AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ತಂಗುದಾಣ‌ ನಿರ್ಮಾಣ‌ ವಿಚಾರದಲ್ಲಿ ಗಲಾಟೆ; ಗ್ರಾ.ಪಂ‌ಚಾಯತಿ ಉಪಾಧ್ಯಕ್ಷೆಯ ಗಂಡನಿಗೆ‌ ಶಿಕ್ಷಕನಿಂದ ಕಪಾಳ‌ಮೋಕ್ಷ

ತುಮಕೂರು ಜಿಲ್ಲೆಯ ಕೊರಟಗೆರೆ‌ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ತಂಗುದಾಣ‌ ನಿರ್ಮಾಣ‌ ವಿಚಾರದಲ್ಲಿ ಗಲಾಟೆಯಾಗಿ, ಗ್ರಾಮ ಪಂ‌ಚಾಯತಿ ಉಪಾಧ್ಯಕ್ಷೆಯ ಗಂಡನಿಗೆ‌ ಶಿಕ್ಷಕರೊಬ್ಬರು ಕಪಾಳ‌ಮೋಕ್ಷ ಮಾಡಿರುವ ಘಟನೆ ನಡೆದಿದೆ. ಬಳಿಕ ಜೆಟ್ಟಿ ಅಗ್ರಹಾರ ಗ್ರಾಮದ ನಿವಾಸಿಗಳು ಮಧ್ಯಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ.

ತುಮಕೂರು: ತಂಗುದಾಣ‌ ನಿರ್ಮಾಣ‌ ವಿಚಾರದಲ್ಲಿ ಗಲಾಟೆ; ಗ್ರಾ.ಪಂ‌ಚಾಯತಿ ಉಪಾಧ್ಯಕ್ಷೆಯ ಗಂಡನಿಗೆ‌ ಶಿಕ್ಷಕನಿಂದ ಕಪಾಳ‌ಮೋಕ್ಷ
ಗಲಾಟೆ ದೃಶ್ಯ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Sep 05, 2023 | 6:40 PM

Share

ತುಮಕೂರು, ಸೆ.05: ಇಂದು ದೇಶಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದ್ದಾರೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ತಳಹದಿ ಹಾಕುವ ಶಿಕ್ಷಕರಿಗೆ ಶುಭಾಶಯ ಕೋರಿದ್ದಾರೆ. ಇನ್ನು ಇದೇ ದಿನ ತುಮಕೂರು (Tumakur) ಜಿಲ್ಲೆಯ ಕೊರಟಗೆರೆ‌ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ತಂಗುದಾಣ‌ ನಿರ್ಮಾಣ‌ ವಿಚಾರದಲ್ಲಿ ಗಲಾಟೆಯಾಗಿ, ಗ್ರಾಮ ಪಂ‌ಚಾಯತಿ ಉಪಾಧ್ಯಕ್ಷೆಯ ಗಂಡನಿಗೆ‌ ಶಿಕ್ಷಕರೊಬ್ಬರು ಕಪಾಳ‌ಮೋಕ್ಷ ಮಾಡಿರುವ ಘಟನೆ ನಡೆದಿದೆ. ಇನ್ನು ರಾಜಶೇಖರ್‌ ಎಂಬ ಶಿಕ್ಷಕರೊಬ್ಬರು ಕಪಾಳ‌ಮೋಕ್ಷ ಮಾಡಿದವರು.

ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಮಂಜುನಾಥ್‌ಗೆ ಕಪಾಳ‌ಮೋಕ್ಷ

ತಂಗುದಾಣ ನಿರ್ಮಾಣಕ್ಕೆ ಜಾಗ ಗುರುತಿಸಲು ಗ್ರಾಮ ಪಂ‌ಚಾಯತಿ ಉಪಾಧ್ಯಕ್ಷೆ ಪತಿ ಮಂಜುನಾಥ್‌ ಮುಂದಾಗಿದ್ದರು. ನಂತರ ಇಬ್ಬರ ನಡುವೆ ತಂಗುದಾಣ ನಿರ್ಮಾಣದಿಂದ‌ ಮನೆಗೆ ಅಡ್ಡಿಯಾಗುವ ಕಾರಣಕ್ಕೆ ಗಲಾಟೆ ಶುರುವಾಗಿದೆ. ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಮಂಜುನಾಥ್‌ಗೆ ಶಿಕ್ಷಕರೊಬ್ಬರು ಕಪಾಳ‌ಮೋಕ್ಷ ಮಾಡಿದ್ದಾರೆ. ಬಳಿಕ ಜೆಟ್ಟಿ ಅಗ್ರಹಾರ ಗ್ರಾಮದ ನಿವಾಸಿಗಳು ಮಧ್ಯಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಮದ್ಯ ನೀಡಲು ನಿರಾಕರಿಸಿದ್ದಕ್ಕೆ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ

ಒಂದೇ ದಿನ ಎರಡು ಮನೆಗಳಿಗೆ ಕನ್ನ ಹಾಕಿದ ಖದೀಮರು

ಆನೇಕಲ್: ಒಂದೇ ದಿನ ಖದೀಮರು ಎರಡು ಮನೆಗಳಿಗೆ ಕನ್ನ ಹಾಕಿದ ಘಟನೆ ಬೆಂಗಳೂರು ಹೊರಲವಯ ಆನೇಕಲ್ ಪಟ್ಟಣದ ಲಕ್ಷ್ಮಿ ಚಿತ್ರಮಂದಿರ ಸಮೀಪ ಹಾಗೂ ನಗರ್ತರ ಪೇಟೆಯಲ್ಲಿ ನಡೆದಿದೆ. ಮನೆಗೆ ಬೀಗ ಹಾಕಿಕೊಂಡು ಕುಟುಂಬದವರು ಚಿಕ್ಕ ತಿರುಪತಿಗೆ ಹೋಗಿದ್ದರು. ಇದನ್ನು ಗಮನಿಸಿ, ದ್ವಿಚಕ್ರ ವಾಹನದಲ್ಲಿ ಬಂದಿದ್ದ ಖದೀಮರ ಗ್ಯಾಂಗ್, ಲಕ್ಷ್ಮಿ ಚಿತ್ರಮಂದಿರ ಮುಖ್ಯರಸ್ತೆಯಲ್ಲಿನ ಮನೆ ಬೀಗ ಮುರಿದು, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.

ನಗರ್ತರ ಪೇಟೆಯ ಮನೆಯೊಂದರಲ್ಲೂ ಕಳ್ಳತನ

ನಗರ್ತರ ಪೇಟೆಯ ಪ್ರಶಾಂತ್ ಎಂಬುವರ ಮನೆಯಲ್ಲೂ ಕಳ್ಳತನ ನಡೆದಿದ್ದು, ಮನೆಯಲ್ಲಿದ್ದ ಬೆಳ್ಳಿ ಹಾಗೂ ಬೆಲೆಬಾಳುವ ವಸ್ತುಗಳು ಕಳ್ಳರು ಕದ್ದಿದ್ದಾರೆ. ಈ ಸರಣಿ ಕಳ್ಳತನಕ್ಕೆ ನೇಕಲ್ ಜನತೆ ಬೆಚ್ಚಿ ಬಿದ್ದಿದೆ. ದಿನನಿತ್ಯ ನಡೆಯುತ್ತಿರುವ ದ್ವಿಚಕ್ರ ವಾಹನ ಹಾಗೂ ಮನೆ ಕಳ್ಳತನಕ್ಕೆ ಬ್ರೆಕ್​ ಹಾಕದ ಪೋಲಿಸ್ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಆನೇಕಲ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !