AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಬರದಂತೆ ಔಷಧಿ ಕೊಡುತ್ತೇನೆ ಎಂದು ವಂಚನೆ; ನಕಲಿ ಕ್ಲಿನಿಕ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ

ಸಣ್ಣ ಜ್ವರಕ್ಕೂ ಓಮಿಕ್ರಾನ್ ಲಕ್ಷಣ ಎಂದು ಹೆದರಿಸುತಿದ್ದ ನಕಲಿ ವೈದ್ಯ ಸಾದತ್ ಕ್ಲಿನಿಕ್​ ಮೇಲೆ ಇಂದು (ಡಿಸೆಂಬರ್​ 19) ಡಿಹೆಚ್​ಒ ಡಾ.ನಾಗೇಂದ್ರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ನಕಲಿ ವೈದ್ಯ ಸಾದತ್ ಪರಾರಿಯಾಗಿದ್ದಾನೆ.

ಒಮಿಕ್ರಾನ್ ಬರದಂತೆ ಔಷಧಿ ಕೊಡುತ್ತೇನೆ ಎಂದು ವಂಚನೆ; ನಕಲಿ ಕ್ಲಿನಿಕ್ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ
ನಕಲಿ ವೈದ್ಯ ಸಾದತ್
TV9 Web
| Edited By: |

Updated on: Dec 19, 2021 | 3:01 PM

Share

ತುಮಕೂರು: ಒಮಿಕ್ರಾನ್ ಬರದಂತೆ ಔಷಧಿ ಕೊಡುತ್ತೇನೆ ಎಂದು ವಂಚನೆ ಮಾಡುತ್ತಿದ್ದ ನಕಲಿ ಕ್ಲಿನಿಕ್​ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ದಸೂಡಿ ಗ್ರಾಮದಲ್ಲಿ ಖಲಂದರಿಯಾ ಮೆಡಿಕಲ್ ಹೆಸರಿನಲ್ಲಿ ಸಾದತ್ ಎಂಬ ನಕಲಿ ವೈದ್ಯ ​ ಚಿಕಿತ್ಸೆ ನೀಡುತ್ತಿದ್ದ. ಸಣ್ಣ ಜ್ವರಕ್ಕೂ ಓಮಿಕ್ರಾನ್ (Omicron) ಲಕ್ಷಣ ಎಂದು ಹೆದರಿಸುತಿದ್ದ ನಕಲಿ ವೈದ್ಯ ಸಾದತ್ ಕ್ಲಿನಿಕ್​ ಮೇಲೆ ಇಂದು (ಡಿಸೆಂಬರ್​ 19) ಡಿಹೆಚ್​ಒ ಡಾ.ನಾಗೇಂದ್ರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ನಕಲಿ ವೈದ್ಯ ಸಾದತ್ ಪರಾರಿಯಾಗಿದ್ದಾನೆ.

ಬಿಫಾರ್ಮಾ ಮಾಡಿಕೊಂಡಿದ್ದ ಸಾದತ್ ತಾನು ಎಮ್​ಎಸ್​ ಮಾಡಿದ್ದೇನೆಂದು ಸುಳ್ಳು ಹೇಳಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ. ಕಾನೂನು ಸಚಿವ ಮಾಧುಸ್ವಾಮಿ ಕ್ಷೇತ್ರದಲ್ಲಿ ಓಮಿಕ್ರಾನ್ ಹೆಸರಿನಲ್ಲಿ ವಂಚನೆ ಮಾಡುತ್ತಿರುವುದು ಸದ್ಯ ಇನ್ನಿತರ ಜಿಲ್ಲೆಯಲ್ಲಿನ ಇಂತಹ ಕೃತ್ಯಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.

ಕೊಪ್ಪಳ: ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ ಪಿಎಸ್ಐ ಮಹಿಳೆಯರಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಆರೋಪ ಕೇಳಿಬಂದಿದೆ. ಪಿಎಸ್ಐ ಮುತ್ತಪ್ಪ ವಿರುದ್ಧ ಹಲವು ಮಹಿಳೆಯರು ಆರೋಪಿಸಿದ್ದಾರೆ. ಕೊಪ್ಪಳ ಫಿಂಗರ್ ಪ್ರಿಂಟ್ ವಿಭಾಗದ ಪಿಎಸ್ಐ ಮುತ್ತಪ್ಪ ಬಡಿಗೇರ್ ವಿರುದ್ಧ ಮೋಸ ಹೋದವರು ಎಸ್​ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆ ಪಿಎಸ್ಐ ವಿರುದ್ಧ ಕ್ರಮಕ್ಕೆ ಫಿಂಗರ್ ಪ್ರಿಂಟ್ ವಿಭಾಗದ ಎಡಿಜಿಗೆ ಪತ್ರ ಬರೆಯಲಾಗಿದೆ. ಈ ಹಿಂದೆ ಮುತ್ತಪ್ಪನಿಗೆ ಕೊಪ್ಪಳ ಎಸ್​ಪಿ ಟಿ.ಶ್ರೀಧರ್ 2 ಬಾರಿ ವಾರ್ನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪಿಎಸ್ಐ ಸುಮಾರು ನಾಲ್ಕೈದು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್​ಪಿ ಕಚೇರಿಗೆ ಆಗಮಿಸಿ ಮಹಿಳೆಯರು ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ವಧು ನೋಡುವ ನೆಪದಲ್ಲಿ ಬಂದು ಮುತ್ತಪ್ಪ ಯಾಮಾರಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ನಿನ್ನೆ ಮಹಿಳೆಯೊಬ್ಬರ ಕುಟುಂಬದಿಂದ ಎಸ್​ಪಿ ಅವರಿಗೆ ಮೌಖಿಕ ದೂರು ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಎಸ್​ಪಿ ಕಚೇರಿಯಿಂದ ಮುತ್ತಣ್ಣ ಬಡಿಗೇರ್ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ ಶಿವಮೊಗ್ಗದ ರೈಲ್ವೆ ಸ್ಟೇಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. 1 ಕೆಜಿ 59 ಗ್ರಾಂ ತೂಕದ ಒಣ ಗಾಂಜಾ, 5 ಮೊಬೈಲ್ ಫೋನ್, 500 ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ 2 ದ್ವಿಚಕ್ರ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೀನ್, ಪ್ರದೀಪ್, ಗಿರೀಶ್, ಬಸವರಾಜಪ್ಪ ವಿರುದ್ಧ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ

ನಕಲಿ ಚಿನ್ನದ ನಾಣ್ಯ ಮಾರಾಟ: 1 ಕೆಜಿ ನಾಣ್ಯವನ್ನು 11 ಲಕ್ಷ ರೂ.ಗೆ ನೀಡಿ ರೈತರಿಬ್ಬರಿಗೆ ವಂಚನೆ

ಇರೋದು 4 ಆದ್ರೆ 35 ವಿದ್ಯಾರ್ಥಿನಿಯರ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ, ತಹಶೀಲ್ದಾರ್ ದಾಳಿಯಿಂದ ಅಕ್ರಮ ಬಯಲು

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?