AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಾಗದಲ್ಲಿ ಹನುಮಾನ್‌ ಧ್ವಜ ಹಾರಿಸಲು ಅವಕಾಶವಿಲ್ಲ: ಗೃಹ ಸಚಿವ ಡಾ ಜಿ ಪರಮೇಶ್ವರ್

ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ಕೆಳಗಿಳಿಸಿ ರಾಷ್ಟ್ರಧ್ವಜ ಹಾರಿಸುತ್ತಿದ್ದಂತೆ ಹೈಡ್ರಾವೇ ನಡೆದಿದೆ. ಈ ವಿಚಾರವಾಗಿ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಮಾತನಾಡಿದ್ದು, ಶಾಂತಿ ಕಾಪಾಡುವಂತೆ ವಿನಂತಿ ಮಾಡಿದ್ದಾರೆ. ಬೇರೆ ಕಡೆ ಹನುಮಾನ್‌ ಧ್ವಜ ಹಾರಿಸಲು ಯಾರದ್ದೂ ತಕರಾರು ಇಲ್ಲ. ಆದರೆ ಸರ್ಕಾರಿ ಜಾಗದಲ್ಲಿ ಹನುಮಾನ್‌ ಧ್ವಜ ಹಾರಿಸಲು ಅವಕಾಶವಿಲ್ಲ ಎಂದಿದ್ದಾರೆ.

ಸರ್ಕಾರಿ ಜಾಗದಲ್ಲಿ ಹನುಮಾನ್‌ ಧ್ವಜ ಹಾರಿಸಲು ಅವಕಾಶವಿಲ್ಲ: ಗೃಹ ಸಚಿವ ಡಾ ಜಿ ಪರಮೇಶ್ವರ್
ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on: Jan 28, 2024 | 8:43 PM

Share

ತುಮಕೂರು, ಜನವರಿ 28: ಬೇರೆ ಕಡೆ ಹನುಮಾನ್‌ ಧ್ವಜ ಹಾರಿಸಲು ಯಾರದ್ದೂ ತಕರಾರು ಇಲ್ಲ. ಆದರೆ ಸರ್ಕಾರಿ ಜಾಗದಲ್ಲಿ ಹನುಮಾನ್‌ ಧ್ವಜ ಹಾರಿಸಲು ಅವಕಾಶವಿಲ್ಲ. ಹೀಗಾಗಿ ಶಾಂತಿ ಕಾಪಾಡುವಂತೆ ವಿನಂತಿ ಮಾಡುತ್ತೇನೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ (G. Parameshwara) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಧ್ವಜ ಹಾರಿಸುತ್ತೇವೆಂದು ಗ್ರಾಮ ಪಂಚಾಯಿತಿ ನಿಂದ ಅನುಮತಿ ಪಡೆದಿದ್ದರು. ಆದರೆ ರಾಷ್ಟ್ರಧ್ವಜ ಬದಲು ಹನುಮ ಧ್ವಜ ಹಾರಿಸಿದ್ದಾರೆ. ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಿದ್ದರಿಂದ ತೆರವುಗೊಳಿಸಿದ್ದಾರೆ ಎಂದು  ಇದಾದ ಬಳಿಕ ಕೆಲ ಪ್ರತಿಭಟನೆಗಳು, ಬೇರೆಲ್ಲಾ ಆಗಿವೆ ಎಂದು ಹೇಳಿದ್ದಾರೆ.

ಲಘು ಲಾಠಿಪ್ರಹಾರ ನಡೆಸಿ ರಾಷ್ಟ್ರೀಯ ಧ್ವಜವನ್ನ ಹಾರಿಸಲಾಗಿದೆ. ಸಮಾಜದಲ್ಲಿ ಇದು ಒಂದು ರೀತಿಯಲ್ಲಿ ಶಾಂತಿ ಕದಡುವ ಕೆಲಸವಾಗಿದೆ. ಕಾನೂನಿಗೆ ವಿರುದ್ಧವಾದ ಕೆಲಸವೆಂದು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

ನಾವು ಕೂಡ ಹಿಂದೂಗಳೇ, ನಾವೇನು ಬೇರೆಯವರಲ್ಲ

ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ವಿಚಾರವಾಗಿ ಮಾತನಾಡಿದ ಅವರು, ಪದೇ ಪದೇ ಇದನ್ನ ಹೇಳುತ್ತಿದ್ದಾರೆ. ಅದಕ್ಕೇನು ಹೆಚ್ಚು ಅರ್ಥ ಕಲ್ಪಿಸುವುದು ಇಲ್ಲ. ಪದೇ ಪದೇ ಕಾಂಗ್ರೆಸ್​ನವ್ರು, ರಾಜ್ಯ ಸರ್ಕಾರ ಹಿಂದೂ ವಿರೋಧಿಗಳು ಅಂತಾ ಹೇಳುತ್ತಿದ್ದಾರೆ. ಆದರೆ ನಾವು ಕೂಡ ಹೇಳುತ್ತಿದ್ದೇವೆ. ನಾವು ಕೂಡ ಹಿಂದೂಗಳೇ, ನಾವೇನು ಬೇರೆಯವರಲ್ಲ.

ಇದನ್ನೂ ಓದಿ: ರಾಷ್ಟ್ರಪತಿಗೆ ಏಕವಚನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಹುದ್ದೆಯಿಂದ ಕೂಡಲೇ ವಜಾ ಮಾಡುವಂತೆ ಕುಮಾರಸ್ವಾಮಿ ಆಗ್ರಹ

ನೀವು ಕಾನೂನಿನ ಚೌಕಟ್ಟಿನಲ್ಲಿರಿ ಅಂತಾ ನಾವು ಹೇಳುತ್ತಿದ್ದೇವೆ ಅಷ್ಟೇ ವ್ಯತ್ಯಾಸ ನಮಗೂ, ಅವರಿಗೂ. ಈ ರಾಜ್ಯದಲ್ಲಿ ಕಾನೂನಿದೆ, ಕಾನೂನನ್ನ ಮುರಿಯುವ ಕೆಲಸ ಮಾಡಬೇಕಡಿ ಎಂದು ನಾವು ಹೇಳುತ್ತಿದ್ದೇವೆ. ಅವರು ರಾಜಕೀಯ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಕೂಡ ಅಂಥದ್ದೇ ಒಂದು ಘಟನೆ. ಅದು ಪೂರ್ವನಿಯೋಜಿತನೋ, ಏನೋ ಅನ್ನೋದು ನನಗೆ ಗೊತ್ತಿಲ್ಲ. ಅವರು ಅನುಮತಿ ಪಡೆದಿದ್ದೆ ಬೇರೆಯದಕ್ಕೆ, ಮಾಡಿದ್ದೆ ಬೇರೆ ಎಂದಿದ್ದಾರೆ.

ರಾಷ್ಟ್ರಧ್ವಜ ಹಾಕುತ್ತೇವೆ ಎಂದು ಊರಿನವರೆಲ್ಲ ಹೇಳಿದ್ದು ಒಳ್ಳೆಯದೇ. ಆದರೆ ನಂತರ ಬೇರೆಯ ಧ್ವಜವನ್ನ ಹಾಕಿದ್ದಾರೆ. ಅದಾದ ಬಳಿಕ ಬೇರೆ ಬೇರೆಯವರು ಬೇರೆ ಧ್ವಜ ಹಾಕುತ್ತೇವೆ ಅಂತಾ ಹೇಳಿದ್ದಾರೆ. ಕೆಲವರು ಅಂಬೇಡ್ಕರ್, ಕೆಲವರು ಕೆಂಪೇಗೌಡ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಶಾಂತಿ ಕದಡುವ ಕೆಲಸ ಆಗಬಾರದು ಎಂದು ಹೇಳಿದ್ದಾರೆ.

ಜಾತಿಗಣತಿ ಪರ ಬ್ಯಾಟ್​ ಬೀಸಿದ ಸಚಿವ ಪರಮೇಶ್ವರ್

ಜಾತಿ‌ಗಣತಿ ವರದಿ ಸ್ವೀಕಾರ ಮಾಡ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ತುಮಕೂರಿನಲ್ಲಿ ಜಾತಿಗಣತಿ ಪರ ಸಚಿವ ಪರಮೇಶ್ವರ್ ಬ್ಯಾಟ್​ ಬೀಸಿದ್ದಾರೆ. ಜಾತಿಗಣತಿ ವರದಿ ಸ್ವೀಕರಿಸುವಂತೆ ನಾವೆಲ್ಲಾ ಒತ್ತಾಯ ಮಾಡಿದ್ದೇವೆ. ಸರ್ಕಾರದಿಂದ ಜಾತಿಗಣತಿಗಾಗಿ 168 ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ.

ಈಗ ಜಾತಿಗಣತಿ ವರದಿ ಕೊಟ್ಟಾಗ ಸರ್ಕಾರ ಸ್ವೀಕರಿಸಬೇಕು. ವಿಶ್ಲೇಷಣೆ, ಚರ್ಚೆ ಅದೆಲ್ಲವೂ ಆಮೇಲೆ. ವರದಿಯನ್ನೇ ತೆಗೆದುಕೊಳ್ಳಲ್ಲ ಅಂತಾ ಹೇಳೋಕಾಗಲ್ಲ. ಹಾಗಾಗಿ ನಾವು ಒತ್ತಾಯ ಮಾಡಿದ್ದೇವೆ, ಅದನ್ನೇ ಸಿಎಂ ಕೂಡ ಹೇಳಿದ್ದಾರೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ