AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾವಗಡ ಸೋಲಾರ್​ ಪಾರ್ಕ್​ ಯೋಜನೆಯಲ್ಲಿ ಅವ್ಯವಹಾರ: ಹೆಚ್​ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ

ಕಾಂಗ್ರೆಸ್ ಅವಧಿಯಲ್ಲಿ ಪಾವಗಡದಲ್ಲಿ ನಿರ್ಮಾಣವಾದ ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಪಾವಗಡ ಸೋಲಾರ್​ ಪಾರ್ಕ್​ ಯೋಜನೆಯಲ್ಲಿ ಅವ್ಯವಹಾರ: ಹೆಚ್​ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ
ಮಾಜಿ ಸಿಎಂ ಕುಮಾರಸ್ವಾಮಿ
TV9 Web
| Edited By: |

Updated on: Dec 05, 2022 | 4:32 PM

Share

ತುಮಕೂರು: ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಆರೋಪ ಮಾಡಿದ್ದಾರೆ. ಜಿಲ್ಲೆಯ ಪಾವಗಡ ತಾಲೂಕಿನ ಅರಸೀಕೆರೆ ಗ್ರಾಮ ಅವರು ಮಾತನಾಡಿ, ಕಾಂಗ್ರೆಸ್ ಅವಧಿಯಲ್ಲಿ ಪಾವಗಡದ ಸೋಲಾರ್​ ಪಾರ್ಕ್​ ನಿರ್ಮಾಣ ಆಗಿದೆ. ಇದು ಭ್ರಷ್ಟಾಚಾರದ ಒಂದು ಭಾಗ. ಈಗಿನ ಸರ್ಕಾರ ಅಲ್ಲಿನ ಅವ್ಯವಹಾರವನ್ನು ಜನರ ಮುಂದಿಡಬೇಕು. ರೈತರ ಭೂಮಿ ದಾಖಲೆಗಳನ್ನು ತಿದ್ದುಪಡಿ ಅಕ್ರಮ ಮಾಡಿದ್ದಾರೆ. ಬಿಜೆಪಿ ಸರ್ಕಾರ ತನಿಖೆ ಮಾಡ್ತೀವಿ ಎಂದು ಬರೀ ಸುಳ್ಳು ಹೇಳುತ್ತಿದೆ. ಸರ್ಕಾರ ಪ್ರಾಮಾಣಿಕವಾಗಿ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಆಗ್ರಸಿದರು.

ಪಾವಗಡ ಸೋಲಾರ್ ಪಾರ್ಕ್ ಭ್ರಷ್ಟಾಚಾರ ವಿರುದ್ದ ಸರ್ಕಾರ ಪ್ರಾಮಾಣಿಕವಾಗಿ ತನಿಖೆ ಮಾಡಿ ಕ್ರಮ ಕೈಗೊಳ್ಳಲಿ. ಮಾಹಿತಿ ಇಟ್ಕೊಂಡು, ಇವರು ತನಿಖೆ ಕೇವಲ ಹೇಳಿಕೆಗಷ್ಟೇ ಸಿಮಿತವಾಗಿದೆ. 2016 ರಲ್ಲಿ ಸದನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಶಕ್ತಿ ಇಲಾಖೆಯಲ್ಲಿ ಆದಂತಹ ಭ್ರಷ್ಟಾಚಾರದ ವಿರುದ್ಧ ನಾನು ಸುಧೀರ್ಘವಾಗಿ ಮಾತನಾಡಿದ್ದೆ. ಆಗಿನ ಕಾಂಗ್ರೆಸ್ ಸರ್ಕಾರ ಸದನ ಸಮಿತಿ ರಚನೆ ಮಾಡಿತ್ತು. ಆದರೆ ಇಂಧನ ಸಚಿವರನ್ನೆ ಅಧ್ಯಕ್ಷರನ್ನಾಗಿ ಮಾಡಿ ಲೋಪ ಮಾಡಿತ್ತು.

ಇದನ್ನೂ ಓದಿ: ಜೆಡಿಎಸ್​ಗೆ ಬಹುಮತ ಬಂದರೆ ದಲಿತರಿಗೆ ಸಿಎಂ ಪಟ್ಟ: ಎಚ್​ಡಿ ಕುಮಾರಸ್ವಾಮಿ

ಕರ್ನಾಟಕದಲ್ಲಿ ಮರಾಠ ಭವನ ನಿರ್ಮಾಣ ಮಾಡುತ್ತೇವೆ ಎಂಬ ಮಹಾ ಸಚಿವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರ ಸರ್ಕಾರದ ಜಾಗ ಇದ್ರೆ ಕಟ್ಟಿಕೊಳ್ಳಲಿ. ಬಾಂಬೆಯಲ್ಲಿ ನಮ್ಮ ರಾಜ್ಯ ಸರ್ಕಾರದ ಕೋಟ್ಯಾಂತರ ರೂಪಾಯಿ ಆಸ್ತಿ ಇದೆ. ನಾವು ಅಲ್ಲಿ ಕರ್ನಾಟಕ ಭವನ ಅಥವಾ ಮರಾಠ ಭವನ ಕಟ್ಟಿದರೆ ಆಯ್ತು. ಜನರ ಭಾವನೆಯಲ್ಲಿ ಚೆಲ್ಲಾಟ ಬೇಡ. ಎರಡೂ ಸರ್ಕಾರಗಳು ಆಂತರಿಕವಾಗಿ ತೀರ್ಮಾನ ಮಾಡಿಕೊಂಡೆ ಪರಸ್ಪರ ಆರೋಪ ಪ್ರತ್ಯಾರೋಪದ ಹೇಳಿಕೆ ಕೊಡುತ್ತಿದ್ದಾರೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಭಾವನೆಗಳನ್ನ ಡೈವರ್ಟ್ ಮಾಡಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಹೆಚ್​.ಡಿ ಕುಮಾರಸ್ವಾಮಿ ಆರೋಪ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ