಿಕಾರಿಯ ದರ್ಬಾರ್; ತನ್ನ ಹೆಂಡತಿಗೆ ಮತ ಹಾಕುವಂತೆ ಗ್ರಾ.ಪಂ ಸದಸ್ಯನಿಗೆ ಥಳಿತ

ಸರ್ಕಾರಿ ಅಧಿಕಾರಿ ಚಿಕ್ಕಣ್ಣ ತನ್ನ ಪತ್ನಿಗೆ ಮತಹಾಕುವಂತೆ ಮತಯಾಚನೆ ಮಾಡಿದ್ದರು. ಹಣ ಕೊಡ್ತೀನಿ ಮತಹಾಕು ಎಂದು ಚಿಕ್ಕಣ ಹಾಗೂ ಮಂಜುನಾಥ್ ಇಬ್ಬರೂ ಜೊತೆಗೂಡಿ ಮಲ್ಲಯ್ಯಗೆ ಒತ್ತಾಯ ಮಾಡಿದ್ರು. ಹಣಕೊಡ್ತೀನಿ ಅಂದ್ರೂ ಒಪ್ಪದಿದ್ದಕ್ಕೆ ಗ್ರಾಪಂ ಸದಸ್ಯ ಮಲ್ಲಯ್ಯನ ಮೇಲೆ ಹಲ್ಲೆ ನಡೆಸಿದ್ದಾರೆ.

ಗೃಹ ಸಚಿವರ ತವರು ಕ್ಷೇತ್ರದಲ್ಲಿ ಸರ್ಕಾರಿ ಅಧಿಕಾರಿಯ ದರ್ಬಾರ್; ತನ್ನ ಹೆಂಡತಿಗೆ ಮತ ಹಾಕುವಂತೆ ಗ್ರಾ.ಪಂ ಸದಸ್ಯನಿಗೆ ಥಳಿತ
ಸರ್ಕಾರಿ ಅಧಿಕಾರಿಯಿಂದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jul 19, 2023 | 12:43 PM

Share

ತುಮಕೂರು, ಜುಲೈ 19: ಗೃಹ ಸಚಿವ ಡಾ.ಜಿ ಪರಮೇಶ್ವರ್(Dr G Parameshwar) ತವರು ಕ್ಷೇತ್ರದಲ್ಲಿ ಸರ್ಕಾರಿ ಅಧಿಕಾರಿಯ(Government Officer) ದರ್ಬಾರ್ ಕಂಡುಬಂದಿದೆ. ನನ್ನ ಮತ ನನ್ನ ಹಕ್ಕು ಎಂದು ಹೇಳಿದ ವ್ಯಕ್ತಿಗೆ ಸರ್ಕಾರಿ ಅಧಿಕಾರಿ ಮನ ಬಂದಂತೆ ಥಳಿಸಿ ದರ್ಪ ಮೆರೆದಿದ್ದಾರೆ. ಇತ್ತೀಚಿಗೆ ನಡೆದ ಗ್ರಾ‌.ಪಂ.ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ತನ್ನ ಪತ್ನಿಗೆ ಮತ ಹಾಕುವಂತೆ ಮತ ಕೇಳಲು ಬಂದಿದ್ದ ಸರ್ಕಾರಿ ಅಧಿಕಾರಿ ವ್ಯಕ್ತಿಯನ್ನು ಮನ ಬಂದಂತೆ ಥಳಿಸಿ ದರ್ಪ ಮೆರೆದಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ವೇಳೆ ಗ್ರಾ.ಪಂ ಸದಸ್ಯ ಡಿ.ಎಲ್.ಮಲ್ಲಯ್ಯ ಮೇಲೆ ಕೊರಟಗೆರೆ ಪಿಡಬ್ಯುಡಿ ಪ್ರಥಮ ದರ್ಜೆ ಸಹಾಯಕನಾಗಿರೋ ಚಿಕ್ಕಣ್ಣ ಹಲ್ಲೆ ನಡೆಸಿದ್ದಾರೆ. ಚಿಕ್ಕಣ್ಣನ ಪತ್ನಿ ದಿವ್ಯಜ್ಯೋತಿ ಹುಲೀಕುಂಟೆ ಗ್ರಾಪಂ ಅಧ್ಯಕ್ಷ ಚುನಾವಣೆ ಆಕಾಂಕ್ಷಿಯಾಗಿದ್ದರು. ಹಾಗೂ ಉಪಾಧ್ಯಕ್ಷೆ ಸ್ಥನಕ್ಕೆ ಮಂಜುನಾಥ್ ಎಂಬುವವರ ಪತ್ನಿ ಆಕಾಂಕ್ಷಿಯಾಗಿದ್ದರು. ಹೀಗಾಗಿ ಸರ್ಕಾರಿ ಅಧಿಕಾರಿ ಚಿಕ್ಕಣ್ಣ ತನ್ನ ಪತ್ನಿಗೆ ಮತಹಾಕುವಂತೆ ಮತಯಾಚನೆ ಮಾಡಿದ್ದರು. ಹಣ ಕೊಡ್ತೀನಿ ಮತಹಾಕು ಎಂದು ಚಿಕ್ಕಣ ಹಾಗೂ ಮಂಜುನಾಥ್ ಇಬ್ಬರೂ ಜೊತೆಗೂಡಿ ಮಲ್ಲಯ್ಯಗೆ ಒತ್ತಾಯ ಮಾಡಿದ್ರು. ಹಣಕೊಡ್ತೀನಿ ಅಂದ್ರೂ ಒಪ್ಪದಿದ್ದಕ್ಕೆ ಗ್ರಾಪಂ ಸದಸ್ಯ ಮಲ್ಲಯ್ಯನ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಬೈಲ್ ಅಂಗಡಿಯಲ್ಲಿ ಕುಳಿತಿದ್ದ ಮಲ್ಲಯ್ಯನ ಮೇಲೆ ಚಿಕ್ಕಣ್ಣ ಮತ್ತು ಮಂಜುನಾಥ್ ಹಲ್ಲೆ ಮಾಡಿ ದರ್ಪ ಮೆರೆದಿದ್ದಾರೆ.

ಇದನ್ನೂ ಓದಿ: ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು

ಕಳೆದ ಜುಲೈ 15ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗ್ರಾ.ಪಂ ಸದಸ್ಯ ಮಲ್ಲಯ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕರ್ತವ್ಯದ ವೇಳೆಯಲ್ಲೇ ಪಾನಮತ್ತನಾಗಿ ಚಿಕ್ಕಣ್ಣ ಹಲ್ಲೆ ಮಾಡಿರೋದಾಗಿ ಮಲ್ಲಯ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಹುಲಿಕುಂಟೆ ಗ್ರಾ‌.ಪಂ ಅಧ್ಯಕ್ಷೆಯಾಗಿ ಜಯಮ್ಮ ಎಂಬುವವರು ಆಯ್ಕೆ ಆಗಿದ್ದಾರೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್