AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಬರದಂತೆ ಔಷಧಿ ಕೊಡುತ್ತೇನೆ ಎಂದು ವಂಚನೆ; ನಕಲಿ ಕ್ಲಿನಿಕ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ

ಸಣ್ಣ ಜ್ವರಕ್ಕೂ ಓಮಿಕ್ರಾನ್ ಲಕ್ಷಣ ಎಂದು ಹೆದರಿಸುತಿದ್ದ ನಕಲಿ ವೈದ್ಯ ಸಾದತ್ ಕ್ಲಿನಿಕ್​ ಮೇಲೆ ಇಂದು (ಡಿಸೆಂಬರ್​ 19) ಡಿಹೆಚ್​ಒ ಡಾ.ನಾಗೇಂದ್ರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ನಕಲಿ ವೈದ್ಯ ಸಾದತ್ ಪರಾರಿಯಾಗಿದ್ದಾನೆ.

ಒಮಿಕ್ರಾನ್ ಬರದಂತೆ ಔಷಧಿ ಕೊಡುತ್ತೇನೆ ಎಂದು ವಂಚನೆ; ನಕಲಿ ಕ್ಲಿನಿಕ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ
ನಕಲಿ ವೈದ್ಯ ಸಾದತ್
TV9 Web
| Edited By: |

Updated on: Dec 19, 2021 | 3:01 PM

Share

ತುಮಕೂರು: ಒಮಿಕ್ರಾನ್ ಬರದಂತೆ ಔಷಧಿ ಕೊಡುತ್ತೇನೆ ಎಂದು ವಂಚನೆ ಮಾಡುತ್ತಿದ್ದ ನಕಲಿ ಕ್ಲಿನಿಕ್​ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ದಸೂಡಿ ಗ್ರಾಮದಲ್ಲಿ ಖಲಂದರಿಯಾ ಮೆಡಿಕಲ್ ಹೆಸರಿನಲ್ಲಿ ಸಾದತ್ ಎಂಬ ನಕಲಿ ವೈದ್ಯ ​ ಚಿಕಿತ್ಸೆ ನೀಡುತ್ತಿದ್ದ. ಸಣ್ಣ ಜ್ವರಕ್ಕೂ ಓಮಿಕ್ರಾನ್ (Omicron) ಲಕ್ಷಣ ಎಂದು ಹೆದರಿಸುತಿದ್ದ ನಕಲಿ ವೈದ್ಯ ಸಾದತ್ ಕ್ಲಿನಿಕ್​ ಮೇಲೆ ಇಂದು (ಡಿಸೆಂಬರ್​ 19) ಡಿಹೆಚ್​ಒ ಡಾ.ನಾಗೇಂದ್ರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ನಕಲಿ ವೈದ್ಯ ಸಾದತ್ ಪರಾರಿಯಾಗಿದ್ದಾನೆ.

ಬಿಫಾರ್ಮಾ ಮಾಡಿಕೊಂಡಿದ್ದ ಸಾದತ್ ತಾನು ಎಮ್​ಎಸ್​ ಮಾಡಿದ್ದೇನೆಂದು ಸುಳ್ಳು ಹೇಳಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ. ಕಾನೂನು ಸಚಿವ ಮಾಧುಸ್ವಾಮಿ ಕ್ಷೇತ್ರದಲ್ಲಿ ಓಮಿಕ್ರಾನ್ ಹೆಸರಿನಲ್ಲಿ ವಂಚನೆ ಮಾಡುತ್ತಿರುವುದು ಸದ್ಯ ಇನ್ನಿತರ ಜಿಲ್ಲೆಯಲ್ಲಿನ ಇಂತಹ ಕೃತ್ಯಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.

ಕೊಪ್ಪಳ: ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ ಪಿಎಸ್ಐ ಮಹಿಳೆಯರಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಆರೋಪ ಕೇಳಿಬಂದಿದೆ. ಪಿಎಸ್ಐ ಮುತ್ತಪ್ಪ ವಿರುದ್ಧ ಹಲವು ಮಹಿಳೆಯರು ಆರೋಪಿಸಿದ್ದಾರೆ. ಕೊಪ್ಪಳ ಫಿಂಗರ್ ಪ್ರಿಂಟ್ ವಿಭಾಗದ ಪಿಎಸ್ಐ ಮುತ್ತಪ್ಪ ಬಡಿಗೇರ್ ವಿರುದ್ಧ ಮೋಸ ಹೋದವರು ಎಸ್​ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆ ಪಿಎಸ್ಐ ವಿರುದ್ಧ ಕ್ರಮಕ್ಕೆ ಫಿಂಗರ್ ಪ್ರಿಂಟ್ ವಿಭಾಗದ ಎಡಿಜಿಗೆ ಪತ್ರ ಬರೆಯಲಾಗಿದೆ. ಈ ಹಿಂದೆ ಮುತ್ತಪ್ಪನಿಗೆ ಕೊಪ್ಪಳ ಎಸ್​ಪಿ ಟಿ.ಶ್ರೀಧರ್ 2 ಬಾರಿ ವಾರ್ನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪಿಎಸ್ಐ ಸುಮಾರು ನಾಲ್ಕೈದು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್​ಪಿ ಕಚೇರಿಗೆ ಆಗಮಿಸಿ ಮಹಿಳೆಯರು ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ವಧು ನೋಡುವ ನೆಪದಲ್ಲಿ ಬಂದು ಮುತ್ತಪ್ಪ ಯಾಮಾರಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ನಿನ್ನೆ ಮಹಿಳೆಯೊಬ್ಬರ ಕುಟುಂಬದಿಂದ ಎಸ್​ಪಿ ಅವರಿಗೆ ಮೌಖಿಕ ದೂರು ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಎಸ್​ಪಿ ಕಚೇರಿಯಿಂದ ಮುತ್ತಣ್ಣ ಬಡಿಗೇರ್ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ ಶಿವಮೊಗ್ಗದ ರೈಲ್ವೆ ಸ್ಟೇಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. 1 ಕೆಜಿ 59 ಗ್ರಾಂ ತೂಕದ ಒಣ ಗಾಂಜಾ, 5 ಮೊಬೈಲ್ ಫೋನ್, 500 ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ 2 ದ್ವಿಚಕ್ರ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೀನ್, ಪ್ರದೀಪ್, ಗಿರೀಶ್, ಬಸವರಾಜಪ್ಪ ವಿರುದ್ಧ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ

ನಕಲಿ ಚಿನ್ನದ ನಾಣ್ಯ ಮಾರಾಟ: 1 ಕೆಜಿ ನಾಣ್ಯವನ್ನು 11 ಲಕ್ಷ ರೂ.ಗೆ ನೀಡಿ ರೈತರಿಬ್ಬರಿಗೆ ವಂಚನೆ

ಇರೋದು 4 ಆದ್ರೆ 35 ವಿದ್ಯಾರ್ಥಿನಿಯರ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ, ತಹಶೀಲ್ದಾರ್ ದಾಳಿಯಿಂದ ಅಕ್ರಮ ಬಯಲು

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!