AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್​ನಲ್ಲಿ ರಂಗೇರಿದ ಚುನಾವಣೆ ಕಾವು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ತುಂಬಿದ್ದ ವಾಹನವನ್ನು ವಶಕ್ಕೆ ಪಡೆದ ಜಿಎಸ್​ಟಿ ಅಧಿಕಾರಿಗಳು

ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಾಹನದ ಮೇಲೆ ಜಿಎಸ್​ಟಿ ಅಧಿಕಾರಿಗಳು ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಅಮೃತೂರು ಗ್ರಾಮದಲ್ಲಿ ನಡೆದಿದೆ.

ಕುಣಿಗಲ್​ನಲ್ಲಿ ರಂಗೇರಿದ ಚುನಾವಣೆ ಕಾವು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ತುಂಬಿದ್ದ ವಾಹನವನ್ನು ವಶಕ್ಕೆ ಪಡೆದ ಜಿಎಸ್​ಟಿ ಅಧಿಕಾರಿಗಳು
ಕುಕ್ಕರ್ ವಾಹನದ ಮೇಲೆ ದಾಳಿ
TV9 Web
| Edited By: |

Updated on: Jan 18, 2023 | 8:34 PM

Share

ತುಮಕೂರು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ (Cooker) ವಾಹನದ ಮೇಲೆ ಜಿಎಸ್​ಟಿ ಅಧಿಕಾರಿಗಳು ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಅಮೃತೂರು ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಡಾ.ರಂಗನಾಥ್ ಭಾವಚಿತ್ರವಿರುವ ಕುಕ್ಕರ್ ಬಾಕ್ಸ್ ಜಪ್ತಿ ಮಾಡಲಾಗಿದೆ. ಕುಣಿಗಲ್ ಕ್ಷೇತ್ರದ ಮತದಾರರಿಗೆ ಹಂಚಲು ತಂದಿದ್ದ ಆರೋಪ ಮಾಡಲಾಗಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Assembly Polls: ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಗಿಫ್ಟ್​ಗಳ ವಿತರಣೆ!

ಬೆಳಗಾವಿ: ಸ್ಟಾರ್ಟ್ ಅಪ್​ಗಳನ್ನು ಆರಂಭಿಸುವ ಯೋಚನೆಯಿರುವ ಯುವಕರು ರಾಜ್ಯ ವಿಧಾನ ಸಭಾ ಚುನಾವಣೆ ಮುಗಿಯುವವರೆಗೆ ಆ ಯೋಜನೆಯನ್ನು ಕೈಬಿಟ್ಟು ಬೆಳಗಾವಿ ಜಿಲ್ಲೆಯಲ್ಲಿ ಸೀರೆ ಮತ್ತು ಮಿಕ್ಸರ್ ಗ್ರೈಂಡರ್​ಗಳ ಸಗಟು ವ್ಯಾಪಾರ ಮಾಡುವುದರಲ್ಲಿ ಹೆಚ್ಚು ಲಾಭವಿದೆ ಅಂತ ನಮಗನಿಸುತ್ತಿದೆ. ಚುನಾವಣೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ. ಆದರೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಸಂಭವನೀಯ ಅಭ್ಯರ್ಥಿಗಳು ಮತದಾರರನ್ನು ಓಲೈಸಿಕೊಳ್ಳಲು ಗಿಫ್ಟ್​​ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ED Raid: ಬೆಂಗಳೂರು, ಮುಂಬೈ, ಚೆನ್ನೈನಲ್ಲಿರವ ವಿಹಾನ್ ಡೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಕಚೇರಿ ಮೇಲೆ ಇಡಿ ದಾಳಿ: 90 ಕೋಟಿ ರೂ. ನಗದು ಜಪ್ತಿ

ರಮೇಶ್​ ಜಾರಕಿಹೊಳಿ ಆಪ್ತನಿಂದ ಸೀರೆ ಹಂಚಿಕೆ

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಒಂದಲ್ಲ ಒಂದು ರಣತಂತ್ರ ರೂಪಿಸುತ್ತಿರುತ್ತವೆ. ಅದರಲ್ಲಿ ಗಿಫ್ಟ್ ಪಾಲಿಟಿಕ್ಸ್​ (Gift Politics) ಕೂಡ ಒಂದು. ಈ ಪದ್ಧತಿ ಅನಾದಿ ಕಾಲದಿಂದ ನಡೆದುಕೊಂಡು ಬಂದಿದ್ದು, ಮತದಾರರನ್ನು ಸೆಳೆಯಲು ಆಮಿಷ ಮಾರ್ಗ ಹಿಡಿದಿದ್ದಾರೆ. ಬೆಳಗಾವಿ (Belagavi) ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್​ ಮುಂದುವರಿದಿದೆ.

ಈ ಹಿಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತೆಂಗಿನ ಕಾಯಿ ಮೇಲೆ ಪ್ರಮಾಣ ಮಾಡಿಸಿಕೊಂಡು ಗಿಫ್ಟ್​ ನೀಡಿದ್ದರು. ಈಗ ಗೋಕಾಕ್​ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಆಪ್ತ ಮತದಾರರ ಓಲೈಕೆಗೆ ಗಿಫ್ಟ್ ಹಂಚಿಕೆ ಮಾಡಿದ್ದಾನೆ. ಹಿಂಡಲಗಾ ಗ್ರಾ.ಪಂ ಅಧ್ಯಕ್ಷ, ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್​ ಮನೋಳ್ಕರ್​ನಿಂದ ಗಿಫ್ಟ್ ವಿತರಣೆ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಮನೋಳ್ಕರ್ ಅರಿಶಿನ ಕುಂಕುಮ ಕಾರ್ಯಕ್ರಮ ನಡೆಸಿ ಮಹಿಳೆಯರಿಗೆ ಸೀರೆ, ಒಂದು ಹಾಟ್ ಬಾಕ್ಸ್ ವಿತರಿಸಿದ್ದಾರೆ. ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?