AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕೃತ ಗಣಿಗಾರಿಕೆಯಿಂದಲೇ ತೊಂದರೆ: ಕ್ರಷರ್ ನಿಲ್ಲಿಸುವಂತೆ ಒತ್ತಾಯ, ಗ್ರಾಮದಲ್ಲಿ ಪೊಲೀಸರು ಮೊಕ್ಕಾಂ -ಪರಿಸ್ಥಿತಿ ಉದ್ವಿಗ್ನ

ತುಮಕೂರು: ಜಿಲ್ಲಾಡಳಿತದಿಂದ ಅನುಮತಿ ಪಡೆದಿರುವ ಗಣಿಗಾರಿಕೆಯಿಂದ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೋಳಘಟ್ಟ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿರುವುದು ವರದಿಯಾಗಿದೆ. ಗ್ರಾಮದ 400 ಮೀಟರ್ ದೂರದಲ್ಲಿರುವ ವಿಶ್ವ ಎಂಟರ್ ಪ್ರೈಸಸ್ ಜಲ್ಲಿ ಕ್ರಷರ್ ಇತ್ತಿಚೆಗೆ ಸ್ಥಾಪನೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 206 ರ ಕಾಮಗಾರಿ ಉದ್ದೇಶಕ್ಕಾಗಿ ಜಿಲ್ಲಾಡಳಿತವೇ ಎರಡು ವರ್ಷಗಳ ಅವಧಿಗೆ ಅನುಮತಿ ನೀಡಿದೆ‌‌. ಆದರೆ ಸಾರ್ವಜನಿಕರಿಗೆ ತೊಂದರೆ ಯಾದರೆ ಕೂಡಲೇ ನಿಲ್ಲಿಸಬಹುದು ಅ‌ನ್ನೋ ನಿಯಮ ಕೂಡ ಇದೆ. ಸದ್ಯ ಇದರಿಂದ ಪಕ್ಕದಲ್ಲಿ ಇರುವ ಗ್ರಾಮಕ್ಕೆ ತೊಂದರೆಯಾಗಿದ್ದು ಜಲ್ಲಿ […]

ಅಧಿಕೃತ ಗಣಿಗಾರಿಕೆಯಿಂದಲೇ ತೊಂದರೆ: ಕ್ರಷರ್ ನಿಲ್ಲಿಸುವಂತೆ ಒತ್ತಾಯ, ಗ್ರಾಮದಲ್ಲಿ ಪೊಲೀಸರು ಮೊಕ್ಕಾಂ -ಪರಿಸ್ಥಿತಿ ಉದ್ವಿಗ್ನ
ಅಧಿಕೃತ ಗಣಿಗಾರಿಕೆಯಿಂದಲೇ ತೊಂದರೆ: ಜಾನಾವಾರು, ಮನುಷ್ಯರಿಗೂ ಆರೋಗ್ಯದಲ್ಲಿ ಏರುಪೇರು
TV9 Web
| Updated By: ಸಾಧು ಶ್ರೀನಾಥ್​|

Updated on:Jan 05, 2022 | 12:15 PM

Share

ತುಮಕೂರು: ಜಿಲ್ಲಾಡಳಿತದಿಂದ ಅನುಮತಿ ಪಡೆದಿರುವ ಗಣಿಗಾರಿಕೆಯಿಂದ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೋಳಘಟ್ಟ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿರುವುದು ವರದಿಯಾಗಿದೆ. ಗ್ರಾಮದ 400 ಮೀಟರ್ ದೂರದಲ್ಲಿರುವ ವಿಶ್ವ ಎಂಟರ್ ಪ್ರೈಸಸ್ ಜಲ್ಲಿ ಕ್ರಷರ್ ಇತ್ತಿಚೆಗೆ ಸ್ಥಾಪನೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 206 ರ ಕಾಮಗಾರಿ ಉದ್ದೇಶಕ್ಕಾಗಿ ಜಿಲ್ಲಾಡಳಿತವೇ ಎರಡು ವರ್ಷಗಳ ಅವಧಿಗೆ ಅನುಮತಿ ನೀಡಿದೆ‌‌. ಆದರೆ ಸಾರ್ವಜನಿಕರಿಗೆ ತೊಂದರೆ ಯಾದರೆ ಕೂಡಲೇ ನಿಲ್ಲಿಸಬಹುದು ಅ‌ನ್ನೋ ನಿಯಮ ಕೂಡ ಇದೆ.

ಸದ್ಯ ಇದರಿಂದ ಪಕ್ಕದಲ್ಲಿ ಇರುವ ಗ್ರಾಮಕ್ಕೆ ತೊಂದರೆಯಾಗಿದ್ದು ಜಲ್ಲಿ ಕ್ರಷರ್ ನಿಲ್ಲಿಸುವಂತೆ ಗ್ರಾಮಸ್ಥರು ಪ್ರತಿಭಟನೆ ಸಹ ಮಾಡಿದ್ದಾರೆ. ಅಲ್ಲದೇ ಸಣ್ಣ ಪ್ರಮಾಣದ ಬ್ಲಾಸ್ಟ್ ಗೆ ಅನುಮತಿ ಇದ್ದು, ಸಣ್ಣ ಪ್ರಮಾಣದಲ್ಲಿ ಬ್ಲಾಸ್ಟ್ ಮಾಡದೇ ದೊಡ್ಡದಾಗಿ ಬ್ಲಾಸ್ಟ್ ಮಾಡಿ ತೀವ್ರ ಸಮಸ್ಯೆಯಾಗಿದೆಯಂತೆ‌. ಕೋಳಘಟ್ಟ ಗ್ರಾಮದಲ್ಲಿ ಹಲವು ಮನೆಗಳು ಹಾನಿಗೊಳಗಾಗಿದ್ದು, ಸಾಕಷ್ಟು ಮಂದಿ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎನ್ನಲಾಗಿದೆ.

ಈಗಾಗಲೇ ಜಾನಾವಾರುಗಳು ಸೇರಿದಂತೆ ಮನುಷ್ಯರಿಗೂ ಕೂಡ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು ಕ್ರಷರ್ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಇನ್ನು ಅಧಿಕಾರಿಗಳು ಬಂದಾಗ ಒಂದು ರೀತಿ, ಅವರು ಇಲ್ಲದಿರುವಾಗ ಮತ್ತೊಂದು ರೀತಿಯಲ್ಲಿ ಕ್ರಷರ್ ನವರು ವರ್ತಿಸುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ‌ ಸದ್ಯ ಕ್ರಷರ್ ನಿಲ್ಲಿಸಿ ಇಲ್ಲಾಂದ್ರೆ ಗ್ರಾಮಸ್ಥರಿಗೆ ಪರ್ಯಾಯ ವಸತಿ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಕೇಳಲು ಹೋದರೆ ಪೊಲೀಸರ ಮೂಲಕ ಧಮ್ಕಿ ಹಾಕಿಸುತ್ತಾರೆ ಎನ್ನಲಾಗಿದೆ. ಸದ್ಯ ಕ್ರಷರ್ ನಿಂದ ಗ್ರಾಮಸ್ಥರು ತೀವ್ರ ಸಮಸ್ಯೆ ಎದುರಿಸುವಂತಾಗಿದ್ದು ಅದನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಪೊಲೀಸರು ಮೊಕ್ಕಾಂ: ಪರಿಸ್ಥಿತಿ ಉದ್ವಿಗ್ನ

ಕೋಳಘಟ್ಟ ಗ್ರಾಮದಲ್ಲಿ ಗಣಿಗಾರಿಕೆಯಿಂದ ಗ್ರಾಮಸ್ಥರಿಗೆ ಸಮಸ್ಯೆ ಉದ್ಭವವಾಗಿರುವ ಪ್ರಕರಣ ಸಂಬಂಧ ಗ್ರಾಮದಲ್ಲಿ 15 ಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಕ್ರಷರ್ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಗ್ರಾಮಸ್ಥರು ಗ್ರಾಮದಲ್ಲಿ ಪ್ರತಿಭಟನೆ ನಡೆಸಬಾರದೆಂದು ಪೊಲೀಸರು ಇಲ್ಲಿ ಮೊಕ್ಕಾಂ ಹೂಡಿದ್ದಾರೆ. ಕೋಳಘಟ್ಟ ಗ್ರಾಮದಲ್ಲಿ ಇದೀಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

Published On - 10:54 am, Wed, 5 January 22

ಇಸ್ಕಾನ್​​ನ ಸಸ್ಯಾಹಾರಿ ಹೋಟೆಲ್ ಒಳಗೆ ಚಿಕನ್ ತಿಂದ ಯುವಕ
ಇಸ್ಕಾನ್​​ನ ಸಸ್ಯಾಹಾರಿ ಹೋಟೆಲ್ ಒಳಗೆ ಚಿಕನ್ ತಿಂದ ಯುವಕ
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ