AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾವಗಡ ಸೋಲಾರ್​ ಪಾರ್ಕ್​ ಯೋಜನೆಯಲ್ಲಿ ಅವ್ಯವಹಾರ: ಹೆಚ್​ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ

ಕಾಂಗ್ರೆಸ್ ಅವಧಿಯಲ್ಲಿ ಪಾವಗಡದಲ್ಲಿ ನಿರ್ಮಾಣವಾದ ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಪಾವಗಡ ಸೋಲಾರ್​ ಪಾರ್ಕ್​ ಯೋಜನೆಯಲ್ಲಿ ಅವ್ಯವಹಾರ: ಹೆಚ್​ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ
ಮಾಜಿ ಸಿಎಂ ಕುಮಾರಸ್ವಾಮಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 05, 2022 | 4:32 PM

Share

ತುಮಕೂರು: ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಆರೋಪ ಮಾಡಿದ್ದಾರೆ. ಜಿಲ್ಲೆಯ ಪಾವಗಡ ತಾಲೂಕಿನ ಅರಸೀಕೆರೆ ಗ್ರಾಮ ಅವರು ಮಾತನಾಡಿ, ಕಾಂಗ್ರೆಸ್ ಅವಧಿಯಲ್ಲಿ ಪಾವಗಡದ ಸೋಲಾರ್​ ಪಾರ್ಕ್​ ನಿರ್ಮಾಣ ಆಗಿದೆ. ಇದು ಭ್ರಷ್ಟಾಚಾರದ ಒಂದು ಭಾಗ. ಈಗಿನ ಸರ್ಕಾರ ಅಲ್ಲಿನ ಅವ್ಯವಹಾರವನ್ನು ಜನರ ಮುಂದಿಡಬೇಕು. ರೈತರ ಭೂಮಿ ದಾಖಲೆಗಳನ್ನು ತಿದ್ದುಪಡಿ ಅಕ್ರಮ ಮಾಡಿದ್ದಾರೆ. ಬಿಜೆಪಿ ಸರ್ಕಾರ ತನಿಖೆ ಮಾಡ್ತೀವಿ ಎಂದು ಬರೀ ಸುಳ್ಳು ಹೇಳುತ್ತಿದೆ. ಸರ್ಕಾರ ಪ್ರಾಮಾಣಿಕವಾಗಿ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಆಗ್ರಸಿದರು.

ಪಾವಗಡ ಸೋಲಾರ್ ಪಾರ್ಕ್ ಭ್ರಷ್ಟಾಚಾರ ವಿರುದ್ದ ಸರ್ಕಾರ ಪ್ರಾಮಾಣಿಕವಾಗಿ ತನಿಖೆ ಮಾಡಿ ಕ್ರಮ ಕೈಗೊಳ್ಳಲಿ. ಮಾಹಿತಿ ಇಟ್ಕೊಂಡು, ಇವರು ತನಿಖೆ ಕೇವಲ ಹೇಳಿಕೆಗಷ್ಟೇ ಸಿಮಿತವಾಗಿದೆ. 2016 ರಲ್ಲಿ ಸದನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಶಕ್ತಿ ಇಲಾಖೆಯಲ್ಲಿ ಆದಂತಹ ಭ್ರಷ್ಟಾಚಾರದ ವಿರುದ್ಧ ನಾನು ಸುಧೀರ್ಘವಾಗಿ ಮಾತನಾಡಿದ್ದೆ. ಆಗಿನ ಕಾಂಗ್ರೆಸ್ ಸರ್ಕಾರ ಸದನ ಸಮಿತಿ ರಚನೆ ಮಾಡಿತ್ತು. ಆದರೆ ಇಂಧನ ಸಚಿವರನ್ನೆ ಅಧ್ಯಕ್ಷರನ್ನಾಗಿ ಮಾಡಿ ಲೋಪ ಮಾಡಿತ್ತು.

ಇದನ್ನೂ ಓದಿ: ಜೆಡಿಎಸ್​ಗೆ ಬಹುಮತ ಬಂದರೆ ದಲಿತರಿಗೆ ಸಿಎಂ ಪಟ್ಟ: ಎಚ್​ಡಿ ಕುಮಾರಸ್ವಾಮಿ

ಕರ್ನಾಟಕದಲ್ಲಿ ಮರಾಠ ಭವನ ನಿರ್ಮಾಣ ಮಾಡುತ್ತೇವೆ ಎಂಬ ಮಹಾ ಸಚಿವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರ ಸರ್ಕಾರದ ಜಾಗ ಇದ್ರೆ ಕಟ್ಟಿಕೊಳ್ಳಲಿ. ಬಾಂಬೆಯಲ್ಲಿ ನಮ್ಮ ರಾಜ್ಯ ಸರ್ಕಾರದ ಕೋಟ್ಯಾಂತರ ರೂಪಾಯಿ ಆಸ್ತಿ ಇದೆ. ನಾವು ಅಲ್ಲಿ ಕರ್ನಾಟಕ ಭವನ ಅಥವಾ ಮರಾಠ ಭವನ ಕಟ್ಟಿದರೆ ಆಯ್ತು. ಜನರ ಭಾವನೆಯಲ್ಲಿ ಚೆಲ್ಲಾಟ ಬೇಡ. ಎರಡೂ ಸರ್ಕಾರಗಳು ಆಂತರಿಕವಾಗಿ ತೀರ್ಮಾನ ಮಾಡಿಕೊಂಡೆ ಪರಸ್ಪರ ಆರೋಪ ಪ್ರತ್ಯಾರೋಪದ ಹೇಳಿಕೆ ಕೊಡುತ್ತಿದ್ದಾರೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಭಾವನೆಗಳನ್ನ ಡೈವರ್ಟ್ ಮಾಡಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಹೆಚ್​.ಡಿ ಕುಮಾರಸ್ವಾಮಿ ಆರೋಪ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ