AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ತವರು ಕ್ಷೇತ್ರದಲ್ಲಿ ಸರ್ಕಾರಿ ಅಧಿಕಾರಿಯ ದರ್ಬಾರ್; ತನ್ನ ಹೆಂಡತಿಗೆ ಮತ ಹಾಕುವಂತೆ ಗ್ರಾ.ಪಂ ಸದಸ್ಯನಿಗೆ ಥಳಿತ

ಸರ್ಕಾರಿ ಅಧಿಕಾರಿ ಚಿಕ್ಕಣ್ಣ ತನ್ನ ಪತ್ನಿಗೆ ಮತಹಾಕುವಂತೆ ಮತಯಾಚನೆ ಮಾಡಿದ್ದರು. ಹಣ ಕೊಡ್ತೀನಿ ಮತಹಾಕು ಎಂದು ಚಿಕ್ಕಣ ಹಾಗೂ ಮಂಜುನಾಥ್ ಇಬ್ಬರೂ ಜೊತೆಗೂಡಿ ಮಲ್ಲಯ್ಯಗೆ ಒತ್ತಾಯ ಮಾಡಿದ್ರು. ಹಣಕೊಡ್ತೀನಿ ಅಂದ್ರೂ ಒಪ್ಪದಿದ್ದಕ್ಕೆ ಗ್ರಾಪಂ ಸದಸ್ಯ ಮಲ್ಲಯ್ಯನ ಮೇಲೆ ಹಲ್ಲೆ ನಡೆಸಿದ್ದಾರೆ.

ಗೃಹ ಸಚಿವರ ತವರು ಕ್ಷೇತ್ರದಲ್ಲಿ ಸರ್ಕಾರಿ ಅಧಿಕಾರಿಯ ದರ್ಬಾರ್; ತನ್ನ ಹೆಂಡತಿಗೆ ಮತ ಹಾಕುವಂತೆ ಗ್ರಾ.ಪಂ ಸದಸ್ಯನಿಗೆ ಥಳಿತ
ಸರ್ಕಾರಿ ಅಧಿಕಾರಿಯಿಂದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on: Jul 19, 2023 | 12:43 PM

Share

ತುಮಕೂರು, ಜುಲೈ 19: ಗೃಹ ಸಚಿವ ಡಾ.ಜಿ ಪರಮೇಶ್ವರ್(Dr G Parameshwar) ತವರು ಕ್ಷೇತ್ರದಲ್ಲಿ ಸರ್ಕಾರಿ ಅಧಿಕಾರಿಯ(Government Officer) ದರ್ಬಾರ್ ಕಂಡುಬಂದಿದೆ. ನನ್ನ ಮತ ನನ್ನ ಹಕ್ಕು ಎಂದು ಹೇಳಿದ ವ್ಯಕ್ತಿಗೆ ಸರ್ಕಾರಿ ಅಧಿಕಾರಿ ಮನ ಬಂದಂತೆ ಥಳಿಸಿ ದರ್ಪ ಮೆರೆದಿದ್ದಾರೆ. ಇತ್ತೀಚಿಗೆ ನಡೆದ ಗ್ರಾ‌.ಪಂ.ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ತನ್ನ ಪತ್ನಿಗೆ ಮತ ಹಾಕುವಂತೆ ಮತ ಕೇಳಲು ಬಂದಿದ್ದ ಸರ್ಕಾರಿ ಅಧಿಕಾರಿ ವ್ಯಕ್ತಿಯನ್ನು ಮನ ಬಂದಂತೆ ಥಳಿಸಿ ದರ್ಪ ಮೆರೆದಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ವೇಳೆ ಗ್ರಾ.ಪಂ ಸದಸ್ಯ ಡಿ.ಎಲ್.ಮಲ್ಲಯ್ಯ ಮೇಲೆ ಕೊರಟಗೆರೆ ಪಿಡಬ್ಯುಡಿ ಪ್ರಥಮ ದರ್ಜೆ ಸಹಾಯಕನಾಗಿರೋ ಚಿಕ್ಕಣ್ಣ ಹಲ್ಲೆ ನಡೆಸಿದ್ದಾರೆ. ಚಿಕ್ಕಣ್ಣನ ಪತ್ನಿ ದಿವ್ಯಜ್ಯೋತಿ ಹುಲೀಕುಂಟೆ ಗ್ರಾಪಂ ಅಧ್ಯಕ್ಷ ಚುನಾವಣೆ ಆಕಾಂಕ್ಷಿಯಾಗಿದ್ದರು. ಹಾಗೂ ಉಪಾಧ್ಯಕ್ಷೆ ಸ್ಥನಕ್ಕೆ ಮಂಜುನಾಥ್ ಎಂಬುವವರ ಪತ್ನಿ ಆಕಾಂಕ್ಷಿಯಾಗಿದ್ದರು. ಹೀಗಾಗಿ ಸರ್ಕಾರಿ ಅಧಿಕಾರಿ ಚಿಕ್ಕಣ್ಣ ತನ್ನ ಪತ್ನಿಗೆ ಮತಹಾಕುವಂತೆ ಮತಯಾಚನೆ ಮಾಡಿದ್ದರು. ಹಣ ಕೊಡ್ತೀನಿ ಮತಹಾಕು ಎಂದು ಚಿಕ್ಕಣ ಹಾಗೂ ಮಂಜುನಾಥ್ ಇಬ್ಬರೂ ಜೊತೆಗೂಡಿ ಮಲ್ಲಯ್ಯಗೆ ಒತ್ತಾಯ ಮಾಡಿದ್ರು. ಹಣಕೊಡ್ತೀನಿ ಅಂದ್ರೂ ಒಪ್ಪದಿದ್ದಕ್ಕೆ ಗ್ರಾಪಂ ಸದಸ್ಯ ಮಲ್ಲಯ್ಯನ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಬೈಲ್ ಅಂಗಡಿಯಲ್ಲಿ ಕುಳಿತಿದ್ದ ಮಲ್ಲಯ್ಯನ ಮೇಲೆ ಚಿಕ್ಕಣ್ಣ ಮತ್ತು ಮಂಜುನಾಥ್ ಹಲ್ಲೆ ಮಾಡಿ ದರ್ಪ ಮೆರೆದಿದ್ದಾರೆ.

ಇದನ್ನೂ ಓದಿ: ಹೆಂಡತಿಯ ಅನೈತಿಕ ಸಂಬಂಧದಿಂದ ಮನನೊಂದ ಗಂಡ; ಸಾವಿನ ಆಡಿಯೋ ರೆಕಾರ್ಡ್​ ಮಾಡಿ ಆತ್ಮಹತ್ಯೆಗೆ ಶರಣು

ಕಳೆದ ಜುಲೈ 15ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗ್ರಾ.ಪಂ ಸದಸ್ಯ ಮಲ್ಲಯ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕರ್ತವ್ಯದ ವೇಳೆಯಲ್ಲೇ ಪಾನಮತ್ತನಾಗಿ ಚಿಕ್ಕಣ್ಣ ಹಲ್ಲೆ ಮಾಡಿರೋದಾಗಿ ಮಲ್ಲಯ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಹುಲಿಕುಂಟೆ ಗ್ರಾ‌.ಪಂ ಅಧ್ಯಕ್ಷೆಯಾಗಿ ಜಯಮ್ಮ ಎಂಬುವವರು ಆಯ್ಕೆ ಆಗಿದ್ದಾರೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು